HomeಮುಖಪುಟUP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

UP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪಿನೊಂದಿಗೆ ರೊಟ್ಟಿಯನ್ನು ಹೇಗೆ ತಿನ್ನಿಸಿದೆ ಎಂಬುದನ್ನು 2019ರಲ್ಲಿ ಬಹಿರಂಗಪಡಿಸಿದ್ದ ಫ್ರಿಲಾನ್ಸ್‌ ಜರ್ನಲಿಸ್ಟ್‌ ಪವನ್ ಜೈಸ್ವಾಲ್ ಅವರು ಗುರುವಾರ ಬಾಯಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ತಿಂಗಳ ಹಿಂದೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ್ದ ಜೈಸ್ವಾಲ್, “ಜೀವನದಲ್ಲಿ ನಾವು ಪ್ರಾಮಾಣಿಕವಾಗಿ ಪತ್ರಿಕೋದ್ಯಮ ಮಾಡಿದ್ದೇವೆ, ಮಕ್ಕಳಿಗೆ ಉಪ್ಪು ಮತ್ತು ರೊಟ್ಟಿ ತಿನ್ನಿಸಿದ್ದನ್ನು ಬಹಿರಂಗಪಡಿಸಿದ್ದೇವೆ. ಆದರೆ ಈಗ ನಾನು ಭರವಸೆ ಕಳೆದುಕೊಳ್ಳುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಚಿಕಿತ್ಸೆಗಾಗಿ ಹಣದ ಅಗತ್ಯವಿದೆ. ನಾನು ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದೇನೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದರು.

ಉಪ್ಪು ಮತ್ತು ರೊಟ್ಟಿಯ ವರದಿ: ಪವನ್‌ ಮೇಲೆ ಎಫ್‌ಐಆರ್‌‌

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಈ ವಿಡಿಯೋ ಮಾಡುವ ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ. ರಾಜ್ಯ ಸರ್ಕಾರದ ಇಮೇಜ್‌‌ ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ, ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್‌ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿತ್ತು.

ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ 2019ರ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೂರು ತಿಂಗಳ ತನಿಖೆ ನಡೆದ ಬಳಿಕ ಜೈಸ್ವಾಲ್ ಅವರನ್ನು ದೋಷಮುಕ್ತಗೊಳಿಸಲಾಯಿತು. ಆದರೆ ಪಾಲ್ ವಿರುದ್ಧದ ಆರೋಪಗಳು ನಿಜವೆಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...