Homeಅಂತರಾಷ್ಟ್ರೀಯಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

ಆರೋಗ್ಯ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರದ ಪ್ರತಿಕ್ರಿಯೆಯಲ್ಲಿನ ನ್ಯೂನತೆಯನ್ನು ಬಹಿರಂಗಪಡಿಸಿದ ಭಾರತದ ಪತ್ರಕರ್ತರನ್ನು ಶಮನಗೊಳಿಸಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಎರಡು ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು ಪ್ರಧಾನಿ ನರೇಂದ್ರ ಮೋದಿಗೆ ಜಂಟಿ ಪತ್ರ ಬರೆದಿದ್ದು, “ಪತ್ರಕರ್ತರು, ಕಿರುಕುಳ ಮತ್ತು ಪ್ರತೀಕಾರದ ಭಯವಿಲ್ಲದೆ ಕೆಲಸ ಮಾಡುವುದಕ್ಕೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಆಸ್ಟ್ರಿಯಾ ಮೂಲದ ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ (ಐಪಿಐ) ಮತ್ತು ಬೆಲ್ಜಿಯಂ ಮೂಲದ ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ಜರ್ನಲಿಸ್ಟ್ಸ್ (ಐಎಫ್‌ಜೆ) ಎಂಬ ಎರಡು ಪತ್ರಿಕಾ ಸಂಘಗಳು ಮಂಗಳವಾರ ಬರೆದಿರುವ ಪತ್ರದಲ್ಲಿ, “ಪತ್ರಕರ್ತರ ಮೇಲೆ ದೇಶದ್ರೋಹ ಕಾನೂನುಗಳನ್ನು ಹೇರಿ ಅವರ ಕೆಲಸಕ್ಕೆ ಅಡ್ಡಿಮಾಡಲಾಗುತ್ತಿದೆ” ಎಂದು ಆರೋಪಿಸಿದೆ.

“ಸಾಂಕ್ರಾಮಿಕ ರೋಗ ಹರಡಿದ ನಂತರ ಪತ್ರಕರ್ತರ ವಿರುದ್ಧ ದಾಖಲಾದ ಪ್ರಕರಣಗಳ ಸಂಖ್ಯೆ ಅಗಾಧವಾಗಿ ಹೆಚ್ಚಾಗಿದೆ. ಆರೋಗ್ಯ ಬಿಕ್ಕಟ್ಟು ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರದ ಪ್ರತಿಕ್ರಿಯೆಯಲ್ಲಿನ ನ್ಯೂನತೆಯನ್ನು ಬಹಿರಂಗಪಡಿಸಿದ ಪತ್ರಕರ್ತರನ್ನು ಶಮನಗೊಳಿಸಲಾಗುತ್ತಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

“ಸ್ವತಂತ್ರ, ವಿಮರ್ಶಾತ್ಮಕ ಪತ್ರಕರ್ತರಿಗೆ ಕಿರುಕುಳ ನೀಡಲು ದೇಶದ್ರೋಹ ಕಾನೂನುಗಳನ್ನು ಬಳಸುವುದು ದೇಶದ ಅಂತರರಾಷ್ಟ್ರೀಯ ಬದ್ಧತೆಗಳ ಸಂಪೂರ್ಣ ಉಲ್ಲಂಘನೆ ಮಾತ್ರವಲ್ಲದೇ, ತನ್ನ ವಿರುದ್ಧದ ಟೀಕೆಗಳನ್ನು ಎದುರಿಸಲಾಗದ ಸರ್ಕಾರದ ಕೆಟ್ಟ ಪ್ರಯತ್ನವೂ ಆಗಿದೆ. ಪತ್ರಿಕೋದ್ಯಮ ಕಾರ್ಯವನ್ನು ದೇಶದ್ರೋಹ ಅಥವಾ ಭದ್ರತೆಯನ್ನು ದುರ್ಬಲಗೊಳಿಸುವುದಕ್ಕೆ ಸಮೀಕರಿಸಲಾಗುವುದಿಲ್ಲ” ಎಂದು ಹೇಳಲಾಗಿದೆ.

ಮಾರ್ಚ್ 25 ರ ನಡುವೆ ಭಾರತದಲ್ಲಿ 55 ಪತ್ರಕರ್ತರನ್ನು ಇದಕ್ಕೆ ಗುರಿಯಾಗಿಸಿಕೊಳ್ಳಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದರ ನಡುವೆ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಬುಧವಾರ ತನ್ನ ಹೇಳಿಕೆಯಲ್ಲಿ,  ದೆಹಲಿ ಪೊಲೀಸರನ್ನು ಟೀಕಿಸಿದ್ದು, “ಕಾರವಾನ್ ನಿಯತಕಾಲಿಕದ ಪತ್ರಕರ್ತ ಅಹನ್ ಪೆಂಕರ್ ಪತ್ರಿಕಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅವರ ಮೇಲೆ ನಡೆಸಿರುವ ದಾಳಿಯನ್ನು  ಖಂಡಿಸಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...