Homeಮುಖಪುಟಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

31 ಸದಸ್ಯರ ಸಮಿತಿಯಲ್ಲಿ ವಿಪಕ್ಷಗಳ ಕೇವಲ ಮೂವರಿಗೆ ಅವಕಾಶ

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ.

ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಜೆಪಿಸಿಯ ನೇತೃತ್ವ ವಹಿಸಲಿದ್ದಾರೆ. ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸಮಿತಿಯಲ್ಲಿದ್ದಾರೆ.

ಇದರಲ್ಲಿ ರವಿಶಂಕರ್ ಪ್ರಸಾದ್, ಭರ್ತೃಹರಿ ಮಹತಾಬ್ ಮತ್ತು ಅನುರಾಗ್ ಠಾಕೂರ್ ಸೇರಿದಂತೆ 15 ಬಿಜೆಪಿ ಸಂಸದರು, ಬಿಜೆಪಿ ಮಿತ್ರಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ(ಆರ್‌ವಿ), ಶಿವಸೇನೆ, ಎನ್‌ಸಿಪಿ ಮತ್ತು ಎಐಎಡಿಎಂಕೆಯ 11 ಮಂದಿ ಹಾಗೂ ವಿರೋಧ ಪಕ್ಷಗಳಾದ ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಒಳಗೊಂಡಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಇಂಡಿಯಾ ಬಣಕ್ಕೆ ಸೇರದ, ಆದರೆ ಸಂಸತ್ತಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ವೈಎಸ್ಆರ್ ಕಾಂಗ್ರೆಸ್‌ನ ಎಸ್. ನಿರಂಜನ್ ರೆಡ್ಡಿ ಹಾಗೂ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕೂಡ ಜೆಪಿಸಿಯಲ್ಲಿದ್ದಾರೆ.

ಅನೌಪಚಾರಿಕ ಚರ್ಚೆಯ ನಂತರ ಎನ್‌ಸಿಪಿ-ಎಸ್‌ಪಿ ಹೊರತುಪಡಿಸಿ ವಿರೋಧ ಪಕ್ಷಗಳ ಇಂಡಿಯಾ ಬಣವು ಸಮಿತಿಯ ಭಾಗವಾಗಿರದಿರಲು ನಿರ್ಧರಿಸಿದ್ದರಿಂದ ಅಸಾಮಾನ್ಯವಾಗಿ ದೀರ್ಘ ವಿಳಂಬದ ನಂತರ ಸಮಿತಿಯನ್ನು ರಚಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೆಪಿಸಿ ಸೇರುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ ಅಳೆದು ತೂಗಿ ಕೊನೆಗೆ ಜೆಪಿಸಿ ಸೇರಲು ನಿರಾಕರಿಸಿದೆ. ಈ ಮೂಲಕ ಮಸೂದೆಯನ್ನು ವಿರೋಧಿಸಿ ತನ್ನ ಮಿತ್ರಪಕ್ಷಗಳ ಜೊತೆ ಒಗ್ಗಟ್ಟು ಪ್ರದರ್ಶಿಸಿದೆ. ಕಾಂಗ್ರೆಸ್ ಜೊತೆ ಟಿಎಂಸಿ, ಡಿಎಂಕೆಯಂತಹ ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಸ್ತಾವಿತ ಕಾನೂನುಗಳು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದೆ ಎಂದಿದೆ. ವಿರೋಧ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳನ್ನು ‘ಅಸ್ಥಿರಗೊಳಿಸುವ’ ಗುರಿಯನ್ನು ಈ ಮಸೂದೆಗಳು ಹೊಂದಿವೆ ಎಂದು ಆರೋಪಿಸಿವೆ.

“ಇದು ಜಂಟಿ ಸಂಸದೀಯ ಸಮಿತಿ ಅಲ್ಲ, ಬಿಜೆಪಿ ಮತ್ತು ಅದರ ಬಿ-ಟೀಮ್‌ನ ಜೆಪಿಸಿ” ಎಂದು ಹಿರಿಯ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಸಮಿತಿಯನ್ನು ಟೀಕಿಸಿದ್ದಾರೆ. ಇಂಡಿಯಾ ಒಕ್ಕೂಟದ 340ಕ್ಕೂ ಹೆಚ್ಚು ಸಂಸದರು ಜೆಪಿಸಿಯನ್ನು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

“ಈ ಜೆಪಿಸಿ ಮೋದಿಯ ಅಸಂವಿಧಾನಿಕ ಕಾರ್ಯಸೂಚಿಗೆ ರಬ್ಬರ್ ಸ್ಟಾಂಪ್ ಹೊರತುಪಡಿಸಿ ಬೇರೇನೂ ಅಲ್ಲ. ಸರ್ಕಾರವು ಒಮ್ಮತ ಅಥವಾ ಸಂಸದೀಯ ನೀತಿಶಾಸ್ತ್ರವಿಲ್ಲದೆ ಜೆಪಿಸಿಯನ್ನು ರಚಿಸಿದ್ದರಿಂದ 340 ಸಂಸದರು ಅದನ್ನು ಬಹಿಷ್ಕರಿಸಿದ್ದಾರೆ” ಎಂದು ಟ್ಯಾಗೋರ್ ತಿಳಿಸಿದ್ದಾರೆ.

2025ರ ಆಗಸ್ಟ್ 20ರಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 ಗಳನ್ನು ಮಂಡಿಸಿದ್ದರು. ನಂತರ ಅವುಗಳನ್ನು ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಲಾಗಿತ್ತು.

ಮರುದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಪರಿಚಯಿಸಿದಾಗ ವಿರೋಧ ಪಕ್ಷಗಳ ಸಂಸದರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಪ್ರಸ್ತಾವಿತ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದರು.

ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವ ಅಪರಾಧಗಳ ಆರೋಪದ ಮೇಲೆ ಪ್ರಧಾನಿ, ಕೇಂದ್ರ ಸಚಿವರು ಅಥವಾ ಮುಖ್ಯಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಜೈಲಿನಲ್ಲಿಟ್ಟಿರೆ ಅಥವಾ ಬಂಧನದಲ್ಲಿಟ್ಟರೆ, 31ನೇ ದಿನದಂದು ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...