Homeಚಳವಳಿ"ಇದು ಮಾಧ್ಯಮ ಸ್ವಾತಂತ್ರ್ಯದ ದಮನ" : ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಖಂಡಿಸಿ ಪ್ರತಿಭಟನೆ

“ಇದು ಮಾಧ್ಯಮ ಸ್ವಾತಂತ್ರ್ಯದ ದಮನ” : ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಕಾಶ್ಮೀರದಲ್ಲಿ 370 ಆರ್ಟಿಕಲ್ ರದ್ದುಗೊಳಿಸಿದ ನಂತರ ಮಾಧ್ಯಮ ಸ್ವಾತಂತ್ರ್ಯವನ್ನು ನಿಗ್ರಹಿಸಲಾಗಿದೆ. ಕಾಶ್ಮೀರ ವಿಶೇಷಾಧಿಕಾರ ರದ್ದಾಗಿ 60 ದಿನಗಳು ಕಳೆದರೂ ಪತ್ರಕರ್ತರ ಮೇಲಿನ ನಿಷೇಧ ಮಾತ್ರ ತೆರವಾಗಿಲ್ಲ. ಸಂವಹನ ಮಾಧ್ಯಮದ ಮೇಲಿನ ನಿರ್ಬಂಧ ವಿರೋಧಿಸಿ, ಕಾಶ್ಮೀರ ಪತ್ರಕರ್ತರು ಶ್ರೀನಗರದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.

ಇದು ಕಾಶ್ಮೀರದಿಂದ ಹೊರಗಿನ ಪ್ರಪಂಚಕ್ಕೆ ಮಾಹಿತಿ ಹರಿವು ತಡೆಯಲು ಉದ್ದೇಶಪೂರ್ವಕವಾಗಿ ಮಾಡುತ್ತಿರುವ ಪ್ರಯತ್ನ ಎಂದು ಪತ್ರಕರ್ತರು ಆರೋಪಿಸಿದರು. ವಿವಿಧ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಒಟ್ಟುಗೂಡಿ, ಪ್ರೆಸ್ ಕ್ಲಬ್ ಎದುರು ಭಿತ್ತಿಫಲಕ ಮತ್ತು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಕಾಶ್ಮೀರದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧ ತೆಗೆದು ಹಾಕುವಂತೆ ಒತ್ತಾಯಿಸಿದರು.

ಹಿರಿಯ ಪತ್ರಕರ್ತ ನಾಸೀರ್ ಎ. ಮಾತನಾಡಿ, ಇಂಟರ್ನೆಟ್ ಹಾಗೂ ಮೊಬೈಲ್ ಸೇವೆ ನಿರ್ಬಂಧದಿಂದಾಗಿ ಕಾಶ್ಮೀರದ ಸ್ಥಿತಿಗತಿಯ ಬಗ್ಗೆ ವರದಿ ಮಾಡಲು ಸಾಕಷ್ಟು ತೊಂದರೆಯಾಗಿದೆ. ಕಾಶ್ಮೀರದ ಮಾಧ್ಯಮದವರ ಸ್ವಾತಂತ್ರ್ಯವನ್ನು ದಮನ ಮಾಡಲಾಗುತ್ತಿದೆ. ಹೊರ ಜಗತ್ತಿಗೆ ಕಾಶ್ಮೀರದ ಸ್ಥಿತಿಗತಿಯ ವರದಿ ತಲುಪದಂತೆ ಮಾಡಲು ನಿರ್ಬಂಧಿಸಲಾಗುತ್ತಿದೆ ಎಂದರು.

ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಹೇರುವುದು ತಮಾಷೆಯ ವಿಷಯವಾಗಿದೆ. ದಿನಪತ್ರಿಕೆ ಹಾಗೂ ವಾರ ಪತ್ರಿಕೆಗಳು ಸರಿಯಾಗಿ ಪಬ್ಲಿಷ್ ಆಗುತ್ತಿಲ್ಲ. ಕೆಲವು ಪತ್ರಿಕೆಗಳು ಪುಟಗಳ ಸಂಖ್ಯೆಯನ್ನೂ ಕಡಿತಗೊಳಿಸಿವೆ. ಇಂಟರ್ನೆಟ್ ಇಲ್ಲದೇ ಆನ್ ಲೈನ್ ಗೆ ಸುದ್ದಿ ಅಪ್ ಡೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಕಾಶ್ಮೀರದ ವಿವಿಧ ಭಾಗಗಳಲ್ಲಿರುವ ವರದಿಗಾರರು ಕೆಲಸವಿಲ್ಲದೇ ಕುಳಿತಿದ್ದಾರೆ.

ಇಂಟರ್ನೆಟ್ ಕೇಂದ್ರವು ಒಂದೇ ಸಂಪರ್ಕ ಹೊಂದಿದ್ದು, ಒಂಭತ್ತು ಟರ್ಮಿನಲ್ ಗಳನ್ನು ಹೊಂದಿದೆ, ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ವರದಿ ಕಳುಹಿಸಲು ಮತ್ತು ಇಮೇಲ್ ಪರಿಶೀಲಿಸಲು ತಮ್ಮ ಸರದಿಗಾಗಿ ಕ್ಯೂನಲ್ಲಿ ನಿಂತು ಕಾಯಬೇಕು. ಮಾಹಿತಿ ಕೇಂದ್ರದಿಂದ ಈ ಅವಕಾಶ ಮಾಡಿಕೊಡಲಾಗಿದೆ. ಒಬ್ಬ ಪತ್ರಕರ್ತ 15 ನಿಮಿಷ ಇಂಟರ್ನೆಟ್ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...