Homeಮುಖಪುಟಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

- Advertisement -
- Advertisement -

ದೆಹಲಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬುಧವಾರ ಸಂಸ್ಥೆಯ “ಮುಚ್ಚಳಿಕೆಯ ವರದಿಯನ್ನು” ತಿರಸ್ಕರಿಸಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಭಾರತದಲ್ಲಿ ಯಾವುದೇ ಶಾಸನಬದ್ಧ ವಿನಾಯಿತಿ ಇಲ್ಲ ಎಂದು ಹೇಳಿದೆ.

“ಮುಚ್ಚಳಿಕೆಯ ವರದಿ”ಯನ್ನು ತಿರಸ್ಕರಿಸಿದ ಸಿಬಿಐ ನ್ಯಾಯಾಲಯವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆಗೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಯಾವುದೇ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸಂಬಂಧಿತ ಪತ್ರಕರ್ತರ ಗಮನಕ್ಕೆ ತರಬಹುದು. ಆ ಬಗ್ಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದು ತನಿಖಾ ಪ್ರಕ್ರಿಯೆಗಳಿಗೆ ಅತ್ಯಗತ್ಯ ಮತ್ತು ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಸಂಸ್ಥೆಯು ಭಾರತೀಯ ದಂಡ ಸಂಹಿತೆ (IPC) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಯ ವಿಭಾಗಗಳ ಅಡಿಯಲ್ಲಿ ಬರುತ್ತದೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಯಲ್ಲಿ ಕಡ್ಡಾಯವಾಗಿ ಸೇರಿಕೊಳ್ಳಬೇಕೆಂದು ತನಿಖಾ ಸಂಸ್ಥೆಯು ಅಭಿಪ್ರಾಯಪಟ್ಟರೆ ಅಂತಹ ಸಾರ್ವಜನಿಕ ವ್ಯಕ್ತಿಗಳು ಗೌಪ್ಯವಾಗಿರುತ್ತಾರೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಗೆ ಸೇರಲು ಕಾನೂನುಬದ್ಧ ಕರ್ತವ್ಯದಲ್ಲಿರುತ್ತಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಅಂಜನಿ ಮಹಾಜನ್ ಅವರು, ದಾಖಲೆಗಳ ನಕಲಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವಲೋಕನ ಮಾಡಿ, ಸಿಬಿಐ ಸಲ್ಲಿಸಿದ “ಮುಚ್ಚುಳಿಕೆ ವರದಿ”ಯನ್ನು ತಿರಸ್ಕರಿಸಿದರು.

ಆಪಾದಿತ ನಕಲಿ ದಾಖಲೆಗಳನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ಪತ್ರಕರ್ತರು ತಮ್ಮ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಪಾದಿತ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಪತ್ರಿಕೆಯೊಂದು ಪ್ರಕಟಿಸಿತು. ಬಳಿಕ ಕೆಲವು ಚಾನೆಲ್‌ಗಳು ಫೆಬ್ರವರಿ 9, 2009 ರಂದು ನಡೆದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಂದು ದಿನ ಮೊದಲೇ ಪ್ರಸಾರ ಮಾಡಿದ್ದವು. ಇದು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಏಜೆನ್ಸಿಯ ಪ್ರತಿಷ್ಠೆಗೆ ಕಳಂಕ ತರಲು ನಕಲಿ ಮತ್ತು ಕಪೋಲಕಲ್ಪಿತ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ತನಿಖೆಯ ನಂತರ, ಸಿಬಿಐ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿತು. ಆದರೆ ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಲಾಗಿಲ್ಲ ಹಾಗಾಗಿ ಪತ್ರಕರ್ತರನ್ನು ಪ್ರಶ್ನಿಸಲು ಏಜೆನ್ಸಿಗೆ ನಿರ್ದೇಶಿಸಿದೆ.

ತನಿಖೆಯ ಸಂದರ್ಭದಲ್ಲಿ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳಿಂದ ಸೂಕ್ತ ದಾಖಲೆಗಳನ್ನು ಕೇಳಲಾಗಿದೆ ಆದರೆ ಅವರು ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, “ಅಗತ್ಯವಾದ ಮಾಹಿತಿಯನ್ನು ಒದಗಿಸಲು ಮತ್ತು ಅವರ ಗಮನಕ್ಕೆ ತರಲು ಸಂಬಂಧಪಟ್ಟ ಪತ್ರಕರ್ತರು/ಸುದ್ದಿ ಸಂಸ್ಥೆಗಳಿಗೆ 91 Cr.P.C. ಇತ್ಯಾದಿಗಳ ಮೂಲಕ ನೋಟಿಸ್‌ಗಳನ್ನು ನೀಡಬೇಕು. ಈಸಂದರ್ಭದಲ್ಲಿ ಸಿಬಿಐ ತನ್ನ ಅಧಿಕಾರ ಚಲಾಯಿಸಬೇಕು” ಎಂದು ಹೇಳಿದೆ.

ಉದ್ದೇಶಪೂರ್ವಕ ನಕಲಿ ದಾಖಲೆಗಳ ಆಧಾರದಲ್ಲಿ ಪತ್ರಕರ್ತರು ಸುದ್ಧಿಯನ್ನು ಬಿತ್ತರಿಸಿದ್ದಾರೆ. ಇದೀಗ ಸಂಬಂಧಪಟ್ಟ ಪತ್ರಕರ್ತರಿಂದ ಮೂಲಗಳ ಅಂಶದ ಕುರಿತು ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

“ಅಂತಿಮ ವರದಿಯು ತನಿಖೆಯ ಅಂಶದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ, ಯಾವುದಾದರೂ ತನಿಖೆ ನಡೆಸಿದರೆ, ಅಧಿಕೃತ ದಾಖಲೆ ಅಂದರೆ ವರದಿಯು ಸೀಲ್ಡ್ ಕವರ್‌ನಲ್ಲಿ ಇರಿಸಲಾಗಿದ್ದರೂ ಒಂದು ದಿನದ ಮೊದಲು ಹೇಗೆ ಸೋರಿಕೆಯಾಯಿತು? ಇದನ್ನು ಸಿಬಿಐ ಕಚೇರಿಯಿಂದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಾಗಿತ್ತು,  ಆದರೆ ಅಂತಿಮವಾಗಿ ಮಾಧ್ಯಮಗಳಿಗೆ ತಲುಪಿತು.

“ಆಪಾದಿತ ಕೃತ್ಯಗಳಲ್ಲಿ ಒಳಗಿನವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವುದು ಮತ್ತು 17 ಪುಟಗಳ ನಕಲಿ ಪರಿಶೀಲನೆ ಟಿಪ್ಪಣಿಯನ್ನು ಸಿದ್ಧಪಡಿಸಿರುವುದನ್ನು ಸೇರಿದಂತೆ, ಅಪರಾಧಿಗಳು ಅಧಿಕೃತ ದಾಖಲೆಗಳನ್ನು ಪಡೆಯಲು ಯಾವ ವಿಧಾನ ಅನುಸರಿಸಿದರು ಎನ್ನುವುದರ ಮೇಲೆ ಸಿಬಿಐ ತನಿಖೆ ನಡೆಸಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪೂರ್ಣಗೊಳ್ಳದ ಈ ವರದಿಯನ್ನು ತಿರಸ್ಕರಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ನಿರ್ದೇಶಿಸಿದೆ. ಮಾರ್ಚ್ 24 ರೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸಂಸ್ಥೆಗೆ ನ್ಯಾಯಾಲಯವು ಸೂಚಿಸಿತು.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 2007 ರಲ್ಲಿ ಸಿಬಿಐಗೆ ಸೂಚಿಸಿತ್ತು. ಅದರ ಅನುಸರಣೆಯಲ್ಲಿ, ಮಾರ್ಚ್ 5, 2007 ರಂದು ಪ್ರಾಥಮಿಕ ವಿಚಾರಣೆಯನ್ನು ನೋಂದಾಯಿಸಲಾಯಿತು ಮತ್ತು ಅಕ್ಟೋಬರ್ 26, 2007 ರಂದು ಮುಕ್ತಾಯಗೊಳಿಸಲಾಯಿತು.

ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಲಾಯಿತು ಮತ್ತು ಸುಪ್ರೀಂ ಕೋರ್ಟ್ ಮುಂದೆ ಎರಡು ಮುಚ್ಚಿದ ಕವರ್ ಲಕೋಟೆಗಳಲ್ಲಿ ಇರಿಸಲಾಗಿದೆ.

ಫೆಬ್ರವರಿ 9, 2009 ರಂದು, ಅಂದರೆ ನಿಗದಿತ ವಿಚಾರಣೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ, ಮಾಧ್ಯಮ ಸಂಸ್ಥೆಗಳು ನಕಲಿ ದಾಖಲೆಗಳ ಆಧಾರದ ಮೇಲೆ ಸುದ್ದಿಯನ್ನು ಪ್ರಕಟಿಸಿ ಮತ್ತು ಪ್ರಸಾರ ಮಾಡಿವೆ. ಹಾಗಾಗಿ ಅಪೆಕ್ಸ್ ಕೋರ್ಟ್‌ನಲ್ಲಿ ಅಂತಿಮ ತೀರ್ಪಿಗಾಗಿ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ವಾದಿಸಲಾಗಿದೆ.

ಅಪರಿಚಿತ ವ್ಯಕ್ತಿಗಳು 2008-2009ರ ಅವಧಿಯಲ್ಲಿ ಸಿಬಿಐ ಮತ್ತು ಸಿಬಿಐ ಅಧಿಕಾರಿಗಳ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ ಅಸಲಿ, ನಕಲಿ ದಾಖಲೆ ಮುದ್ರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆ ದಾಖಲೆಗಳ ಆಧಾರದ ಮೇಲೆ ಪತ್ರಿಕೆಗಳಲ್ಲಿ ಮತ್ತು ಟಿವಿಗಳಲ್ಲಿ ಸುಳ್ಳು ಮತ್ತು ಕಟ್ಟುಕಥೆ ಸುದ್ದಿಗಳನ್ನು ಪ್ರಸಾರ ಮಾಡಿತು.

ನ್ಯೂಸ್ ಚಾನೆಲ್ ಬಳಸಿದ ದಾಖಲೆಗಳು ನಕಲಿ ಎಂದು ಅಂತಿಮ ವರದಿಯಲ್ಲಿ ವಾದಿಸಲಾಗಿದೆ. ಆದರೆ ನಕಲಿ ದಾಖಲೆಗಳ ಮೂಲವನ್ನು ಪತ್ರಕರ್ತರು ಬಹಿರಂಗಪಡಿಸದ ಕಾರಣ ಯಾರು ನಕಲಿ ದಾಖಲೆಗಳನ್ನು ರಚಿಸಿದ್ದಾರೆ ಎಂಬುದು ತಿಳಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...