Homeಚಳವಳಿ"ಇದು ಮಾಧ್ಯಮ ಸ್ವಾತಂತ್ರ್ಯದ ದಮನ" : ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಖಂಡಿಸಿ ಪ್ರತಿಭಟನೆ

“ಇದು ಮಾಧ್ಯಮ ಸ್ವಾತಂತ್ರ್ಯದ ದಮನ” : ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಕಾಶ್ಮೀರದಲ್ಲಿ 370 ಆರ್ಟಿಕಲ್ ರದ್ದುಗೊಳಿಸಿದ ನಂತರ ಮಾಧ್ಯಮ ಸ್ವಾತಂತ್ರ್ಯವನ್ನು ನಿಗ್ರಹಿಸಲಾಗಿದೆ. ಕಾಶ್ಮೀರ ವಿಶೇಷಾಧಿಕಾರ ರದ್ದಾಗಿ 60 ದಿನಗಳು ಕಳೆದರೂ ಪತ್ರಕರ್ತರ ಮೇಲಿನ ನಿಷೇಧ ಮಾತ್ರ ತೆರವಾಗಿಲ್ಲ. ಸಂವಹನ ಮಾಧ್ಯಮದ ಮೇಲಿನ ನಿರ್ಬಂಧ ವಿರೋಧಿಸಿ, ಕಾಶ್ಮೀರ ಪತ್ರಕರ್ತರು ಶ್ರೀನಗರದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.

ಇದು ಕಾಶ್ಮೀರದಿಂದ ಹೊರಗಿನ ಪ್ರಪಂಚಕ್ಕೆ ಮಾಹಿತಿ ಹರಿವು ತಡೆಯಲು ಉದ್ದೇಶಪೂರ್ವಕವಾಗಿ ಮಾಡುತ್ತಿರುವ ಪ್ರಯತ್ನ ಎಂದು ಪತ್ರಕರ್ತರು ಆರೋಪಿಸಿದರು. ವಿವಿಧ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಒಟ್ಟುಗೂಡಿ, ಪ್ರೆಸ್ ಕ್ಲಬ್ ಎದುರು ಭಿತ್ತಿಫಲಕ ಮತ್ತು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಕಾಶ್ಮೀರದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧ ತೆಗೆದು ಹಾಕುವಂತೆ ಒತ್ತಾಯಿಸಿದರು.

ಹಿರಿಯ ಪತ್ರಕರ್ತ ನಾಸೀರ್ ಎ. ಮಾತನಾಡಿ, ಇಂಟರ್ನೆಟ್ ಹಾಗೂ ಮೊಬೈಲ್ ಸೇವೆ ನಿರ್ಬಂಧದಿಂದಾಗಿ ಕಾಶ್ಮೀರದ ಸ್ಥಿತಿಗತಿಯ ಬಗ್ಗೆ ವರದಿ ಮಾಡಲು ಸಾಕಷ್ಟು ತೊಂದರೆಯಾಗಿದೆ. ಕಾಶ್ಮೀರದ ಮಾಧ್ಯಮದವರ ಸ್ವಾತಂತ್ರ್ಯವನ್ನು ದಮನ ಮಾಡಲಾಗುತ್ತಿದೆ. ಹೊರ ಜಗತ್ತಿಗೆ ಕಾಶ್ಮೀರದ ಸ್ಥಿತಿಗತಿಯ ವರದಿ ತಲುಪದಂತೆ ಮಾಡಲು ನಿರ್ಬಂಧಿಸಲಾಗುತ್ತಿದೆ ಎಂದರು.

ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಹೇರುವುದು ತಮಾಷೆಯ ವಿಷಯವಾಗಿದೆ. ದಿನಪತ್ರಿಕೆ ಹಾಗೂ ವಾರ ಪತ್ರಿಕೆಗಳು ಸರಿಯಾಗಿ ಪಬ್ಲಿಷ್ ಆಗುತ್ತಿಲ್ಲ. ಕೆಲವು ಪತ್ರಿಕೆಗಳು ಪುಟಗಳ ಸಂಖ್ಯೆಯನ್ನೂ ಕಡಿತಗೊಳಿಸಿವೆ. ಇಂಟರ್ನೆಟ್ ಇಲ್ಲದೇ ಆನ್ ಲೈನ್ ಗೆ ಸುದ್ದಿ ಅಪ್ ಡೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಕಾಶ್ಮೀರದ ವಿವಿಧ ಭಾಗಗಳಲ್ಲಿರುವ ವರದಿಗಾರರು ಕೆಲಸವಿಲ್ಲದೇ ಕುಳಿತಿದ್ದಾರೆ.

ಇಂಟರ್ನೆಟ್ ಕೇಂದ್ರವು ಒಂದೇ ಸಂಪರ್ಕ ಹೊಂದಿದ್ದು, ಒಂಭತ್ತು ಟರ್ಮಿನಲ್ ಗಳನ್ನು ಹೊಂದಿದೆ, ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ವರದಿ ಕಳುಹಿಸಲು ಮತ್ತು ಇಮೇಲ್ ಪರಿಶೀಲಿಸಲು ತಮ್ಮ ಸರದಿಗಾಗಿ ಕ್ಯೂನಲ್ಲಿ ನಿಂತು ಕಾಯಬೇಕು. ಮಾಹಿತಿ ಕೇಂದ್ರದಿಂದ ಈ ಅವಕಾಶ ಮಾಡಿಕೊಡಲಾಗಿದೆ. ಒಬ್ಬ ಪತ್ರಕರ್ತ 15 ನಿಮಿಷ ಇಂಟರ್ನೆಟ್ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...