Homeಚಳವಳಿ"ಇದು ಮಾಧ್ಯಮ ಸ್ವಾತಂತ್ರ್ಯದ ದಮನ" : ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಖಂಡಿಸಿ ಪ್ರತಿಭಟನೆ

“ಇದು ಮಾಧ್ಯಮ ಸ್ವಾತಂತ್ರ್ಯದ ದಮನ” : ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಕಾಶ್ಮೀರದಲ್ಲಿ 370 ಆರ್ಟಿಕಲ್ ರದ್ದುಗೊಳಿಸಿದ ನಂತರ ಮಾಧ್ಯಮ ಸ್ವಾತಂತ್ರ್ಯವನ್ನು ನಿಗ್ರಹಿಸಲಾಗಿದೆ. ಕಾಶ್ಮೀರ ವಿಶೇಷಾಧಿಕಾರ ರದ್ದಾಗಿ 60 ದಿನಗಳು ಕಳೆದರೂ ಪತ್ರಕರ್ತರ ಮೇಲಿನ ನಿಷೇಧ ಮಾತ್ರ ತೆರವಾಗಿಲ್ಲ. ಸಂವಹನ ಮಾಧ್ಯಮದ ಮೇಲಿನ ನಿರ್ಬಂಧ ವಿರೋಧಿಸಿ, ಕಾಶ್ಮೀರ ಪತ್ರಕರ್ತರು ಶ್ರೀನಗರದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.

ಇದು ಕಾಶ್ಮೀರದಿಂದ ಹೊರಗಿನ ಪ್ರಪಂಚಕ್ಕೆ ಮಾಹಿತಿ ಹರಿವು ತಡೆಯಲು ಉದ್ದೇಶಪೂರ್ವಕವಾಗಿ ಮಾಡುತ್ತಿರುವ ಪ್ರಯತ್ನ ಎಂದು ಪತ್ರಕರ್ತರು ಆರೋಪಿಸಿದರು. ವಿವಿಧ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಒಟ್ಟುಗೂಡಿ, ಪ್ರೆಸ್ ಕ್ಲಬ್ ಎದುರು ಭಿತ್ತಿಫಲಕ ಮತ್ತು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಕಾಶ್ಮೀರದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧ ತೆಗೆದು ಹಾಕುವಂತೆ ಒತ್ತಾಯಿಸಿದರು.

ಹಿರಿಯ ಪತ್ರಕರ್ತ ನಾಸೀರ್ ಎ. ಮಾತನಾಡಿ, ಇಂಟರ್ನೆಟ್ ಹಾಗೂ ಮೊಬೈಲ್ ಸೇವೆ ನಿರ್ಬಂಧದಿಂದಾಗಿ ಕಾಶ್ಮೀರದ ಸ್ಥಿತಿಗತಿಯ ಬಗ್ಗೆ ವರದಿ ಮಾಡಲು ಸಾಕಷ್ಟು ತೊಂದರೆಯಾಗಿದೆ. ಕಾಶ್ಮೀರದ ಮಾಧ್ಯಮದವರ ಸ್ವಾತಂತ್ರ್ಯವನ್ನು ದಮನ ಮಾಡಲಾಗುತ್ತಿದೆ. ಹೊರ ಜಗತ್ತಿಗೆ ಕಾಶ್ಮೀರದ ಸ್ಥಿತಿಗತಿಯ ವರದಿ ತಲುಪದಂತೆ ಮಾಡಲು ನಿರ್ಬಂಧಿಸಲಾಗುತ್ತಿದೆ ಎಂದರು.

ಕಾಶ್ಮೀರದಲ್ಲಿ ಪತ್ರಕರ್ತರ ಮೇಲೆ ನಿರ್ಬಂಧ ಹೇರುವುದು ತಮಾಷೆಯ ವಿಷಯವಾಗಿದೆ. ದಿನಪತ್ರಿಕೆ ಹಾಗೂ ವಾರ ಪತ್ರಿಕೆಗಳು ಸರಿಯಾಗಿ ಪಬ್ಲಿಷ್ ಆಗುತ್ತಿಲ್ಲ. ಕೆಲವು ಪತ್ರಿಕೆಗಳು ಪುಟಗಳ ಸಂಖ್ಯೆಯನ್ನೂ ಕಡಿತಗೊಳಿಸಿವೆ. ಇಂಟರ್ನೆಟ್ ಇಲ್ಲದೇ ಆನ್ ಲೈನ್ ಗೆ ಸುದ್ದಿ ಅಪ್ ಡೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಕಾಶ್ಮೀರದ ವಿವಿಧ ಭಾಗಗಳಲ್ಲಿರುವ ವರದಿಗಾರರು ಕೆಲಸವಿಲ್ಲದೇ ಕುಳಿತಿದ್ದಾರೆ.

ಇಂಟರ್ನೆಟ್ ಕೇಂದ್ರವು ಒಂದೇ ಸಂಪರ್ಕ ಹೊಂದಿದ್ದು, ಒಂಭತ್ತು ಟರ್ಮಿನಲ್ ಗಳನ್ನು ಹೊಂದಿದೆ, ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ವರದಿ ಕಳುಹಿಸಲು ಮತ್ತು ಇಮೇಲ್ ಪರಿಶೀಲಿಸಲು ತಮ್ಮ ಸರದಿಗಾಗಿ ಕ್ಯೂನಲ್ಲಿ ನಿಂತು ಕಾಯಬೇಕು. ಮಾಹಿತಿ ಕೇಂದ್ರದಿಂದ ಈ ಅವಕಾಶ ಮಾಡಿಕೊಡಲಾಗಿದೆ. ಒಬ್ಬ ಪತ್ರಕರ್ತ 15 ನಿಮಿಷ ಇಂಟರ್ನೆಟ್ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...