Homeಮುಖಪುಟಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿದ್ದ ದೆಹಲಿ ಪೊಲೀಸರು ದೆಹಲಿಯ ಬುರಾರಿಯಲ್ಲಿರುವ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಜುಬೇರ್‌ರನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೆ ನೀಡಿದೆ.

ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡುವ ಆರೋಪದ ಮೇಲೆ ಜುಬೇರ್ ಮೇಲೆ ಪ್ರಕರಣ ದಾಖಲಾಗಿದೆ. 2020ರ ಪ್ರಕರಣದ ವಿಚಾರಣೆಗೆಂದು ಅವರನ್ನು ದೆಹಲಿ ಪೊಲೀಸರು ಕರೆಸಿದ್ದರು. ಆ ಪ್ರಕರಣದಲ್ಲಿ ಜುಬೇರ್ ಬಂಧನದಿಂದ ರಕ್ಷಣೆ ಪಡೆದಿದ್ದರು. ಆನಂತರ ಪೊಲೀಸರು 2018ರ ಟ್ವೀಟ್‌ ಆಧರಿಸಿ ಬಂಧಿಸಿದ್ದೇವೆ ಎಂದಿದ್ದಾರೆ. ಆ ಟ್ವೀಟ್ ಯಾವುದಿರಬೇಕೆಂದು ಚರ್ಚೆ ನಡೆಯುತ್ತಿದೆ.

2018ರ ಮಾರ್ಚ್ 24 ರಂದು ಮೊಹಮ್ಮದ್ ಜುಬೇರ್ ಮತೀಯ ಗೂಂಡಾಗಿರಿಗಳನ್ನು, ನೈತಿಕ ಪೊಲೀಸ್‌ಗಿರಿಯನ್ನು ಖಂಡಿಸಿ ವ್ಯಂಗ್ಯವಾಗಿ ಪೋಸ್ಟ್ ಒಂದನ್ನು ಮಾಡಿದ್ದರು. 2014ಕ್ಕೆ ಮುಂಚೆ ಹನಿಮೂನ್ ಹೋಟೆಲ್ ಇದ್ದಿದ್ದು, 2014ರ ನಂತರ ಹನುಮಾನ್ ಹೋಟೆಲ್ ಆಗಿ ಬದಲಾಗಲಿದೆ. ಸಂಸ್ಕಾರಿ ಹೋಟೆಲ್ ಎಂದು ಬರೆದಿದ್ದರು. ಪ್ರೇಮಿಗಳ ದಿನಕ್ಕೆ ತಡೆಯೊಡ್ಡುತ್ತಿದ್ದ ಬಲಪಂಥೀಯ ಕಾರ್ಯಕರ್ತರ ಧೋರಣೆ ಖಂಡಿಸಿ ವ್ಯಂಗ್ಯವಾಗಿ ಮಾಡಿದ್ದ ಪೋಸ್ಟ್ ಅದಾಗಿತ್ತು.

ಅದಕ್ಕೆ ಹನುಮಾನ್ ಭಕ್ತ್ ಎಂಬ ಬಾಲಾಜಿಕಿಜೈನ್ ಎಂಬ ಯೂಸರ್ ಐಡಿ ಹೊಂದಿರುವ ಫೇಕ್ ಅಕೌಂಟ್‌ನಿಂದ ಕಮೆಂಟ್ ಮಾಡಿ ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿತ್ತು. ನಮ್ಮ ದೇವರಾದ ಹನುಮಾನ್‌ಜಿಯವರನ್ನು ಹನಿಮೂನ್‌ಗೆ ಹೋಲಿಸಿ ನೇರವಾಗಿ ಹಿಂದೂಗಳಿಗೆ ಅವಮಾನ ಮಾಡಲಾಗಿದೆ. ಏಕೆಂದರೆ ಹನುಮಾನ್ ಬ್ರಹ್ಮಚಾರಿಯಾಗಿದ್ದರು. ಈ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳಿ ಎಂದು ಈ ತಿಂಗಳ 19ನೇ ತಾರೀಕಿನಂದು ಕಮೆಂಟ್ ಮಾಡಲಾಗಿತ್ತು. ವಾಸ್ತವದಲ್ಲಿ ಆ ಖಾತೆಯು 2021ರ ಅಕ್ಟೋಬರ್‌ನಲ್ಲಿ ರಚನೆಯಾಗಿದೆ ಎಂದು ತಿಳಿದುಬಂದಿದೆ.

ಆ ಖಾತೆ ಆ ರೀತಿ ಕಮೆಂಟ್ ಮಾಡಿದಾಗ ಅದಕ್ಕೆ ಕೇವಲ ಒಬ್ಬರು ಮಾತ್ರ ಫಾಲೋವರ್ ಇದ್ದರು. ಮೂರೇ ಮೂರು ಟ್ವೀಟ್ ಗಳನ್ನು ಮಾಡಲಾಗಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಜುಬೇರ್‌ರನ್ನು ಬಂಧಿಸಿದ್ದಾರೆ. ಆ ನಂತರ ಆ ಹನುಮಾನ್ ಭಕ್ತ್ ಖಾತೆಯನ್ನು ನೂರಾರು ಜನರು ಫಾಲೋ ಮಾಡುತ್ತಿದ್ದಾರೆ. ಅಲ್ಲದೆ ಆ ಮುಖವಿಲ್ಲದೆ ಖಾತೆಯೇ ನನ್ನನ್ನು ಫಾಲೋ ಮಾಡಿ ಎಂದು ಟ್ವೀಟ್ ಮಾಡುತ್ತಿದೆ.

ಈ ದೂರು ನೀಡಿದ ಖಾತೆಯ ಕುರಿತು ಹಲವಾರು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಅನಾಮಧೇಯ ಖಾತೆಯಿಂದ ಬಂದ ದೂರನ್ನು ದೆಹಲಿ ಪೊಲೀಸರು ಹೇಗೆ ಪರಿಗಣಿಸುತ್ತಾರೆ? ಆದರೆ ಜೆಎನ್‌ಯುನಲ್ಲಿ ಹಿಂಸಾಚಾರವೆಬ್ಬಿಸಿದ ಕೋಮಲ್ ಶರ್ಮಾ ವಿರುದ್ಧ ಸ್ಪಷ್ಟ ವಿಡಿಯೋ ಸಾಕ್ಷಿ ಇದ್ದರೂ ಸಹ ಏಕೆ ಬಂಧಿಸಿಲ್ಲ ಎಂದು ಯೂಟ್ಯೂಬರ್ ಧ್ರುವ್‌ರಾಠೀ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...