Homeಮುಖಪುಟಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಬಂಧನಕ್ಕೂ ಮುನ್ನ ಪತ್ರಕರ್ತ ಮಂದೀಪ್ ಪುನಿಯಾ ’ಬಿಜೆಪಿಯು ದೆಹಲಿ ಪೊಲೀಸರೊಂದಿಗೆ ಸೇರಿಕೊಂಡು ಹಿಂಸಾಚಾರ ನಡೆಸಲು ಸಿದ್ದತೆ ನಡೆಸಿದೆ ಎಂದು ಆರೋಪಿಸಿದ್ದರು. ಇದರ ಕುರಿತು ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸತ್ಯಕ್ಕೆ ಹೆದರುವವರು ನಿಜವಾದ ಪತ್ರಕರ್ತರನ್ನು ಬಂಧಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದೇ ರೀತಿಯಲ್ಲಿ ಧರ್ಮೇಂಧರ್ ಸಿಂಗ್ ಎಂಬುವವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದು ಆ ನಂತರ ಆತ ತನ್ನ ಗುರುತಿನ ಚೀಟಿ ತೋರಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ಸಿಂಘು ಗಡಿಯಲ್ಲಿ ದೆಹಲಿಯ ಭಾಗಕ್ಕೆ ಬರುವ ಮತ್ತು ಕೆಲವೇ ಸಾವಿರ ಸಂಖ್ಯೆಯಲ್ಲಿರುವ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ರೈತರು ಪ್ರತಿಭಟನೆ ನಡೆಸುವ ಸ್ಥಳಕ್ಕೆ 50-60 ಜನರ ಗುಂಪೊಂದು ಘೋಷಣೆ ಕೂಗುತ್ತಾ ಬಂದಿತು. 5000-6000 ಸಂಖ್ಯೆಯಲ್ಲಿ ಪೊಲೀಸರು ನೆರೆದಿದ್ದರೂ ಅವರು ಪ್ರತಿಭಟನಾಕಾರರನ್ನು ಒಳಕೆ ಬಿಟ್ಟರು. ನಂತರ ಅವರು ರೈತರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಮುಖ ಪ್ರೇಕ್ಷಕರಾಗಿದ್ದರು ಎಂದು ಮಂದೀಪ್ ಪುನಿಯಾ ಆರೋಪಿಸಿದ್ದರು.

ಈ ಕಾರಣಕ್ಕಾಗಿಯೇ ಅವರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಸಿಂಘು ಗಡಿಯಲ್ಲಿನ ಸ್ಟೇಷನ್ ಹೌಸ್ ಆಫೀಸರ್ ಜೊತೆ ಪತ್ರಕರ್ತ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಯುಂಟುಮಾಡುವುದು), 332 (ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡುವುದು) ಅಡಿಯಲ್ಲಿ ಮಂದೀಪ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಾವು ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಕಾರವಾನ್ ನಿಯತಕಾಲಿಕೆಯ ರಾಜಕೀಯ ಸಂಪಾದಕ ಹರ್ತೋಶ್ ಸಿಂಗ್ ಬಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...