Homeಮುಖಪುಟಜೆಪಿ ನಡ್ಡಾ v/s ಅನುರಾಗ್ ಠಾಕೂರ್: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೊಳಗೆ ಭಿನ್ನಮತ

ಜೆಪಿ ನಡ್ಡಾ v/s ಅನುರಾಗ್ ಠಾಕೂರ್: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೊಳಗೆ ಭಿನ್ನಮತ

ಹಿಮಾಚಲಪ್ರದೇಶ ವಿಧಾನಸಭೆಗೆ ಶನಿವಾರ ಮತದಾನ ನಡೆದಿದೆ. ಬಿಜೆಪಿಯೊಳಗಿನ ಭಿನ್ನಮತ ಫಲಿತಾಂಶದ ಮೇಲೆ ಪ್ರಭಾವಿಸಲಿದೆಯೇ?

- Advertisement -
- Advertisement -

ಹಿಮಾಚಲ ಪ್ರದೇಶದ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಕಾರ್ಯಕರ್ತರು, ಮುಖಂಡರು, ಸಹಾನುಭೂತಿ ಹೊಂದಿರುವವರಿಗೆ ಇದು ಗೊತ್ತಿದ್ದರೂ ಬಹಿರಂಗವಾಗಿ ಮಾತನಾಡುವುದಿಲ್ಲ. ಕ್ಯಾಮೆರಾ ಮುಂದೆ ಬಿಜೆಪಿ ಒಗ್ಗಟ್ಟು ಪ್ರದರ್ಶಿಸುತ್ತದೆ. ಆದರೆ ಈಗ ಕೇಂದ್ರ ನಾಯಕತ್ವದಲ್ಲಿ ಗುರುತಿಸಿಕೊಂಡಿರುವ ಗುಡ್ಡಗಾಡು ರಾಜ್ಯದ ಇಬ್ಬರು ನಾಯಕರ ನಡುವೆ ಸಂಬಂಧ ಸರಿ ಇಲ್ಲ ಎಂದು ಇತ್ತೀಚೆಗೆ ‘ನ್ಯೂಸ್ ಲಾಂಡ್ರಿ’ ವರದಿ ಮಾಡಿದೆ.

ಹಿಮಾಚಲಪ್ರದೇಶ ವಿಧಾನಸಭೆಗೆ ಶನಿವಾರ ಮತದಾನ ನಡೆದಿದೆ. ಶೇ.65.20ರಷ್ಟು ಮತದಾನವಾಗಿದೆ. ಆದರೆ ಬಿಜೆಪಿಯು ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೇ ಚುನಾವಣೆಯನ್ನು ಎದುರಿಸಿದೆ ಎಂಬುದು ರಾಜಕೀಯ ಪಡೆಸಾಲೆಯಲ್ಲಿ ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಆಗಸ್ಟ್‌ನಲ್ಲಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿಯಾದಾಗ ಭಿನ್ನಾಭಿಪ್ರಾಯ ಸ್ಪಷ್ಟವಾಗಿ ಕಂಡುಬಂತು. ಎಎನ್‌ಐ ವರದಿ ಪ್ರಕಾರ, ಅನುರಾಗ್ ಅವರು ಹಿಮಾಚಲ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ನಡ್ಡಾ ಅವರನ್ನು ಭೇಟಿಯಾಗಿದ್ದರು.

ಆದರೆ ಈ ಸಭೆಗೆ ಸಂಬಂಧಿಸಿದಂತೆ ಎಎನ್‌ಐ ಪ್ರಕಟಿಸಿದ ವೀಡಿಯೊ ತುಣುಕಿನಲ್ಲಿ ಅನುರಾಗ್ ಮತ್ತು ನಡ್ಡಾ ಮೀಟರ್‌ಗಳ ಅಂತರದಲ್ಲಿ ನಿಂತಿರುವುದು ಕಂಡು ಬಂತು. ಯಾವುದೇ ಸಂವಹನವನ್ನೂ ನಡೆಸಲಿಲ್ಲ. ಜೈರಾಮ್ ಠಾಕೂರ್ ಅವರು ನಡ್ಡಾ ಅವರಿಗೆ ಪುಷ್ಪಗುಚ್ಛ, ಸಾಂಪ್ರದಾಯಿಕ ಹಿಮಾಚಲಿ ಕ್ಯಾಪ್ ಮತ್ತು ಶಾಲು ನೀಡಿದರು. ಇಬ್ಬರೂ ಅಪ್ಪುಗೆ ಹಾಗೂ ಹಸ್ತಲಾಘವ ಮಾಡಿದರು. ಆದರೆ ನಡ್ಡಾ ಅವರು ನಗುತ್ತಾ ಪಕ್ಕದಲ್ಲಿ ನಿಂತಿರುವ ಅನುರಾಗ್ ಕಡೆಗೆ ನೋಡಲೇ ಇಲ್ಲ.

ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಮತದಾನವಾಗಿದೆ. ಆದರೆ ರಾಜ್ಯದ ಸುಮಾರು ಮೂರನೇ ಒಂದು ಭಾಗದಷ್ಟು ಸ್ಥಳೀಯ ಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದ್ದಾರೆ ಎಂದು ಚುನಾವಣಾ ಪೂರ್ವದಲ್ಲಿ ಪ್ರಕಟವಾಗಿರುವ ‘ನ್ಯೂಸ್‌ಲಾಂಡ್ರಿ ವರದಿ ’ಉಲ್ಲೇಖಿಸಿದೆ. ಅವರಲ್ಲಿ ಕೆಲವರು ಪ್ರಮುಖ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದಾರೆ. ಅಂಥವರಲ್ಲಿ ಆರು ಮಂದಿಯನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಈ ಕುರಿತು ವಿಸ್ತೃತವಾಗಿ ವರದಿ ಮಾಡಿರುವ ನ್ಯೂಸ್‌ಲಾಂಡ್ರಿ, “ಸ್ಥಳೀಯ ಬಂಡಾಯವು ಹೈಕಮಾಂಡ್‌ನೊಳಗಿನ ಹಗೆತನದೊಂದಿಗೆ ನಂಟು ಹೊಂದಿದೆ” ಎಂದು ವಿಶ್ಲೇಷಿಸಿದೆ.

ಹಿಮಾಚಲಪ್ರದೇಶದ ಬಿಜೆಪಿಯೊಳಗೆ ನಡ್ಡಾ ಮತ್ತು ಅನುರಾಗ್ ಎಂದು ಎರಡು ಬಣಗಳಾಗಿವೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೇರಿದಂತೆ ನಡ್ಡಾ ಅವರಿಗೆ ಆಪ್ತರು ಎನ್ನಲಾದ ಹೆಚ್ಚಿನವರು ಬಿಜೆಪಿಯ ಟಿಕೆಟ್ ಪಡೆದಿದ್ದಾರೆ. ಆದರೆ ಹೊರಗುಳಿದಿರುವ ಮತ್ತು ‘ಬಂಡಾಯಗಾರರು’ ಎಂದು ಕರೆಯಲ್ಪಟ್ಟಿರುವ ಗಮನಾರ್ಹ ಸಂಖ್ಯೆಯ ನಾಯಕರು ಅನುರಾಗ್‌ ಠಾಕೂರ್ ಮತ್ತು ಅವರ ತಂದೆ, ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಾಲ್ ಅವರಿಗೆ ನಿಷ್ಠರೆಂಬುದು ಚರ್ಚೆಯ ವಿಷಯವಾಗಿದೆ.

ನಡ್ಡಾ ಮತ್ತು ಅನುರಾಗ್ ಅವರ ನಡುವಿನ ಭಿನ್ನಾಭಿಪ್ರಾಯಗಳು 2020ರಲ್ಲಿ ಸಾರ್ವಜನಿಕವಾಗಿ ಹೊರಬಿದ್ದವು.  ನವೆಂಬರ್‌ನಲ್ಲಿ ಕಂಗ್ರಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರಾದ ಅನುರಾಗ್‌ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ ‘ಕನಸಿನ ಯೋಜನೆ’ ಎಂದೇ ಭಾವಿಸಿರುವ ವಿಶ್ವವಿದ್ಯಾನಿಲಯ ಯೋಜನೆಗೆ ಭೂಮಿ ವರ್ಗಾವಣೆಯಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡಿದ್ದನ್ನು ಅವರು ವಿರೋಧಿಸಿದ್ದರು.

ಹಿಮಾಚಲ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ (CUHP) ಸಂಬಂಧಿಸಿದ ಪ್ರಶ್ನೆ ಇದಾಗಿತ್ತು. “ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರ ಅವಧಿಯಲ್ಲಿ 11 ವರ್ಷಗಳ ಹಿಂದೆ ರಾಜ್ಯಕ್ಕೆ ಮಂಜೂರು ಮಾಡಿದ ಯೋಜನೆಯನ್ನು ಪೂರ್ಣಗೊಳಿಸಲು ವಿಳಂಬವಾಗುತ್ತಿದೆ. ಇದಕ್ಕೆ ಸಿಎಂ ಕೂಡ ಕಾರಣ” ಎಂದು ದೂರಿದ್ದಾಗಿ ವರದಿಯಾಗಿತ್ತು.

ಜೈರಾಮ್‌ಗೆ ಮುಜುಗರವಾಯಿತು. “ಈ ವಿಷಯವನ್ನು ಅನುರಾಗ್ ಠಾಕೂರ್ ಅವರು ಸಾರ್ವಜನಿಕ ವೇದಿಕೆಯಲ್ಲಿ ಪ್ರಸ್ತಾಪಿಸಬಾರದಿತ್ತು” ಎಂದಿರುವುದಾಗಿ ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿತ್ತು.

ಎರಡು ದಿನಗಳ ನಂತರ, ನಡ್ಡಾ ಅವರು ಜೈರಾಮ್ ಅವರ ಪರ ನಿಂತರು. ರ್ಯಾಲಿಯಲ್ಲಿ ಸಿಎಂ ಅವರನ್ನು ಶ್ಲಾಘಿಸಿದ ಅವರು, “ಅಭಿವೃದ್ಧಿಯ ವಿಷಯಕ್ಕೆ ಬಂದಾಗ ತಾಳ್ಮೆಯಿಂದಿರಬೇಕು” ಎಂದು ಅನುರಾಗ್ ಅವರಿಗೆ ಕುಟುಕಿದ್ದರು.

ಜೈರಾಮ್ ಮತ್ತು ನಡ್ಡಾ 1980ರ ದಶಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸದಸ್ಯರಾಗಿ ಹಿಮಾಚಲ ರಾಜಕೀಯದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಡ್ಡಾ ಅವರು ಬಿಹಾರದಲ್ಲಿ ಜನಿಸಿದವರು. ಆದರೆ 1980ರ ದಶಕದ ಆರಂಭದಲ್ಲಿ ಎಬಿವಿಪಿ ಮೂಲಕ ಹಿಮಾಚಲದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡರು.

ಅನುರಾಗ್ ತಂದೆ ಧುಮಾಲ್ ಅವರು ನಡ್ಡಾಗಿಂತ ಹಿರಿಯವರು. 1982ರಲ್ಲಿ ಧುಮಾಲ್ ಅವರು ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಆ ಸಮಯದಲ್ಲಿ ನಡ್ಡಾ ಅವರು ಹಿಮಾಚಲದಲ್ಲಿ ಎಬಿವಿಪಿಯ ಕಾರ್ಯದರ್ಶಿಯಾಗಿದ್ದರು.

1989ರಲ್ಲಿ ಧುಮಾಲ್ ಅವರು ಮೊದಲ ಭಾರಿಗೆ ಲೋಕಸಭೆಯನ್ನು ಪ್ರವೇಶಿಸಿದಾಗ, ಆ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ನಡ್ಡಾ ಅವರು ಬಿಜೆಪಿ ಯುವಮೋರ್ಚಾದ ಉಸ್ತುವಾರಿಯಾಗಿದ್ದರು.

ನಡ್ಡಾ 1993ರಲ್ಲಿ ಹಿಮಾಚಲದಿಂದ ಮೊದಲ ಬಾರಿಗೆ ಟಿಕೆಟ್ ಪಡೆದರು. ಅವರು ತಮ್ಮ ಸ್ಥಾನವನ್ನು ಗೆದ್ದರು. ಆದರೆ ಕಾಂಗ್ರೆಸ್ ಬಹುಮತ ಗಳಿಸಿತು. ಪ್ರತಿಪಕ್ಷದ ನಾಯಕರಾಗಿ ಐದು ವರ್ಷಗಳ ನಂತರ, ನಡ್ಡಾ 1998 ರಲ್ಲಿ ಮತ್ತೊಮ್ಮೆ ಗೆದ್ದರು ಮತ್ತು ಬಿಜೆಪಿ ಅಧಿಕಾರಕ್ಕೆ ಬಂದಿತು. ಧುಮಾಲ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ನಡ್ಡಾ ಅವರು ‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ’, ‘ಸಂಸದೀಯ ವ್ಯವಹಾರಗಳ ಖಾತೆ’ ಸಚಿವರಾದರು.

2007ರಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದಾಗ, ನಡ್ಡಾ ಅವರಿಗೆ ಅರಣ್ಯ, ಪರಿಸರ ಮತ್ತು ವಿಜ್ಞಾನ- ತಂತ್ರಜ್ಞಾನ ಖಾತೆಗಳನ್ನು ನೀಡಲಾಯಿತು.

1990ರಲ್ಲಿ ರಾಜ್ಯದಲ್ಲಿ ಮೊದಲ ಬಿಜೆಪಿ ಸರ್ಕಾರವನ್ನು ರಚಿಸಿದ ಶಾಂತ ಕುಮಾರ್ ಅವರನ್ನು ಬದಿಗೆ ತಳ್ಳಿದವರು ಧುಮಾಲ್. 2007 ಮತ್ತು 2012ರ ನಡುವೆ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಪಕ್ಷದ ಮೇಲೆ ಧುಮಾಲ್ ಅವರ ಹಿಡಿತವನ್ನು ಪ್ರಶ್ನಿಸಿದರು. 2010ರ ಹೊತ್ತಿಗೆ, ಧುಮಾಲ್ ಮತ್ತು ನಡ್ಡಾ ನಡುವಿನ ಭಿನ್ನಾಭಿಪ್ರಾಯಗಳು ಬೆಳೆದವು.

ಇದನ್ನೂ ಓದಿರಿ: ವಂದೇಭಾರತ್‌ ಮೈಸೂರು-ಬೆಂಗಳೂರು ಪ್ರಯಾಣ; 5 ನಿಮಿಷಕ್ಕಾಗಿ ₹415 ಹೆಚ್ಚುವರಿ ಪಾವತಿಸಿ!

ದೆಹಲಿಯಲ್ಲಿ ನಡ್ಡಾ ಶಕ್ತಿಶಾಲಿಯಾದರು. 2010ರಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದರು. 2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು. “ದೆಹಲಿಯಲ್ಲಿ ಕುಳಿತ ನಡ್ಡಾ ಅವರ ಹಸ್ತಕ್ಷೇಪ ಹಿಮಾಚಲ ಪ್ರದೇಶದಲ್ಲೂ ಇಣುಕಲಾರಂಭಿಸಿತು” ಎಂದು ಪತ್ರಕರ್ತ ಹೇಳುತ್ತಾರೆ. ಆದರೆ ಧುಮಾಲ್ ರಾಜ್ಯದಲ್ಲಿ ಪಕ್ಷದ ಮೇಲೆ ಹಿಡಿತ ಸಾಧಿಸಿದ್ದಾರೆ.

ಧುಮಾಲ್ ಅವರ ಅಧಿಕಾರಾವಧಿಯಲ್ಲಿ ಅವರ ಮಗ ಅನುರಾಗ್ ಠಾಕೂರ್ ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬಂದರು. 2000ನೇ ಇಸವಿಯಲ್ಲಿ ತಮ್ಮ 25ನೇ ವಯಸ್ಸಿನಲ್ಲಿಯೇ ಠಾಕೂರ್ ಅವರು ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದರು. ರಾಜ್ಯ ಕ್ರಿಕೆಟ್ ಮಂಡಳಿಗೆ ಏರಿದ ಅತ್ಯಂತ ಕಿರಿಯ ವ್ಯಕ್ತಿ ಅವರಾಗಿದ್ದರು. 2008ರಲ್ಲಿ, ಅವರು ಹಮೀರ್‌ಪುರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಇಂತಹ ರಾಜಕೀಯ ಏರಿಳಿತ ಕಂಡಿರುವ ಹಿಮಾಚಲಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆಯೋ ಸೋಲುತ್ತದೆಯೋ ಎಂಬ ಕುತೂಹಲ ಹುಟ್ಟಿಸಿದೆ.

(ಪೂರ್ಣ ವಿಶ್ಲೇಷಣೆ- ‘ನ್ಯೂಸ್‌ಲಾಂಡ್ರಿ’ಯಲ್ಲಿ ಲಭ್ಯ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...