HomeಮುಖಪುಟUP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

UP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪಿನೊಂದಿಗೆ ರೊಟ್ಟಿಯನ್ನು ಹೇಗೆ ತಿನ್ನಿಸಿದೆ ಎಂಬುದನ್ನು 2019ರಲ್ಲಿ ಬಹಿರಂಗಪಡಿಸಿದ್ದ ಫ್ರಿಲಾನ್ಸ್‌ ಜರ್ನಲಿಸ್ಟ್‌ ಪವನ್ ಜೈಸ್ವಾಲ್ ಅವರು ಗುರುವಾರ ಬಾಯಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ತಿಂಗಳ ಹಿಂದೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ್ದ ಜೈಸ್ವಾಲ್, “ಜೀವನದಲ್ಲಿ ನಾವು ಪ್ರಾಮಾಣಿಕವಾಗಿ ಪತ್ರಿಕೋದ್ಯಮ ಮಾಡಿದ್ದೇವೆ, ಮಕ್ಕಳಿಗೆ ಉಪ್ಪು ಮತ್ತು ರೊಟ್ಟಿ ತಿನ್ನಿಸಿದ್ದನ್ನು ಬಹಿರಂಗಪಡಿಸಿದ್ದೇವೆ. ಆದರೆ ಈಗ ನಾನು ಭರವಸೆ ಕಳೆದುಕೊಳ್ಳುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಚಿಕಿತ್ಸೆಗಾಗಿ ಹಣದ ಅಗತ್ಯವಿದೆ. ನಾನು ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದೇನೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದರು.

ಉಪ್ಪು ಮತ್ತು ರೊಟ್ಟಿಯ ವರದಿ: ಪವನ್‌ ಮೇಲೆ ಎಫ್‌ಐಆರ್‌‌

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಈ ವಿಡಿಯೋ ಮಾಡುವ ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ. ರಾಜ್ಯ ಸರ್ಕಾರದ ಇಮೇಜ್‌‌ ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ, ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್‌ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿತ್ತು.

ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ 2019ರ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೂರು ತಿಂಗಳ ತನಿಖೆ ನಡೆದ ಬಳಿಕ ಜೈಸ್ವಾಲ್ ಅವರನ್ನು ದೋಷಮುಕ್ತಗೊಳಿಸಲಾಯಿತು. ಆದರೆ ಪಾಲ್ ವಿರುದ್ಧದ ಆರೋಪಗಳು ನಿಜವೆಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...