Homeಮುಖಪುಟಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

- Advertisement -
- Advertisement -

ದೆಹಲಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬುಧವಾರ ಸಂಸ್ಥೆಯ “ಮುಚ್ಚಳಿಕೆಯ ವರದಿಯನ್ನು” ತಿರಸ್ಕರಿಸಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಭಾರತದಲ್ಲಿ ಯಾವುದೇ ಶಾಸನಬದ್ಧ ವಿನಾಯಿತಿ ಇಲ್ಲ ಎಂದು ಹೇಳಿದೆ.

“ಮುಚ್ಚಳಿಕೆಯ ವರದಿ”ಯನ್ನು ತಿರಸ್ಕರಿಸಿದ ಸಿಬಿಐ ನ್ಯಾಯಾಲಯವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆಗೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಯಾವುದೇ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸಂಬಂಧಿತ ಪತ್ರಕರ್ತರ ಗಮನಕ್ಕೆ ತರಬಹುದು. ಆ ಬಗ್ಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದು ತನಿಖಾ ಪ್ರಕ್ರಿಯೆಗಳಿಗೆ ಅತ್ಯಗತ್ಯ ಮತ್ತು ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಸಂಸ್ಥೆಯು ಭಾರತೀಯ ದಂಡ ಸಂಹಿತೆ (IPC) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಯ ವಿಭಾಗಗಳ ಅಡಿಯಲ್ಲಿ ಬರುತ್ತದೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಯಲ್ಲಿ ಕಡ್ಡಾಯವಾಗಿ ಸೇರಿಕೊಳ್ಳಬೇಕೆಂದು ತನಿಖಾ ಸಂಸ್ಥೆಯು ಅಭಿಪ್ರಾಯಪಟ್ಟರೆ ಅಂತಹ ಸಾರ್ವಜನಿಕ ವ್ಯಕ್ತಿಗಳು ಗೌಪ್ಯವಾಗಿರುತ್ತಾರೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಗೆ ಸೇರಲು ಕಾನೂನುಬದ್ಧ ಕರ್ತವ್ಯದಲ್ಲಿರುತ್ತಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಅಂಜನಿ ಮಹಾಜನ್ ಅವರು, ದಾಖಲೆಗಳ ನಕಲಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವಲೋಕನ ಮಾಡಿ, ಸಿಬಿಐ ಸಲ್ಲಿಸಿದ “ಮುಚ್ಚುಳಿಕೆ ವರದಿ”ಯನ್ನು ತಿರಸ್ಕರಿಸಿದರು.

ಆಪಾದಿತ ನಕಲಿ ದಾಖಲೆಗಳನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ಪತ್ರಕರ್ತರು ತಮ್ಮ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಪಾದಿತ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಪತ್ರಿಕೆಯೊಂದು ಪ್ರಕಟಿಸಿತು. ಬಳಿಕ ಕೆಲವು ಚಾನೆಲ್‌ಗಳು ಫೆಬ್ರವರಿ 9, 2009 ರಂದು ನಡೆದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಂದು ದಿನ ಮೊದಲೇ ಪ್ರಸಾರ ಮಾಡಿದ್ದವು. ಇದು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಏಜೆನ್ಸಿಯ ಪ್ರತಿಷ್ಠೆಗೆ ಕಳಂಕ ತರಲು ನಕಲಿ ಮತ್ತು ಕಪೋಲಕಲ್ಪಿತ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ತನಿಖೆಯ ನಂತರ, ಸಿಬಿಐ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿತು. ಆದರೆ ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಲಾಗಿಲ್ಲ ಹಾಗಾಗಿ ಪತ್ರಕರ್ತರನ್ನು ಪ್ರಶ್ನಿಸಲು ಏಜೆನ್ಸಿಗೆ ನಿರ್ದೇಶಿಸಿದೆ.

ತನಿಖೆಯ ಸಂದರ್ಭದಲ್ಲಿ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳಿಂದ ಸೂಕ್ತ ದಾಖಲೆಗಳನ್ನು ಕೇಳಲಾಗಿದೆ ಆದರೆ ಅವರು ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, “ಅಗತ್ಯವಾದ ಮಾಹಿತಿಯನ್ನು ಒದಗಿಸಲು ಮತ್ತು ಅವರ ಗಮನಕ್ಕೆ ತರಲು ಸಂಬಂಧಪಟ್ಟ ಪತ್ರಕರ್ತರು/ಸುದ್ದಿ ಸಂಸ್ಥೆಗಳಿಗೆ 91 Cr.P.C. ಇತ್ಯಾದಿಗಳ ಮೂಲಕ ನೋಟಿಸ್‌ಗಳನ್ನು ನೀಡಬೇಕು. ಈಸಂದರ್ಭದಲ್ಲಿ ಸಿಬಿಐ ತನ್ನ ಅಧಿಕಾರ ಚಲಾಯಿಸಬೇಕು” ಎಂದು ಹೇಳಿದೆ.

ಉದ್ದೇಶಪೂರ್ವಕ ನಕಲಿ ದಾಖಲೆಗಳ ಆಧಾರದಲ್ಲಿ ಪತ್ರಕರ್ತರು ಸುದ್ಧಿಯನ್ನು ಬಿತ್ತರಿಸಿದ್ದಾರೆ. ಇದೀಗ ಸಂಬಂಧಪಟ್ಟ ಪತ್ರಕರ್ತರಿಂದ ಮೂಲಗಳ ಅಂಶದ ಕುರಿತು ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

“ಅಂತಿಮ ವರದಿಯು ತನಿಖೆಯ ಅಂಶದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ, ಯಾವುದಾದರೂ ತನಿಖೆ ನಡೆಸಿದರೆ, ಅಧಿಕೃತ ದಾಖಲೆ ಅಂದರೆ ವರದಿಯು ಸೀಲ್ಡ್ ಕವರ್‌ನಲ್ಲಿ ಇರಿಸಲಾಗಿದ್ದರೂ ಒಂದು ದಿನದ ಮೊದಲು ಹೇಗೆ ಸೋರಿಕೆಯಾಯಿತು? ಇದನ್ನು ಸಿಬಿಐ ಕಚೇರಿಯಿಂದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಾಗಿತ್ತು,  ಆದರೆ ಅಂತಿಮವಾಗಿ ಮಾಧ್ಯಮಗಳಿಗೆ ತಲುಪಿತು.

“ಆಪಾದಿತ ಕೃತ್ಯಗಳಲ್ಲಿ ಒಳಗಿನವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವುದು ಮತ್ತು 17 ಪುಟಗಳ ನಕಲಿ ಪರಿಶೀಲನೆ ಟಿಪ್ಪಣಿಯನ್ನು ಸಿದ್ಧಪಡಿಸಿರುವುದನ್ನು ಸೇರಿದಂತೆ, ಅಪರಾಧಿಗಳು ಅಧಿಕೃತ ದಾಖಲೆಗಳನ್ನು ಪಡೆಯಲು ಯಾವ ವಿಧಾನ ಅನುಸರಿಸಿದರು ಎನ್ನುವುದರ ಮೇಲೆ ಸಿಬಿಐ ತನಿಖೆ ನಡೆಸಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪೂರ್ಣಗೊಳ್ಳದ ಈ ವರದಿಯನ್ನು ತಿರಸ್ಕರಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ನಿರ್ದೇಶಿಸಿದೆ. ಮಾರ್ಚ್ 24 ರೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸಂಸ್ಥೆಗೆ ನ್ಯಾಯಾಲಯವು ಸೂಚಿಸಿತು.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 2007 ರಲ್ಲಿ ಸಿಬಿಐಗೆ ಸೂಚಿಸಿತ್ತು. ಅದರ ಅನುಸರಣೆಯಲ್ಲಿ, ಮಾರ್ಚ್ 5, 2007 ರಂದು ಪ್ರಾಥಮಿಕ ವಿಚಾರಣೆಯನ್ನು ನೋಂದಾಯಿಸಲಾಯಿತು ಮತ್ತು ಅಕ್ಟೋಬರ್ 26, 2007 ರಂದು ಮುಕ್ತಾಯಗೊಳಿಸಲಾಯಿತು.

ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಲಾಯಿತು ಮತ್ತು ಸುಪ್ರೀಂ ಕೋರ್ಟ್ ಮುಂದೆ ಎರಡು ಮುಚ್ಚಿದ ಕವರ್ ಲಕೋಟೆಗಳಲ್ಲಿ ಇರಿಸಲಾಗಿದೆ.

ಫೆಬ್ರವರಿ 9, 2009 ರಂದು, ಅಂದರೆ ನಿಗದಿತ ವಿಚಾರಣೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ, ಮಾಧ್ಯಮ ಸಂಸ್ಥೆಗಳು ನಕಲಿ ದಾಖಲೆಗಳ ಆಧಾರದ ಮೇಲೆ ಸುದ್ದಿಯನ್ನು ಪ್ರಕಟಿಸಿ ಮತ್ತು ಪ್ರಸಾರ ಮಾಡಿವೆ. ಹಾಗಾಗಿ ಅಪೆಕ್ಸ್ ಕೋರ್ಟ್‌ನಲ್ಲಿ ಅಂತಿಮ ತೀರ್ಪಿಗಾಗಿ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ವಾದಿಸಲಾಗಿದೆ.

ಅಪರಿಚಿತ ವ್ಯಕ್ತಿಗಳು 2008-2009ರ ಅವಧಿಯಲ್ಲಿ ಸಿಬಿಐ ಮತ್ತು ಸಿಬಿಐ ಅಧಿಕಾರಿಗಳ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ ಅಸಲಿ, ನಕಲಿ ದಾಖಲೆ ಮುದ್ರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆ ದಾಖಲೆಗಳ ಆಧಾರದ ಮೇಲೆ ಪತ್ರಿಕೆಗಳಲ್ಲಿ ಮತ್ತು ಟಿವಿಗಳಲ್ಲಿ ಸುಳ್ಳು ಮತ್ತು ಕಟ್ಟುಕಥೆ ಸುದ್ದಿಗಳನ್ನು ಪ್ರಸಾರ ಮಾಡಿತು.

ನ್ಯೂಸ್ ಚಾನೆಲ್ ಬಳಸಿದ ದಾಖಲೆಗಳು ನಕಲಿ ಎಂದು ಅಂತಿಮ ವರದಿಯಲ್ಲಿ ವಾದಿಸಲಾಗಿದೆ. ಆದರೆ ನಕಲಿ ದಾಖಲೆಗಳ ಮೂಲವನ್ನು ಪತ್ರಕರ್ತರು ಬಹಿರಂಗಪಡಿಸದ ಕಾರಣ ಯಾರು ನಕಲಿ ದಾಖಲೆಗಳನ್ನು ರಚಿಸಿದ್ದಾರೆ ಎಂಬುದು ತಿಳಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...