HomeಮುಖಪುಟUP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

UP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪಿನೊಂದಿಗೆ ರೊಟ್ಟಿಯನ್ನು ಹೇಗೆ ತಿನ್ನಿಸಿದೆ ಎಂಬುದನ್ನು 2019ರಲ್ಲಿ ಬಹಿರಂಗಪಡಿಸಿದ್ದ ಫ್ರಿಲಾನ್ಸ್‌ ಜರ್ನಲಿಸ್ಟ್‌ ಪವನ್ ಜೈಸ್ವಾಲ್ ಅವರು ಗುರುವಾರ ಬಾಯಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ತಿಂಗಳ ಹಿಂದೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ್ದ ಜೈಸ್ವಾಲ್, “ಜೀವನದಲ್ಲಿ ನಾವು ಪ್ರಾಮಾಣಿಕವಾಗಿ ಪತ್ರಿಕೋದ್ಯಮ ಮಾಡಿದ್ದೇವೆ, ಮಕ್ಕಳಿಗೆ ಉಪ್ಪು ಮತ್ತು ರೊಟ್ಟಿ ತಿನ್ನಿಸಿದ್ದನ್ನು ಬಹಿರಂಗಪಡಿಸಿದ್ದೇವೆ. ಆದರೆ ಈಗ ನಾನು ಭರವಸೆ ಕಳೆದುಕೊಳ್ಳುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಚಿಕಿತ್ಸೆಗಾಗಿ ಹಣದ ಅಗತ್ಯವಿದೆ. ನಾನು ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದೇನೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದರು.

ಉಪ್ಪು ಮತ್ತು ರೊಟ್ಟಿಯ ವರದಿ: ಪವನ್‌ ಮೇಲೆ ಎಫ್‌ಐಆರ್‌‌

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಈ ವಿಡಿಯೋ ಮಾಡುವ ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ. ರಾಜ್ಯ ಸರ್ಕಾರದ ಇಮೇಜ್‌‌ ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ, ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್‌ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿತ್ತು.

ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ 2019ರ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೂರು ತಿಂಗಳ ತನಿಖೆ ನಡೆದ ಬಳಿಕ ಜೈಸ್ವಾಲ್ ಅವರನ್ನು ದೋಷಮುಕ್ತಗೊಳಿಸಲಾಯಿತು. ಆದರೆ ಪಾಲ್ ವಿರುದ್ಧದ ಆರೋಪಗಳು ನಿಜವೆಂದು ಹೇಳಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...