Homeಮುಖಪುಟಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು...

ಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು ಪ್ರಶ್ನಿಸಿದ DMK

1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ.

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳ ನಡುವೆ ವಾಕ್ಸಮರ ಆರಂಭವಾಗಿದೆ. ಹೊಸ ಶಿಕ್ಷಣ ನೀತಿ ಮತ್ತು ನೀಟ್ ಪ್ರವೇಶ ಪರೀಕ್ಷೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಕೈಗೊಂಡಿದನ್ನು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ‘ಅವಿದ್ಯಾವಂತರು ಆಡಳಿತದ ಚುಕ್ಕಾಣಿ ಹಿಡಿದರೆ ಹೀಗಾಗುತ್ತದೆ’ ಎಂದು ಟೀಕಿಸಿದ್ದಾರೆ. ಅಲ್ಲದೆ ಕುಟುಂಬ ರಾಜಕಾರಣದ ಮೂಲಕ ಹಣ ಲೂಟಿ ಹೊಡೆಯುವ ಪಂಚಾಯತ್ ಆಗಿದೆ ಎಂದು ಡಿಎಂಕೆ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ತಮಿಳುನಾಡಿನ ಕರೈಕುಡಿಯಲ್ಲಿ ಜೆ.ಪಿ ನಡ್ಡಾ ಮಾತನಾಡುತ್ತಾ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿದ್ದು ವಂಶವಾಹಿ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಆಡಳಿತಾರೂಢ ಡಿಎಂಕೆ ಸರ್ಕಾರವು “ಕೇಂದ್ರದಲ್ಲಿ ಅಧಿಕಾರದಲ್ಲಿರುವವರ ಶೈಕ್ಷಣಿಕ ಅರ್ಹತೆ ಕೇಳುವ ಮಟ್ಟಕ್ಕೆ ತಾನು ಇಳಿಯುವುದಿಲ್ಲ” ಎಂದು ತಿರುಗೇಟು ನೀಡಿದೆ. ಕುಟುಂಬ ರಾಜಕಾರಣ ಟೀಕೆಗೆ ಪ್ರತಿಕ್ರಿಯಿಸಿ ‘ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕ ಬಾರಿಸಿದ್ದಾರೆ’ ಎಂದು ಪ್ರಶ್ನಿಸಿದೆ.

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಬಿಜೆಪಿ ಅತಿ ಹೆಚ್ಚು ವಂಶವಾಹಿ ರಾಜಕಾರಣ ಮಾಡುತ್ತಿದೆ. ಗೃಹ ಸಚಿವ ಅಮಿತ್‌ ಶಾರವರ ಮಗ ಜಯ್ ಶಾರವರು ಯಾವುದೇ ಅನುಭವ, ಅರ್ಹತೆ ಇಲ್ಲದಿದ್ದರೂ ಎರಡೆರಡೂ ಬಾರಿಗೆ ಭಾರತದ ಅತಿ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಬಿಸಿಸಿಐನ ಕಾರ್ಯದರರ್ಶಿಯಾಗಿದ್ದು ಹೇಗೆ ಎಂದು ಡಿಎಂಕೆ ವಕ್ತಾರ ಎ.ಶರವಣನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಂಶಾಡಳಿತ ರಾಜಕಾರಣದ ವಿರುದ್ಧ ಗುಡುಗಿದ ಮೋದಿ: ಅವರು ಮರೆತ ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಇಲ್ಲಿದೆ

ದ್ವೇ‍ಷ ಮತ್ತು ವಿಭಜಕ ಸಿದ್ದಾಂತದ ಸೃಷ್ಟಿಕರ್ತ ಬಿಜೆಪಿ ಪಕ್ಷವಾಗಿದೆ. ಅದು ಬಿಜೆಪಿಯ ನಿಜವಾದ ಮುಖವಾಗಿದೆ. ಯುವಜನರಿಗೆ ಉದ್ಯೋಗ ನೀಡಲು ವಿಫಲವಾಗಿರುವ ಬಿಜೆಪಿಯನ್ನು 2024ರಲ್ಲಿ ತಮಿಳುನಾಡಿನ ಜನ ತಿರಸ್ಕರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯು ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಕಳೆದ ಎರಡು ಚುನಾವಣೆಗಳ ಫಲಿತಾಂಶ ನಿರಾಶದಾಯಕವಾಗಿದೆ. ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ ಒಂದನ್ನು ಸಹ ಗೆಲ್ಲಲು ಸಾಧ್ಯವಾಗಿಲ್ಲ. ಅಲ್ಲದೇ 234 ಕ್ಷೇತ್ರಗಳ ವಿಧಾನಸಭೆಯಲ್ಲಿ ಕೇವಲ 4 ಸದಸ್ಯರನ್ನು ಮಾತ್ರ ಹೊಂದಿದೆ. ಎಐಎಡಿಎಂಕೆ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಅದು ಸದ್ಯ ಎಐಎಡಿಎಂಕೆ ಬಿಕ್ಕಟ್ಟಿನ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ.

ಇನ್ನು ಜೆ.ಪಿ ನಡ್ಡಾರವರು ಕುಟುಂಬ ರಾಜಕಾರಣವನ್ನು ಟೀಕಿಸಿದ್ದಾರೆ. ಆದರೆ ಅವರೆ ಅದರ ಫಲಾನುಭವಿಗಳು ಎಂದು ವಿಪಕ್ಷಗಳು ಟೀಕಿಸಿವೆ. ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ. ಅದರ ಪೂರ್ಣ ವರದಿ ಓದಲು, ಬಿಜೆಪಿ ವಂಶವಾಹಿನಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...