Homeಮುಖಪುಟಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

- Advertisement -
- Advertisement -

ದೆಹಲಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬುಧವಾರ ಸಂಸ್ಥೆಯ “ಮುಚ್ಚಳಿಕೆಯ ವರದಿಯನ್ನು” ತಿರಸ್ಕರಿಸಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಭಾರತದಲ್ಲಿ ಯಾವುದೇ ಶಾಸನಬದ್ಧ ವಿನಾಯಿತಿ ಇಲ್ಲ ಎಂದು ಹೇಳಿದೆ.

“ಮುಚ್ಚಳಿಕೆಯ ವರದಿ”ಯನ್ನು ತಿರಸ್ಕರಿಸಿದ ಸಿಬಿಐ ನ್ಯಾಯಾಲಯವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆಗೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಯಾವುದೇ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸಂಬಂಧಿತ ಪತ್ರಕರ್ತರ ಗಮನಕ್ಕೆ ತರಬಹುದು. ಆ ಬಗ್ಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದು ತನಿಖಾ ಪ್ರಕ್ರಿಯೆಗಳಿಗೆ ಅತ್ಯಗತ್ಯ ಮತ್ತು ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಸಂಸ್ಥೆಯು ಭಾರತೀಯ ದಂಡ ಸಂಹಿತೆ (IPC) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಯ ವಿಭಾಗಗಳ ಅಡಿಯಲ್ಲಿ ಬರುತ್ತದೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಯಲ್ಲಿ ಕಡ್ಡಾಯವಾಗಿ ಸೇರಿಕೊಳ್ಳಬೇಕೆಂದು ತನಿಖಾ ಸಂಸ್ಥೆಯು ಅಭಿಪ್ರಾಯಪಟ್ಟರೆ ಅಂತಹ ಸಾರ್ವಜನಿಕ ವ್ಯಕ್ತಿಗಳು ಗೌಪ್ಯವಾಗಿರುತ್ತಾರೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಗೆ ಸೇರಲು ಕಾನೂನುಬದ್ಧ ಕರ್ತವ್ಯದಲ್ಲಿರುತ್ತಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಅಂಜನಿ ಮಹಾಜನ್ ಅವರು, ದಾಖಲೆಗಳ ನಕಲಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವಲೋಕನ ಮಾಡಿ, ಸಿಬಿಐ ಸಲ್ಲಿಸಿದ “ಮುಚ್ಚುಳಿಕೆ ವರದಿ”ಯನ್ನು ತಿರಸ್ಕರಿಸಿದರು.

ಆಪಾದಿತ ನಕಲಿ ದಾಖಲೆಗಳನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ಪತ್ರಕರ್ತರು ತಮ್ಮ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಪಾದಿತ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಪತ್ರಿಕೆಯೊಂದು ಪ್ರಕಟಿಸಿತು. ಬಳಿಕ ಕೆಲವು ಚಾನೆಲ್‌ಗಳು ಫೆಬ್ರವರಿ 9, 2009 ರಂದು ನಡೆದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಂದು ದಿನ ಮೊದಲೇ ಪ್ರಸಾರ ಮಾಡಿದ್ದವು. ಇದು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಏಜೆನ್ಸಿಯ ಪ್ರತಿಷ್ಠೆಗೆ ಕಳಂಕ ತರಲು ನಕಲಿ ಮತ್ತು ಕಪೋಲಕಲ್ಪಿತ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ತನಿಖೆಯ ನಂತರ, ಸಿಬಿಐ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿತು. ಆದರೆ ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಲಾಗಿಲ್ಲ ಹಾಗಾಗಿ ಪತ್ರಕರ್ತರನ್ನು ಪ್ರಶ್ನಿಸಲು ಏಜೆನ್ಸಿಗೆ ನಿರ್ದೇಶಿಸಿದೆ.

ತನಿಖೆಯ ಸಂದರ್ಭದಲ್ಲಿ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳಿಂದ ಸೂಕ್ತ ದಾಖಲೆಗಳನ್ನು ಕೇಳಲಾಗಿದೆ ಆದರೆ ಅವರು ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, “ಅಗತ್ಯವಾದ ಮಾಹಿತಿಯನ್ನು ಒದಗಿಸಲು ಮತ್ತು ಅವರ ಗಮನಕ್ಕೆ ತರಲು ಸಂಬಂಧಪಟ್ಟ ಪತ್ರಕರ್ತರು/ಸುದ್ದಿ ಸಂಸ್ಥೆಗಳಿಗೆ 91 Cr.P.C. ಇತ್ಯಾದಿಗಳ ಮೂಲಕ ನೋಟಿಸ್‌ಗಳನ್ನು ನೀಡಬೇಕು. ಈಸಂದರ್ಭದಲ್ಲಿ ಸಿಬಿಐ ತನ್ನ ಅಧಿಕಾರ ಚಲಾಯಿಸಬೇಕು” ಎಂದು ಹೇಳಿದೆ.

ಉದ್ದೇಶಪೂರ್ವಕ ನಕಲಿ ದಾಖಲೆಗಳ ಆಧಾರದಲ್ಲಿ ಪತ್ರಕರ್ತರು ಸುದ್ಧಿಯನ್ನು ಬಿತ್ತರಿಸಿದ್ದಾರೆ. ಇದೀಗ ಸಂಬಂಧಪಟ್ಟ ಪತ್ರಕರ್ತರಿಂದ ಮೂಲಗಳ ಅಂಶದ ಕುರಿತು ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

“ಅಂತಿಮ ವರದಿಯು ತನಿಖೆಯ ಅಂಶದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ, ಯಾವುದಾದರೂ ತನಿಖೆ ನಡೆಸಿದರೆ, ಅಧಿಕೃತ ದಾಖಲೆ ಅಂದರೆ ವರದಿಯು ಸೀಲ್ಡ್ ಕವರ್‌ನಲ್ಲಿ ಇರಿಸಲಾಗಿದ್ದರೂ ಒಂದು ದಿನದ ಮೊದಲು ಹೇಗೆ ಸೋರಿಕೆಯಾಯಿತು? ಇದನ್ನು ಸಿಬಿಐ ಕಚೇರಿಯಿಂದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಾಗಿತ್ತು,  ಆದರೆ ಅಂತಿಮವಾಗಿ ಮಾಧ್ಯಮಗಳಿಗೆ ತಲುಪಿತು.

“ಆಪಾದಿತ ಕೃತ್ಯಗಳಲ್ಲಿ ಒಳಗಿನವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವುದು ಮತ್ತು 17 ಪುಟಗಳ ನಕಲಿ ಪರಿಶೀಲನೆ ಟಿಪ್ಪಣಿಯನ್ನು ಸಿದ್ಧಪಡಿಸಿರುವುದನ್ನು ಸೇರಿದಂತೆ, ಅಪರಾಧಿಗಳು ಅಧಿಕೃತ ದಾಖಲೆಗಳನ್ನು ಪಡೆಯಲು ಯಾವ ವಿಧಾನ ಅನುಸರಿಸಿದರು ಎನ್ನುವುದರ ಮೇಲೆ ಸಿಬಿಐ ತನಿಖೆ ನಡೆಸಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪೂರ್ಣಗೊಳ್ಳದ ಈ ವರದಿಯನ್ನು ತಿರಸ್ಕರಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ನಿರ್ದೇಶಿಸಿದೆ. ಮಾರ್ಚ್ 24 ರೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸಂಸ್ಥೆಗೆ ನ್ಯಾಯಾಲಯವು ಸೂಚಿಸಿತು.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 2007 ರಲ್ಲಿ ಸಿಬಿಐಗೆ ಸೂಚಿಸಿತ್ತು. ಅದರ ಅನುಸರಣೆಯಲ್ಲಿ, ಮಾರ್ಚ್ 5, 2007 ರಂದು ಪ್ರಾಥಮಿಕ ವಿಚಾರಣೆಯನ್ನು ನೋಂದಾಯಿಸಲಾಯಿತು ಮತ್ತು ಅಕ್ಟೋಬರ್ 26, 2007 ರಂದು ಮುಕ್ತಾಯಗೊಳಿಸಲಾಯಿತು.

ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಲಾಯಿತು ಮತ್ತು ಸುಪ್ರೀಂ ಕೋರ್ಟ್ ಮುಂದೆ ಎರಡು ಮುಚ್ಚಿದ ಕವರ್ ಲಕೋಟೆಗಳಲ್ಲಿ ಇರಿಸಲಾಗಿದೆ.

ಫೆಬ್ರವರಿ 9, 2009 ರಂದು, ಅಂದರೆ ನಿಗದಿತ ವಿಚಾರಣೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ, ಮಾಧ್ಯಮ ಸಂಸ್ಥೆಗಳು ನಕಲಿ ದಾಖಲೆಗಳ ಆಧಾರದ ಮೇಲೆ ಸುದ್ದಿಯನ್ನು ಪ್ರಕಟಿಸಿ ಮತ್ತು ಪ್ರಸಾರ ಮಾಡಿವೆ. ಹಾಗಾಗಿ ಅಪೆಕ್ಸ್ ಕೋರ್ಟ್‌ನಲ್ಲಿ ಅಂತಿಮ ತೀರ್ಪಿಗಾಗಿ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ವಾದಿಸಲಾಗಿದೆ.

ಅಪರಿಚಿತ ವ್ಯಕ್ತಿಗಳು 2008-2009ರ ಅವಧಿಯಲ್ಲಿ ಸಿಬಿಐ ಮತ್ತು ಸಿಬಿಐ ಅಧಿಕಾರಿಗಳ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ ಅಸಲಿ, ನಕಲಿ ದಾಖಲೆ ಮುದ್ರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆ ದಾಖಲೆಗಳ ಆಧಾರದ ಮೇಲೆ ಪತ್ರಿಕೆಗಳಲ್ಲಿ ಮತ್ತು ಟಿವಿಗಳಲ್ಲಿ ಸುಳ್ಳು ಮತ್ತು ಕಟ್ಟುಕಥೆ ಸುದ್ದಿಗಳನ್ನು ಪ್ರಸಾರ ಮಾಡಿತು.

ನ್ಯೂಸ್ ಚಾನೆಲ್ ಬಳಸಿದ ದಾಖಲೆಗಳು ನಕಲಿ ಎಂದು ಅಂತಿಮ ವರದಿಯಲ್ಲಿ ವಾದಿಸಲಾಗಿದೆ. ಆದರೆ ನಕಲಿ ದಾಖಲೆಗಳ ಮೂಲವನ್ನು ಪತ್ರಕರ್ತರು ಬಹಿರಂಗಪಡಿಸದ ಕಾರಣ ಯಾರು ನಕಲಿ ದಾಖಲೆಗಳನ್ನು ರಚಿಸಿದ್ದಾರೆ ಎಂಬುದು ತಿಳಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...