Homeಮುಖಪುಟಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

- Advertisement -
- Advertisement -

ದೆಹಲಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬುಧವಾರ ಸಂಸ್ಥೆಯ “ಮುಚ್ಚಳಿಕೆಯ ವರದಿಯನ್ನು” ತಿರಸ್ಕರಿಸಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಭಾರತದಲ್ಲಿ ಯಾವುದೇ ಶಾಸನಬದ್ಧ ವಿನಾಯಿತಿ ಇಲ್ಲ ಎಂದು ಹೇಳಿದೆ.

“ಮುಚ್ಚಳಿಕೆಯ ವರದಿ”ಯನ್ನು ತಿರಸ್ಕರಿಸಿದ ಸಿಬಿಐ ನ್ಯಾಯಾಲಯವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆಗೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಯಾವುದೇ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸಂಬಂಧಿತ ಪತ್ರಕರ್ತರ ಗಮನಕ್ಕೆ ತರಬಹುದು. ಆ ಬಗ್ಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದು ತನಿಖಾ ಪ್ರಕ್ರಿಯೆಗಳಿಗೆ ಅತ್ಯಗತ್ಯ ಮತ್ತು ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಸಂಸ್ಥೆಯು ಭಾರತೀಯ ದಂಡ ಸಂಹಿತೆ (IPC) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಯ ವಿಭಾಗಗಳ ಅಡಿಯಲ್ಲಿ ಬರುತ್ತದೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಯಲ್ಲಿ ಕಡ್ಡಾಯವಾಗಿ ಸೇರಿಕೊಳ್ಳಬೇಕೆಂದು ತನಿಖಾ ಸಂಸ್ಥೆಯು ಅಭಿಪ್ರಾಯಪಟ್ಟರೆ ಅಂತಹ ಸಾರ್ವಜನಿಕ ವ್ಯಕ್ತಿಗಳು ಗೌಪ್ಯವಾಗಿರುತ್ತಾರೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಗೆ ಸೇರಲು ಕಾನೂನುಬದ್ಧ ಕರ್ತವ್ಯದಲ್ಲಿರುತ್ತಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಅಂಜನಿ ಮಹಾಜನ್ ಅವರು, ದಾಖಲೆಗಳ ನಕಲಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವಲೋಕನ ಮಾಡಿ, ಸಿಬಿಐ ಸಲ್ಲಿಸಿದ “ಮುಚ್ಚುಳಿಕೆ ವರದಿ”ಯನ್ನು ತಿರಸ್ಕರಿಸಿದರು.

ಆಪಾದಿತ ನಕಲಿ ದಾಖಲೆಗಳನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ಪತ್ರಕರ್ತರು ತಮ್ಮ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಪಾದಿತ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಪತ್ರಿಕೆಯೊಂದು ಪ್ರಕಟಿಸಿತು. ಬಳಿಕ ಕೆಲವು ಚಾನೆಲ್‌ಗಳು ಫೆಬ್ರವರಿ 9, 2009 ರಂದು ನಡೆದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಂದು ದಿನ ಮೊದಲೇ ಪ್ರಸಾರ ಮಾಡಿದ್ದವು. ಇದು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಏಜೆನ್ಸಿಯ ಪ್ರತಿಷ್ಠೆಗೆ ಕಳಂಕ ತರಲು ನಕಲಿ ಮತ್ತು ಕಪೋಲಕಲ್ಪಿತ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ತನಿಖೆಯ ನಂತರ, ಸಿಬಿಐ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿತು. ಆದರೆ ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಲಾಗಿಲ್ಲ ಹಾಗಾಗಿ ಪತ್ರಕರ್ತರನ್ನು ಪ್ರಶ್ನಿಸಲು ಏಜೆನ್ಸಿಗೆ ನಿರ್ದೇಶಿಸಿದೆ.

ತನಿಖೆಯ ಸಂದರ್ಭದಲ್ಲಿ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳಿಂದ ಸೂಕ್ತ ದಾಖಲೆಗಳನ್ನು ಕೇಳಲಾಗಿದೆ ಆದರೆ ಅವರು ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, “ಅಗತ್ಯವಾದ ಮಾಹಿತಿಯನ್ನು ಒದಗಿಸಲು ಮತ್ತು ಅವರ ಗಮನಕ್ಕೆ ತರಲು ಸಂಬಂಧಪಟ್ಟ ಪತ್ರಕರ್ತರು/ಸುದ್ದಿ ಸಂಸ್ಥೆಗಳಿಗೆ 91 Cr.P.C. ಇತ್ಯಾದಿಗಳ ಮೂಲಕ ನೋಟಿಸ್‌ಗಳನ್ನು ನೀಡಬೇಕು. ಈಸಂದರ್ಭದಲ್ಲಿ ಸಿಬಿಐ ತನ್ನ ಅಧಿಕಾರ ಚಲಾಯಿಸಬೇಕು” ಎಂದು ಹೇಳಿದೆ.

ಉದ್ದೇಶಪೂರ್ವಕ ನಕಲಿ ದಾಖಲೆಗಳ ಆಧಾರದಲ್ಲಿ ಪತ್ರಕರ್ತರು ಸುದ್ಧಿಯನ್ನು ಬಿತ್ತರಿಸಿದ್ದಾರೆ. ಇದೀಗ ಸಂಬಂಧಪಟ್ಟ ಪತ್ರಕರ್ತರಿಂದ ಮೂಲಗಳ ಅಂಶದ ಕುರಿತು ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

“ಅಂತಿಮ ವರದಿಯು ತನಿಖೆಯ ಅಂಶದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ, ಯಾವುದಾದರೂ ತನಿಖೆ ನಡೆಸಿದರೆ, ಅಧಿಕೃತ ದಾಖಲೆ ಅಂದರೆ ವರದಿಯು ಸೀಲ್ಡ್ ಕವರ್‌ನಲ್ಲಿ ಇರಿಸಲಾಗಿದ್ದರೂ ಒಂದು ದಿನದ ಮೊದಲು ಹೇಗೆ ಸೋರಿಕೆಯಾಯಿತು? ಇದನ್ನು ಸಿಬಿಐ ಕಚೇರಿಯಿಂದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಾಗಿತ್ತು,  ಆದರೆ ಅಂತಿಮವಾಗಿ ಮಾಧ್ಯಮಗಳಿಗೆ ತಲುಪಿತು.

“ಆಪಾದಿತ ಕೃತ್ಯಗಳಲ್ಲಿ ಒಳಗಿನವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವುದು ಮತ್ತು 17 ಪುಟಗಳ ನಕಲಿ ಪರಿಶೀಲನೆ ಟಿಪ್ಪಣಿಯನ್ನು ಸಿದ್ಧಪಡಿಸಿರುವುದನ್ನು ಸೇರಿದಂತೆ, ಅಪರಾಧಿಗಳು ಅಧಿಕೃತ ದಾಖಲೆಗಳನ್ನು ಪಡೆಯಲು ಯಾವ ವಿಧಾನ ಅನುಸರಿಸಿದರು ಎನ್ನುವುದರ ಮೇಲೆ ಸಿಬಿಐ ತನಿಖೆ ನಡೆಸಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪೂರ್ಣಗೊಳ್ಳದ ಈ ವರದಿಯನ್ನು ತಿರಸ್ಕರಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ನಿರ್ದೇಶಿಸಿದೆ. ಮಾರ್ಚ್ 24 ರೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸಂಸ್ಥೆಗೆ ನ್ಯಾಯಾಲಯವು ಸೂಚಿಸಿತು.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 2007 ರಲ್ಲಿ ಸಿಬಿಐಗೆ ಸೂಚಿಸಿತ್ತು. ಅದರ ಅನುಸರಣೆಯಲ್ಲಿ, ಮಾರ್ಚ್ 5, 2007 ರಂದು ಪ್ರಾಥಮಿಕ ವಿಚಾರಣೆಯನ್ನು ನೋಂದಾಯಿಸಲಾಯಿತು ಮತ್ತು ಅಕ್ಟೋಬರ್ 26, 2007 ರಂದು ಮುಕ್ತಾಯಗೊಳಿಸಲಾಯಿತು.

ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಲಾಯಿತು ಮತ್ತು ಸುಪ್ರೀಂ ಕೋರ್ಟ್ ಮುಂದೆ ಎರಡು ಮುಚ್ಚಿದ ಕವರ್ ಲಕೋಟೆಗಳಲ್ಲಿ ಇರಿಸಲಾಗಿದೆ.

ಫೆಬ್ರವರಿ 9, 2009 ರಂದು, ಅಂದರೆ ನಿಗದಿತ ವಿಚಾರಣೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ, ಮಾಧ್ಯಮ ಸಂಸ್ಥೆಗಳು ನಕಲಿ ದಾಖಲೆಗಳ ಆಧಾರದ ಮೇಲೆ ಸುದ್ದಿಯನ್ನು ಪ್ರಕಟಿಸಿ ಮತ್ತು ಪ್ರಸಾರ ಮಾಡಿವೆ. ಹಾಗಾಗಿ ಅಪೆಕ್ಸ್ ಕೋರ್ಟ್‌ನಲ್ಲಿ ಅಂತಿಮ ತೀರ್ಪಿಗಾಗಿ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ವಾದಿಸಲಾಗಿದೆ.

ಅಪರಿಚಿತ ವ್ಯಕ್ತಿಗಳು 2008-2009ರ ಅವಧಿಯಲ್ಲಿ ಸಿಬಿಐ ಮತ್ತು ಸಿಬಿಐ ಅಧಿಕಾರಿಗಳ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ ಅಸಲಿ, ನಕಲಿ ದಾಖಲೆ ಮುದ್ರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆ ದಾಖಲೆಗಳ ಆಧಾರದ ಮೇಲೆ ಪತ್ರಿಕೆಗಳಲ್ಲಿ ಮತ್ತು ಟಿವಿಗಳಲ್ಲಿ ಸುಳ್ಳು ಮತ್ತು ಕಟ್ಟುಕಥೆ ಸುದ್ದಿಗಳನ್ನು ಪ್ರಸಾರ ಮಾಡಿತು.

ನ್ಯೂಸ್ ಚಾನೆಲ್ ಬಳಸಿದ ದಾಖಲೆಗಳು ನಕಲಿ ಎಂದು ಅಂತಿಮ ವರದಿಯಲ್ಲಿ ವಾದಿಸಲಾಗಿದೆ. ಆದರೆ ನಕಲಿ ದಾಖಲೆಗಳ ಮೂಲವನ್ನು ಪತ್ರಕರ್ತರು ಬಹಿರಂಗಪಡಿಸದ ಕಾರಣ ಯಾರು ನಕಲಿ ದಾಖಲೆಗಳನ್ನು ರಚಿಸಿದ್ದಾರೆ ಎಂಬುದು ತಿಳಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...