Homeಮುಖಪುಟಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

ಬಂಧನಕ್ಕೊಳಗಾದ ಸಿಎಂ, ಸಚಿವರ ವಜಾ ಮಸೂದೆ ಪರಿಶೀಲನೆಗೆ ಜೆಪಿಸಿ ರಚನೆ : ವಿಪಕ್ಷಗಳಿಂದ ತೀವ್ರ ವಿರೋಧ

31 ಸದಸ್ಯರ ಸಮಿತಿಯಲ್ಲಿ ವಿಪಕ್ಷಗಳ ಕೇವಲ ಮೂವರಿಗೆ ಅವಕಾಶ

- Advertisement -
- Advertisement -

ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ (ನ.12) ಸಂಸದೀಯ ಸಮಿತಿ (ಜೆಪಿಸಿ) ರಚಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಹೆಚ್ಚಿನ ವಿರೋಧ ಪಕ್ಷ ಸದಸ್ಯರು ಜೆಪಿಸಿ ಸೇರಲು ನಿರಾಕರಿಸಿದ್ದಾರೆ. ಹಾಗಾಗಿ, 31 ಸಂಸದರ ಸಮಿತಿಯಲ್ಲಿ ಕೇವಲ ಮೂವರು ವಿರೋಧ ಪಕ್ಷದ ಸದಸ್ಯರಿದ್ದಾರೆ ಎಂದು ವರದಿಗಳು ಹೇಳಿವೆ.

ಎರಡನೇ ಅವಧಿಗೆ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಜೆಪಿಸಿಯ ನೇತೃತ್ವ ವಹಿಸಲಿದ್ದಾರೆ. ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಸಮಿತಿಯಲ್ಲಿದ್ದಾರೆ.

ಇದರಲ್ಲಿ ರವಿಶಂಕರ್ ಪ್ರಸಾದ್, ಭರ್ತೃಹರಿ ಮಹತಾಬ್ ಮತ್ತು ಅನುರಾಗ್ ಠಾಕೂರ್ ಸೇರಿದಂತೆ 15 ಬಿಜೆಪಿ ಸಂಸದರು, ಬಿಜೆಪಿ ಮಿತ್ರಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ(ಆರ್‌ವಿ), ಶಿವಸೇನೆ, ಎನ್‌ಸಿಪಿ ಮತ್ತು ಎಐಎಡಿಎಂಕೆಯ 11 ಮಂದಿ ಹಾಗೂ ವಿರೋಧ ಪಕ್ಷಗಳಾದ ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಒಳಗೊಂಡಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷಗಳ ಇಂಡಿಯಾ ಬಣಕ್ಕೆ ಸೇರದ, ಆದರೆ ಸಂಸತ್ತಿನಲ್ಲಿ ಸರ್ಕಾರವನ್ನು ಬೆಂಬಲಿಸಿದ ವೈಎಸ್ಆರ್ ಕಾಂಗ್ರೆಸ್‌ನ ಎಸ್. ನಿರಂಜನ್ ರೆಡ್ಡಿ ಹಾಗೂ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕೂಡ ಜೆಪಿಸಿಯಲ್ಲಿದ್ದಾರೆ.

ಅನೌಪಚಾರಿಕ ಚರ್ಚೆಯ ನಂತರ ಎನ್‌ಸಿಪಿ-ಎಸ್‌ಪಿ ಹೊರತುಪಡಿಸಿ ವಿರೋಧ ಪಕ್ಷಗಳ ಇಂಡಿಯಾ ಬಣವು ಸಮಿತಿಯ ಭಾಗವಾಗಿರದಿರಲು ನಿರ್ಧರಿಸಿದ್ದರಿಂದ ಅಸಾಮಾನ್ಯವಾಗಿ ದೀರ್ಘ ವಿಳಂಬದ ನಂತರ ಸಮಿತಿಯನ್ನು ರಚಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೆಪಿಸಿ ಸೇರುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ ಅಳೆದು ತೂಗಿ ಕೊನೆಗೆ ಜೆಪಿಸಿ ಸೇರಲು ನಿರಾಕರಿಸಿದೆ. ಈ ಮೂಲಕ ಮಸೂದೆಯನ್ನು ವಿರೋಧಿಸಿ ತನ್ನ ಮಿತ್ರಪಕ್ಷಗಳ ಜೊತೆ ಒಗ್ಗಟ್ಟು ಪ್ರದರ್ಶಿಸಿದೆ. ಕಾಂಗ್ರೆಸ್ ಜೊತೆ ಟಿಎಂಸಿ, ಡಿಎಂಕೆಯಂತಹ ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಸ್ತಾವಿತ ಕಾನೂನುಗಳು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದೆ ಎಂದಿದೆ. ವಿರೋಧ ಪಕ್ಷಗಳ ನೇತೃತ್ವದ ರಾಜ್ಯ ಸರ್ಕಾರಗಳನ್ನು ‘ಅಸ್ಥಿರಗೊಳಿಸುವ’ ಗುರಿಯನ್ನು ಈ ಮಸೂದೆಗಳು ಹೊಂದಿವೆ ಎಂದು ಆರೋಪಿಸಿವೆ.

“ಇದು ಜಂಟಿ ಸಂಸದೀಯ ಸಮಿತಿ ಅಲ್ಲ, ಬಿಜೆಪಿ ಮತ್ತು ಅದರ ಬಿ-ಟೀಮ್‌ನ ಜೆಪಿಸಿ” ಎಂದು ಹಿರಿಯ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಸಮಿತಿಯನ್ನು ಟೀಕಿಸಿದ್ದಾರೆ. ಇಂಡಿಯಾ ಒಕ್ಕೂಟದ 340ಕ್ಕೂ ಹೆಚ್ಚು ಸಂಸದರು ಜೆಪಿಸಿಯನ್ನು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

“ಈ ಜೆಪಿಸಿ ಮೋದಿಯ ಅಸಂವಿಧಾನಿಕ ಕಾರ್ಯಸೂಚಿಗೆ ರಬ್ಬರ್ ಸ್ಟಾಂಪ್ ಹೊರತುಪಡಿಸಿ ಬೇರೇನೂ ಅಲ್ಲ. ಸರ್ಕಾರವು ಒಮ್ಮತ ಅಥವಾ ಸಂಸದೀಯ ನೀತಿಶಾಸ್ತ್ರವಿಲ್ಲದೆ ಜೆಪಿಸಿಯನ್ನು ರಚಿಸಿದ್ದರಿಂದ 340 ಸಂಸದರು ಅದನ್ನು ಬಹಿಷ್ಕರಿಸಿದ್ದಾರೆ” ಎಂದು ಟ್ಯಾಗೋರ್ ತಿಳಿಸಿದ್ದಾರೆ.

2025ರ ಆಗಸ್ಟ್ 20ರಂದು ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ 2025 ಗಳನ್ನು ಮಂಡಿಸಿದ್ದರು. ನಂತರ ಅವುಗಳನ್ನು ಸಂಸದೀಯ ಸಮಿತಿಗೆ ಕಳುಹಿಸಲು ನಿರ್ಧರಿಸಲಾಗಿತ್ತು.

ಮರುದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಪರಿಚಯಿಸಿದಾಗ ವಿರೋಧ ಪಕ್ಷಗಳ ಸಂಸದರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಪ್ರಸ್ತಾವಿತ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದರು.

ಕನಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವ ಅಪರಾಧಗಳ ಆರೋಪದ ಮೇಲೆ ಪ್ರಧಾನಿ, ಕೇಂದ್ರ ಸಚಿವರು ಅಥವಾ ಮುಖ್ಯಮಂತ್ರಿಗಳನ್ನು ಬಂಧಿಸಿ ಸತತ 30 ದಿನಗಳ ಕಾಲ ಜೈಲಿನಲ್ಲಿಟ್ಟಿರೆ ಅಥವಾ ಬಂಧನದಲ್ಲಿಟ್ಟರೆ, 31ನೇ ದಿನದಂದು ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎಂದು ಪ್ರಸ್ತಾವಿತ ಕಾನೂನು ಹೇಳುತ್ತದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...