Homeಮುಖಪುಟಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

- Advertisement -
- Advertisement -

ದೆಹಲಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬುಧವಾರ ಸಂಸ್ಥೆಯ “ಮುಚ್ಚಳಿಕೆಯ ವರದಿಯನ್ನು” ತಿರಸ್ಕರಿಸಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಭಾರತದಲ್ಲಿ ಯಾವುದೇ ಶಾಸನಬದ್ಧ ವಿನಾಯಿತಿ ಇಲ್ಲ ಎಂದು ಹೇಳಿದೆ.

“ಮುಚ್ಚಳಿಕೆಯ ವರದಿ”ಯನ್ನು ತಿರಸ್ಕರಿಸಿದ ಸಿಬಿಐ ನ್ಯಾಯಾಲಯವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆಗೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಯಾವುದೇ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸಂಬಂಧಿತ ಪತ್ರಕರ್ತರ ಗಮನಕ್ಕೆ ತರಬಹುದು. ಆ ಬಗ್ಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದು ತನಿಖಾ ಪ್ರಕ್ರಿಯೆಗಳಿಗೆ ಅತ್ಯಗತ್ಯ ಮತ್ತು ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಸಂಸ್ಥೆಯು ಭಾರತೀಯ ದಂಡ ಸಂಹಿತೆ (IPC) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಯ ವಿಭಾಗಗಳ ಅಡಿಯಲ್ಲಿ ಬರುತ್ತದೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಯಲ್ಲಿ ಕಡ್ಡಾಯವಾಗಿ ಸೇರಿಕೊಳ್ಳಬೇಕೆಂದು ತನಿಖಾ ಸಂಸ್ಥೆಯು ಅಭಿಪ್ರಾಯಪಟ್ಟರೆ ಅಂತಹ ಸಾರ್ವಜನಿಕ ವ್ಯಕ್ತಿಗಳು ಗೌಪ್ಯವಾಗಿರುತ್ತಾರೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಗೆ ಸೇರಲು ಕಾನೂನುಬದ್ಧ ಕರ್ತವ್ಯದಲ್ಲಿರುತ್ತಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಅಂಜನಿ ಮಹಾಜನ್ ಅವರು, ದಾಖಲೆಗಳ ನಕಲಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವಲೋಕನ ಮಾಡಿ, ಸಿಬಿಐ ಸಲ್ಲಿಸಿದ “ಮುಚ್ಚುಳಿಕೆ ವರದಿ”ಯನ್ನು ತಿರಸ್ಕರಿಸಿದರು.

ಆಪಾದಿತ ನಕಲಿ ದಾಖಲೆಗಳನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ಪತ್ರಕರ್ತರು ತಮ್ಮ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಪಾದಿತ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಪತ್ರಿಕೆಯೊಂದು ಪ್ರಕಟಿಸಿತು. ಬಳಿಕ ಕೆಲವು ಚಾನೆಲ್‌ಗಳು ಫೆಬ್ರವರಿ 9, 2009 ರಂದು ನಡೆದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಂದು ದಿನ ಮೊದಲೇ ಪ್ರಸಾರ ಮಾಡಿದ್ದವು. ಇದು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಏಜೆನ್ಸಿಯ ಪ್ರತಿಷ್ಠೆಗೆ ಕಳಂಕ ತರಲು ನಕಲಿ ಮತ್ತು ಕಪೋಲಕಲ್ಪಿತ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ತನಿಖೆಯ ನಂತರ, ಸಿಬಿಐ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿತು. ಆದರೆ ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಲಾಗಿಲ್ಲ ಹಾಗಾಗಿ ಪತ್ರಕರ್ತರನ್ನು ಪ್ರಶ್ನಿಸಲು ಏಜೆನ್ಸಿಗೆ ನಿರ್ದೇಶಿಸಿದೆ.

ತನಿಖೆಯ ಸಂದರ್ಭದಲ್ಲಿ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳಿಂದ ಸೂಕ್ತ ದಾಖಲೆಗಳನ್ನು ಕೇಳಲಾಗಿದೆ ಆದರೆ ಅವರು ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, “ಅಗತ್ಯವಾದ ಮಾಹಿತಿಯನ್ನು ಒದಗಿಸಲು ಮತ್ತು ಅವರ ಗಮನಕ್ಕೆ ತರಲು ಸಂಬಂಧಪಟ್ಟ ಪತ್ರಕರ್ತರು/ಸುದ್ದಿ ಸಂಸ್ಥೆಗಳಿಗೆ 91 Cr.P.C. ಇತ್ಯಾದಿಗಳ ಮೂಲಕ ನೋಟಿಸ್‌ಗಳನ್ನು ನೀಡಬೇಕು. ಈಸಂದರ್ಭದಲ್ಲಿ ಸಿಬಿಐ ತನ್ನ ಅಧಿಕಾರ ಚಲಾಯಿಸಬೇಕು” ಎಂದು ಹೇಳಿದೆ.

ಉದ್ದೇಶಪೂರ್ವಕ ನಕಲಿ ದಾಖಲೆಗಳ ಆಧಾರದಲ್ಲಿ ಪತ್ರಕರ್ತರು ಸುದ್ಧಿಯನ್ನು ಬಿತ್ತರಿಸಿದ್ದಾರೆ. ಇದೀಗ ಸಂಬಂಧಪಟ್ಟ ಪತ್ರಕರ್ತರಿಂದ ಮೂಲಗಳ ಅಂಶದ ಕುರಿತು ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

“ಅಂತಿಮ ವರದಿಯು ತನಿಖೆಯ ಅಂಶದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ, ಯಾವುದಾದರೂ ತನಿಖೆ ನಡೆಸಿದರೆ, ಅಧಿಕೃತ ದಾಖಲೆ ಅಂದರೆ ವರದಿಯು ಸೀಲ್ಡ್ ಕವರ್‌ನಲ್ಲಿ ಇರಿಸಲಾಗಿದ್ದರೂ ಒಂದು ದಿನದ ಮೊದಲು ಹೇಗೆ ಸೋರಿಕೆಯಾಯಿತು? ಇದನ್ನು ಸಿಬಿಐ ಕಚೇರಿಯಿಂದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಾಗಿತ್ತು,  ಆದರೆ ಅಂತಿಮವಾಗಿ ಮಾಧ್ಯಮಗಳಿಗೆ ತಲುಪಿತು.

“ಆಪಾದಿತ ಕೃತ್ಯಗಳಲ್ಲಿ ಒಳಗಿನವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವುದು ಮತ್ತು 17 ಪುಟಗಳ ನಕಲಿ ಪರಿಶೀಲನೆ ಟಿಪ್ಪಣಿಯನ್ನು ಸಿದ್ಧಪಡಿಸಿರುವುದನ್ನು ಸೇರಿದಂತೆ, ಅಪರಾಧಿಗಳು ಅಧಿಕೃತ ದಾಖಲೆಗಳನ್ನು ಪಡೆಯಲು ಯಾವ ವಿಧಾನ ಅನುಸರಿಸಿದರು ಎನ್ನುವುದರ ಮೇಲೆ ಸಿಬಿಐ ತನಿಖೆ ನಡೆಸಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪೂರ್ಣಗೊಳ್ಳದ ಈ ವರದಿಯನ್ನು ತಿರಸ್ಕರಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ನಿರ್ದೇಶಿಸಿದೆ. ಮಾರ್ಚ್ 24 ರೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸಂಸ್ಥೆಗೆ ನ್ಯಾಯಾಲಯವು ಸೂಚಿಸಿತು.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 2007 ರಲ್ಲಿ ಸಿಬಿಐಗೆ ಸೂಚಿಸಿತ್ತು. ಅದರ ಅನುಸರಣೆಯಲ್ಲಿ, ಮಾರ್ಚ್ 5, 2007 ರಂದು ಪ್ರಾಥಮಿಕ ವಿಚಾರಣೆಯನ್ನು ನೋಂದಾಯಿಸಲಾಯಿತು ಮತ್ತು ಅಕ್ಟೋಬರ್ 26, 2007 ರಂದು ಮುಕ್ತಾಯಗೊಳಿಸಲಾಯಿತು.

ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಲಾಯಿತು ಮತ್ತು ಸುಪ್ರೀಂ ಕೋರ್ಟ್ ಮುಂದೆ ಎರಡು ಮುಚ್ಚಿದ ಕವರ್ ಲಕೋಟೆಗಳಲ್ಲಿ ಇರಿಸಲಾಗಿದೆ.

ಫೆಬ್ರವರಿ 9, 2009 ರಂದು, ಅಂದರೆ ನಿಗದಿತ ವಿಚಾರಣೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ, ಮಾಧ್ಯಮ ಸಂಸ್ಥೆಗಳು ನಕಲಿ ದಾಖಲೆಗಳ ಆಧಾರದ ಮೇಲೆ ಸುದ್ದಿಯನ್ನು ಪ್ರಕಟಿಸಿ ಮತ್ತು ಪ್ರಸಾರ ಮಾಡಿವೆ. ಹಾಗಾಗಿ ಅಪೆಕ್ಸ್ ಕೋರ್ಟ್‌ನಲ್ಲಿ ಅಂತಿಮ ತೀರ್ಪಿಗಾಗಿ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ವಾದಿಸಲಾಗಿದೆ.

ಅಪರಿಚಿತ ವ್ಯಕ್ತಿಗಳು 2008-2009ರ ಅವಧಿಯಲ್ಲಿ ಸಿಬಿಐ ಮತ್ತು ಸಿಬಿಐ ಅಧಿಕಾರಿಗಳ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ ಅಸಲಿ, ನಕಲಿ ದಾಖಲೆ ಮುದ್ರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆ ದಾಖಲೆಗಳ ಆಧಾರದ ಮೇಲೆ ಪತ್ರಿಕೆಗಳಲ್ಲಿ ಮತ್ತು ಟಿವಿಗಳಲ್ಲಿ ಸುಳ್ಳು ಮತ್ತು ಕಟ್ಟುಕಥೆ ಸುದ್ದಿಗಳನ್ನು ಪ್ರಸಾರ ಮಾಡಿತು.

ನ್ಯೂಸ್ ಚಾನೆಲ್ ಬಳಸಿದ ದಾಖಲೆಗಳು ನಕಲಿ ಎಂದು ಅಂತಿಮ ವರದಿಯಲ್ಲಿ ವಾದಿಸಲಾಗಿದೆ. ಆದರೆ ನಕಲಿ ದಾಖಲೆಗಳ ಮೂಲವನ್ನು ಪತ್ರಕರ್ತರು ಬಹಿರಂಗಪಡಿಸದ ಕಾರಣ ಯಾರು ನಕಲಿ ದಾಖಲೆಗಳನ್ನು ರಚಿಸಿದ್ದಾರೆ ಎಂಬುದು ತಿಳಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...