Homeಮುಖಪುಟಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಖಾಲಿ ಕುರ್ಚಿಗಳಿಗೆ ಜೆ.ಪಿ ನಡ್ಡಾ ಭಾಷಣ: ಕಾಂಗ್ರೆಸ್, ಜೆಡಿಎಸ್ ಲೇವಡಿ

ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಖಾಲಿ ಕುರ್ಚಿಗಳಿಗೆ ಜೆ.ಪಿ ನಡ್ಡಾ ಭಾಷಣ: ಕಾಂಗ್ರೆಸ್, ಜೆಡಿಎಸ್ ಲೇವಡಿ

ಬಸವರಾಜ ಬೊಮ್ಮಾಯಿಯವರೆ, ಖಾಲಿ ಕುರ್ಚಿಗಳಿಗೆ ಕಿವಿ ಇಲ್ಲ ಎನ್ನುವುದನ್ನು ಅರಿತಿರುವಿರಾ? ಎಂದು ಕಾಂಗ್ರೆಸ್ ವಿಡಿಯೋ ಟ್ವೀಟ್ ಮಾಡಿದೆ.

- Advertisement -
- Advertisement -

ಬಿಜೆಪಿ ವತಿಯಿಂದ ಇಂದು ನಡೆಯುತ್ತಿರುವ ಜನಸಂಕಲ್ಪ ಯಾತ್ರೆಗೆ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರುತ್ತಿಲ್ಲ.  ಆದರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ಖಾಲಿ ಕುರ್ಚಿಗಳಿಗೆ ಭಾಷಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಲೇವಡಿ ಮಾಡಿವೆ.

“ಶಿರಾ ದಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯಲ್ಲಿ ಖಾಲಿ ಕುರ್ಚಿಗೆ ಭಾಷಣ ಮಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ಜನ ಸಂಕಲ್ಪ ಯಾತ್ರೆಯಲ್ಲಿ ಜನರೇ ಇಲ್ಲ. ಖಾಲಿ ಖುರ್ಚಿಗೆ ಭಾಷಣ ಮಾಡೋ ಕಲೆಯನ್ನು ಕರ್ನಾಟಕ ಬಿಜೆಪಿಯಿಂದ ನೋಡಿ ಕಲಿಯಬೇಕು” ಎಂದು ಜೆಡಿಎಸ್ ಪಕ್ಷ ಖಾಲಿ ಕುರ್ಚಿಗಳ ವಿಡಿಯೋ ಪೋಸ್ಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.

ಮುಂದುವರಿದು “ಜೆ.ಪಿ ನಡ್ಡಾರವರೆ ಅವರೇ, ಕರ್ನಾಟಕ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಖಾಲಿ ಕುರ್ಚಿಗೆ ಭಾಷಣ ಮಾಡಿ ಸುಸ್ತಾಗಿದ್ದರೆ ಬೀದರ್ ನಲ್ಲಿ ಎಚ್.ಡಿ ಕುಮಾರಸ್ವಾಮಿಯವರು ನಡೆಸುತ್ತಿರುವ ಪಂಚರತ್ನ ರಥ ಯಾತ್ರೆಗೆ ಬನ್ನಿ, ಇಲ್ಲಿ ರಾತ್ರಿ 3:00 ಆಗಿದ್ದರೂ ಜನ ಜಾತ್ರೆ ಹೇಗಿರುತ್ತೆ ನೋಡಬನ್ನಿ” ಎಂದು ಜೆಡಿಎಸ್ ಪಕ್ಷ  ಟ್ವೀಟ್ ಮಾಡಿದೆ.

ಇನ್ನು ಬಿಜೆಪಿಯನ್ನು ಟೀಕಿಸಲು ಕಾಂಗ್ರೆಸ್ ಪಕ್ಷ ಸಹ ಹಿಂದೆ ಬಿದ್ದಿಲ್ಲ. ಖಾಲಿ ಕುರ್ಚಿಗಳಿಗೆ ಕಿವಿ ಇಲ್ಲ ಎನ್ನುವುದನ್ನು ಬಿಜೆಪಿ ಮರೆತಿದೆ ಎಂದು ಬಿಜೆಪಿಯ ಕಾಲೆಳೆದಿದೆ.

ಬಸವರಾಜ ಬೊಮ್ಮಾಯಿಯವರೆ, ಖಾಲಿ ಕುರ್ಚಿಗಳಿಗೆ ಕಿವಿ ಇಲ್ಲ ಎನ್ನುವುದನ್ನು ಅರಿತಿರುವಿರಾ?! ಖಾಲಿ ಕುರ್ಚಿಗಳ ಮೂಲಕ ಜೆ.ಪಿ ನಡ್ಡಾರವರಿಗೆ ಬೊಮ್ಮಾಯಿ ಸರ್ಕಾರದ ಸಾಧನೆಯ ದರ್ಶನವಾಗಿರಬಹುದು ಅಲ್ಲವೇ ಕರ್ನಾಟಕ ಬಿಜೆಪಿ? ರಾಜ್ಯದ ಜನತೆಯಷ್ಟೇ ಅಲ್ಲ ಬಿಜೆಪಿ ಕಾರ್ಯಕರ್ತರೇ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಕುರ್ಚಿಗಳು ಮಾತಾಡಿಕೊಳ್ಳುತ್ತಿದ್ದವು! ಎಂದು ಕಾಂಗ್ರೆಸ್ ಪಕ್ಷ ಬಿಜೆಪಿ ಕಾರ್ಯಕ್ರಮದ ಖಾಲಿ ಕುರ್ಚಿಗಳ ವಿಡಿಯೋ ಟ್ವೀಟ್ ಮಾಡಿದೆ.

2023ರಲ್ಲಿ ಕರ್ನಾಟಕದಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಮೇಲೆ ಮುಖ್ಯವಾಹಿನಿ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಣ್ಣಿಟ್ಟಿವೆ. ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆ ಮುಗಿಸಿದ್ದು ಈಗ 224 ಕ್ಷೇತ್ರಗಳಿಗೆ ಬಸ್ ಯಾತ್ರೆ ಹೊರಡಲು ತಯಾರಿ ನಡೆಸಿದೆ. ಜೆಡಿಎಸ್ ಪಂಚ ರತ್ನ ಯಾತ್ರೆ ನಡೆಸುತ್ತಿದ್ದರೆ, ಆಡಳಿತರೂಢ ಬಿಜೆಪಿಯು ಜನ ಸಂಕಲ್ಪ ಯಾತ್ರೆ ಮೂಲಕ ಮತ ಭೇಟೆಗೆ ಇಳಿದಿವೆ.

ಇದನ್ನೂ ಓದಿ: ಸಿಎಂ ಮಗ, ಬಿಜೆಪಿ ಸಚಿವರೊಂದಿಗೆ ಸಂಬಂಧ ಹೊಂದಿರುವ ಸ್ಯಾಂಟ್ರೊ ರವಿ ಯಾರು? ಇಲ್ಲಿದೆ ಪೂರ್ಣ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...