HomeಮುಖಪುಟUP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

UP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪಿನೊಂದಿಗೆ ರೊಟ್ಟಿಯನ್ನು ಹೇಗೆ ತಿನ್ನಿಸಿದೆ ಎಂಬುದನ್ನು 2019ರಲ್ಲಿ ಬಹಿರಂಗಪಡಿಸಿದ್ದ ಫ್ರಿಲಾನ್ಸ್‌ ಜರ್ನಲಿಸ್ಟ್‌ ಪವನ್ ಜೈಸ್ವಾಲ್ ಅವರು ಗುರುವಾರ ಬಾಯಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ತಿಂಗಳ ಹಿಂದೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ್ದ ಜೈಸ್ವಾಲ್, “ಜೀವನದಲ್ಲಿ ನಾವು ಪ್ರಾಮಾಣಿಕವಾಗಿ ಪತ್ರಿಕೋದ್ಯಮ ಮಾಡಿದ್ದೇವೆ, ಮಕ್ಕಳಿಗೆ ಉಪ್ಪು ಮತ್ತು ರೊಟ್ಟಿ ತಿನ್ನಿಸಿದ್ದನ್ನು ಬಹಿರಂಗಪಡಿಸಿದ್ದೇವೆ. ಆದರೆ ಈಗ ನಾನು ಭರವಸೆ ಕಳೆದುಕೊಳ್ಳುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಚಿಕಿತ್ಸೆಗಾಗಿ ಹಣದ ಅಗತ್ಯವಿದೆ. ನಾನು ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದೇನೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದರು.

ಉಪ್ಪು ಮತ್ತು ರೊಟ್ಟಿಯ ವರದಿ: ಪವನ್‌ ಮೇಲೆ ಎಫ್‌ಐಆರ್‌‌

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಈ ವಿಡಿಯೋ ಮಾಡುವ ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ. ರಾಜ್ಯ ಸರ್ಕಾರದ ಇಮೇಜ್‌‌ ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ, ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್‌ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿತ್ತು.

ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ 2019ರ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೂರು ತಿಂಗಳ ತನಿಖೆ ನಡೆದ ಬಳಿಕ ಜೈಸ್ವಾಲ್ ಅವರನ್ನು ದೋಷಮುಕ್ತಗೊಳಿಸಲಾಯಿತು. ಆದರೆ ಪಾಲ್ ವಿರುದ್ಧದ ಆರೋಪಗಳು ನಿಜವೆಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....