HomeಮುಖಪುಟUP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

UP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪಿನೊಂದಿಗೆ ರೊಟ್ಟಿಯನ್ನು ಹೇಗೆ ತಿನ್ನಿಸಿದೆ ಎಂಬುದನ್ನು 2019ರಲ್ಲಿ ಬಹಿರಂಗಪಡಿಸಿದ್ದ ಫ್ರಿಲಾನ್ಸ್‌ ಜರ್ನಲಿಸ್ಟ್‌ ಪವನ್ ಜೈಸ್ವಾಲ್ ಅವರು ಗುರುವಾರ ಬಾಯಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ತಿಂಗಳ ಹಿಂದೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ್ದ ಜೈಸ್ವಾಲ್, “ಜೀವನದಲ್ಲಿ ನಾವು ಪ್ರಾಮಾಣಿಕವಾಗಿ ಪತ್ರಿಕೋದ್ಯಮ ಮಾಡಿದ್ದೇವೆ, ಮಕ್ಕಳಿಗೆ ಉಪ್ಪು ಮತ್ತು ರೊಟ್ಟಿ ತಿನ್ನಿಸಿದ್ದನ್ನು ಬಹಿರಂಗಪಡಿಸಿದ್ದೇವೆ. ಆದರೆ ಈಗ ನಾನು ಭರವಸೆ ಕಳೆದುಕೊಳ್ಳುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಚಿಕಿತ್ಸೆಗಾಗಿ ಹಣದ ಅಗತ್ಯವಿದೆ. ನಾನು ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದೇನೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದರು.

ಉಪ್ಪು ಮತ್ತು ರೊಟ್ಟಿಯ ವರದಿ: ಪವನ್‌ ಮೇಲೆ ಎಫ್‌ಐಆರ್‌‌

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಈ ವಿಡಿಯೋ ಮಾಡುವ ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ. ರಾಜ್ಯ ಸರ್ಕಾರದ ಇಮೇಜ್‌‌ ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ, ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್‌ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿತ್ತು.

ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ 2019ರ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೂರು ತಿಂಗಳ ತನಿಖೆ ನಡೆದ ಬಳಿಕ ಜೈಸ್ವಾಲ್ ಅವರನ್ನು ದೋಷಮುಕ್ತಗೊಳಿಸಲಾಯಿತು. ಆದರೆ ಪಾಲ್ ವಿರುದ್ಧದ ಆರೋಪಗಳು ನಿಜವೆಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...