Homeಮುಖಪುಟಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು...

ಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು ಪ್ರಶ್ನಿಸಿದ DMK

1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ.

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳ ನಡುವೆ ವಾಕ್ಸಮರ ಆರಂಭವಾಗಿದೆ. ಹೊಸ ಶಿಕ್ಷಣ ನೀತಿ ಮತ್ತು ನೀಟ್ ಪ್ರವೇಶ ಪರೀಕ್ಷೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಕೈಗೊಂಡಿದನ್ನು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ‘ಅವಿದ್ಯಾವಂತರು ಆಡಳಿತದ ಚುಕ್ಕಾಣಿ ಹಿಡಿದರೆ ಹೀಗಾಗುತ್ತದೆ’ ಎಂದು ಟೀಕಿಸಿದ್ದಾರೆ. ಅಲ್ಲದೆ ಕುಟುಂಬ ರಾಜಕಾರಣದ ಮೂಲಕ ಹಣ ಲೂಟಿ ಹೊಡೆಯುವ ಪಂಚಾಯತ್ ಆಗಿದೆ ಎಂದು ಡಿಎಂಕೆ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ತಮಿಳುನಾಡಿನ ಕರೈಕುಡಿಯಲ್ಲಿ ಜೆ.ಪಿ ನಡ್ಡಾ ಮಾತನಾಡುತ್ತಾ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿದ್ದು ವಂಶವಾಹಿ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಆಡಳಿತಾರೂಢ ಡಿಎಂಕೆ ಸರ್ಕಾರವು “ಕೇಂದ್ರದಲ್ಲಿ ಅಧಿಕಾರದಲ್ಲಿರುವವರ ಶೈಕ್ಷಣಿಕ ಅರ್ಹತೆ ಕೇಳುವ ಮಟ್ಟಕ್ಕೆ ತಾನು ಇಳಿಯುವುದಿಲ್ಲ” ಎಂದು ತಿರುಗೇಟು ನೀಡಿದೆ. ಕುಟುಂಬ ರಾಜಕಾರಣ ಟೀಕೆಗೆ ಪ್ರತಿಕ್ರಿಯಿಸಿ ‘ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕ ಬಾರಿಸಿದ್ದಾರೆ’ ಎಂದು ಪ್ರಶ್ನಿಸಿದೆ.

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಬಿಜೆಪಿ ಅತಿ ಹೆಚ್ಚು ವಂಶವಾಹಿ ರಾಜಕಾರಣ ಮಾಡುತ್ತಿದೆ. ಗೃಹ ಸಚಿವ ಅಮಿತ್‌ ಶಾರವರ ಮಗ ಜಯ್ ಶಾರವರು ಯಾವುದೇ ಅನುಭವ, ಅರ್ಹತೆ ಇಲ್ಲದಿದ್ದರೂ ಎರಡೆರಡೂ ಬಾರಿಗೆ ಭಾರತದ ಅತಿ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಬಿಸಿಸಿಐನ ಕಾರ್ಯದರರ್ಶಿಯಾಗಿದ್ದು ಹೇಗೆ ಎಂದು ಡಿಎಂಕೆ ವಕ್ತಾರ ಎ.ಶರವಣನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಂಶಾಡಳಿತ ರಾಜಕಾರಣದ ವಿರುದ್ಧ ಗುಡುಗಿದ ಮೋದಿ: ಅವರು ಮರೆತ ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಇಲ್ಲಿದೆ

ದ್ವೇ‍ಷ ಮತ್ತು ವಿಭಜಕ ಸಿದ್ದಾಂತದ ಸೃಷ್ಟಿಕರ್ತ ಬಿಜೆಪಿ ಪಕ್ಷವಾಗಿದೆ. ಅದು ಬಿಜೆಪಿಯ ನಿಜವಾದ ಮುಖವಾಗಿದೆ. ಯುವಜನರಿಗೆ ಉದ್ಯೋಗ ನೀಡಲು ವಿಫಲವಾಗಿರುವ ಬಿಜೆಪಿಯನ್ನು 2024ರಲ್ಲಿ ತಮಿಳುನಾಡಿನ ಜನ ತಿರಸ್ಕರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯು ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಕಳೆದ ಎರಡು ಚುನಾವಣೆಗಳ ಫಲಿತಾಂಶ ನಿರಾಶದಾಯಕವಾಗಿದೆ. ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ ಒಂದನ್ನು ಸಹ ಗೆಲ್ಲಲು ಸಾಧ್ಯವಾಗಿಲ್ಲ. ಅಲ್ಲದೇ 234 ಕ್ಷೇತ್ರಗಳ ವಿಧಾನಸಭೆಯಲ್ಲಿ ಕೇವಲ 4 ಸದಸ್ಯರನ್ನು ಮಾತ್ರ ಹೊಂದಿದೆ. ಎಐಎಡಿಎಂಕೆ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಅದು ಸದ್ಯ ಎಐಎಡಿಎಂಕೆ ಬಿಕ್ಕಟ್ಟಿನ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ.

ಇನ್ನು ಜೆ.ಪಿ ನಡ್ಡಾರವರು ಕುಟುಂಬ ರಾಜಕಾರಣವನ್ನು ಟೀಕಿಸಿದ್ದಾರೆ. ಆದರೆ ಅವರೆ ಅದರ ಫಲಾನುಭವಿಗಳು ಎಂದು ವಿಪಕ್ಷಗಳು ಟೀಕಿಸಿವೆ. ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ. ಅದರ ಪೂರ್ಣ ವರದಿ ಓದಲು, ಬಿಜೆಪಿ ವಂಶವಾಹಿನಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...