Homeಮುಖಪುಟಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು...

ಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು ಪ್ರಶ್ನಿಸಿದ DMK

1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ.

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳ ನಡುವೆ ವಾಕ್ಸಮರ ಆರಂಭವಾಗಿದೆ. ಹೊಸ ಶಿಕ್ಷಣ ನೀತಿ ಮತ್ತು ನೀಟ್ ಪ್ರವೇಶ ಪರೀಕ್ಷೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಕೈಗೊಂಡಿದನ್ನು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ‘ಅವಿದ್ಯಾವಂತರು ಆಡಳಿತದ ಚುಕ್ಕಾಣಿ ಹಿಡಿದರೆ ಹೀಗಾಗುತ್ತದೆ’ ಎಂದು ಟೀಕಿಸಿದ್ದಾರೆ. ಅಲ್ಲದೆ ಕುಟುಂಬ ರಾಜಕಾರಣದ ಮೂಲಕ ಹಣ ಲೂಟಿ ಹೊಡೆಯುವ ಪಂಚಾಯತ್ ಆಗಿದೆ ಎಂದು ಡಿಎಂಕೆ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ತಮಿಳುನಾಡಿನ ಕರೈಕುಡಿಯಲ್ಲಿ ಜೆ.ಪಿ ನಡ್ಡಾ ಮಾತನಾಡುತ್ತಾ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿದ್ದು ವಂಶವಾಹಿ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಆಡಳಿತಾರೂಢ ಡಿಎಂಕೆ ಸರ್ಕಾರವು “ಕೇಂದ್ರದಲ್ಲಿ ಅಧಿಕಾರದಲ್ಲಿರುವವರ ಶೈಕ್ಷಣಿಕ ಅರ್ಹತೆ ಕೇಳುವ ಮಟ್ಟಕ್ಕೆ ತಾನು ಇಳಿಯುವುದಿಲ್ಲ” ಎಂದು ತಿರುಗೇಟು ನೀಡಿದೆ. ಕುಟುಂಬ ರಾಜಕಾರಣ ಟೀಕೆಗೆ ಪ್ರತಿಕ್ರಿಯಿಸಿ ‘ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕ ಬಾರಿಸಿದ್ದಾರೆ’ ಎಂದು ಪ್ರಶ್ನಿಸಿದೆ.

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಬಿಜೆಪಿ ಅತಿ ಹೆಚ್ಚು ವಂಶವಾಹಿ ರಾಜಕಾರಣ ಮಾಡುತ್ತಿದೆ. ಗೃಹ ಸಚಿವ ಅಮಿತ್‌ ಶಾರವರ ಮಗ ಜಯ್ ಶಾರವರು ಯಾವುದೇ ಅನುಭವ, ಅರ್ಹತೆ ಇಲ್ಲದಿದ್ದರೂ ಎರಡೆರಡೂ ಬಾರಿಗೆ ಭಾರತದ ಅತಿ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಬಿಸಿಸಿಐನ ಕಾರ್ಯದರರ್ಶಿಯಾಗಿದ್ದು ಹೇಗೆ ಎಂದು ಡಿಎಂಕೆ ವಕ್ತಾರ ಎ.ಶರವಣನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಂಶಾಡಳಿತ ರಾಜಕಾರಣದ ವಿರುದ್ಧ ಗುಡುಗಿದ ಮೋದಿ: ಅವರು ಮರೆತ ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಇಲ್ಲಿದೆ

ದ್ವೇ‍ಷ ಮತ್ತು ವಿಭಜಕ ಸಿದ್ದಾಂತದ ಸೃಷ್ಟಿಕರ್ತ ಬಿಜೆಪಿ ಪಕ್ಷವಾಗಿದೆ. ಅದು ಬಿಜೆಪಿಯ ನಿಜವಾದ ಮುಖವಾಗಿದೆ. ಯುವಜನರಿಗೆ ಉದ್ಯೋಗ ನೀಡಲು ವಿಫಲವಾಗಿರುವ ಬಿಜೆಪಿಯನ್ನು 2024ರಲ್ಲಿ ತಮಿಳುನಾಡಿನ ಜನ ತಿರಸ್ಕರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯು ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಕಳೆದ ಎರಡು ಚುನಾವಣೆಗಳ ಫಲಿತಾಂಶ ನಿರಾಶದಾಯಕವಾಗಿದೆ. ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ ಒಂದನ್ನು ಸಹ ಗೆಲ್ಲಲು ಸಾಧ್ಯವಾಗಿಲ್ಲ. ಅಲ್ಲದೇ 234 ಕ್ಷೇತ್ರಗಳ ವಿಧಾನಸಭೆಯಲ್ಲಿ ಕೇವಲ 4 ಸದಸ್ಯರನ್ನು ಮಾತ್ರ ಹೊಂದಿದೆ. ಎಐಎಡಿಎಂಕೆ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಅದು ಸದ್ಯ ಎಐಎಡಿಎಂಕೆ ಬಿಕ್ಕಟ್ಟಿನ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ.

ಇನ್ನು ಜೆ.ಪಿ ನಡ್ಡಾರವರು ಕುಟುಂಬ ರಾಜಕಾರಣವನ್ನು ಟೀಕಿಸಿದ್ದಾರೆ. ಆದರೆ ಅವರೆ ಅದರ ಫಲಾನುಭವಿಗಳು ಎಂದು ವಿಪಕ್ಷಗಳು ಟೀಕಿಸಿವೆ. ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ. ಅದರ ಪೂರ್ಣ ವರದಿ ಓದಲು, ಬಿಜೆಪಿ ವಂಶವಾಹಿನಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...