Homeಮುಖಪುಟಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿದ್ದ ದೆಹಲಿ ಪೊಲೀಸರು ದೆಹಲಿಯ ಬುರಾರಿಯಲ್ಲಿರುವ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಜುಬೇರ್‌ರನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೆ ನೀಡಿದೆ.

ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡುವ ಆರೋಪದ ಮೇಲೆ ಜುಬೇರ್ ಮೇಲೆ ಪ್ರಕರಣ ದಾಖಲಾಗಿದೆ. 2020ರ ಪ್ರಕರಣದ ವಿಚಾರಣೆಗೆಂದು ಅವರನ್ನು ದೆಹಲಿ ಪೊಲೀಸರು ಕರೆಸಿದ್ದರು. ಆ ಪ್ರಕರಣದಲ್ಲಿ ಜುಬೇರ್ ಬಂಧನದಿಂದ ರಕ್ಷಣೆ ಪಡೆದಿದ್ದರು. ಆನಂತರ ಪೊಲೀಸರು 2018ರ ಟ್ವೀಟ್‌ ಆಧರಿಸಿ ಬಂಧಿಸಿದ್ದೇವೆ ಎಂದಿದ್ದಾರೆ. ಆ ಟ್ವೀಟ್ ಯಾವುದಿರಬೇಕೆಂದು ಚರ್ಚೆ ನಡೆಯುತ್ತಿದೆ.

2018ರ ಮಾರ್ಚ್ 24 ರಂದು ಮೊಹಮ್ಮದ್ ಜುಬೇರ್ ಮತೀಯ ಗೂಂಡಾಗಿರಿಗಳನ್ನು, ನೈತಿಕ ಪೊಲೀಸ್‌ಗಿರಿಯನ್ನು ಖಂಡಿಸಿ ವ್ಯಂಗ್ಯವಾಗಿ ಪೋಸ್ಟ್ ಒಂದನ್ನು ಮಾಡಿದ್ದರು. 2014ಕ್ಕೆ ಮುಂಚೆ ಹನಿಮೂನ್ ಹೋಟೆಲ್ ಇದ್ದಿದ್ದು, 2014ರ ನಂತರ ಹನುಮಾನ್ ಹೋಟೆಲ್ ಆಗಿ ಬದಲಾಗಲಿದೆ. ಸಂಸ್ಕಾರಿ ಹೋಟೆಲ್ ಎಂದು ಬರೆದಿದ್ದರು. ಪ್ರೇಮಿಗಳ ದಿನಕ್ಕೆ ತಡೆಯೊಡ್ಡುತ್ತಿದ್ದ ಬಲಪಂಥೀಯ ಕಾರ್ಯಕರ್ತರ ಧೋರಣೆ ಖಂಡಿಸಿ ವ್ಯಂಗ್ಯವಾಗಿ ಮಾಡಿದ್ದ ಪೋಸ್ಟ್ ಅದಾಗಿತ್ತು.

ಅದಕ್ಕೆ ಹನುಮಾನ್ ಭಕ್ತ್ ಎಂಬ ಬಾಲಾಜಿಕಿಜೈನ್ ಎಂಬ ಯೂಸರ್ ಐಡಿ ಹೊಂದಿರುವ ಫೇಕ್ ಅಕೌಂಟ್‌ನಿಂದ ಕಮೆಂಟ್ ಮಾಡಿ ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿತ್ತು. ನಮ್ಮ ದೇವರಾದ ಹನುಮಾನ್‌ಜಿಯವರನ್ನು ಹನಿಮೂನ್‌ಗೆ ಹೋಲಿಸಿ ನೇರವಾಗಿ ಹಿಂದೂಗಳಿಗೆ ಅವಮಾನ ಮಾಡಲಾಗಿದೆ. ಏಕೆಂದರೆ ಹನುಮಾನ್ ಬ್ರಹ್ಮಚಾರಿಯಾಗಿದ್ದರು. ಈ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳಿ ಎಂದು ಈ ತಿಂಗಳ 19ನೇ ತಾರೀಕಿನಂದು ಕಮೆಂಟ್ ಮಾಡಲಾಗಿತ್ತು. ವಾಸ್ತವದಲ್ಲಿ ಆ ಖಾತೆಯು 2021ರ ಅಕ್ಟೋಬರ್‌ನಲ್ಲಿ ರಚನೆಯಾಗಿದೆ ಎಂದು ತಿಳಿದುಬಂದಿದೆ.

ಆ ಖಾತೆ ಆ ರೀತಿ ಕಮೆಂಟ್ ಮಾಡಿದಾಗ ಅದಕ್ಕೆ ಕೇವಲ ಒಬ್ಬರು ಮಾತ್ರ ಫಾಲೋವರ್ ಇದ್ದರು. ಮೂರೇ ಮೂರು ಟ್ವೀಟ್ ಗಳನ್ನು ಮಾಡಲಾಗಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಜುಬೇರ್‌ರನ್ನು ಬಂಧಿಸಿದ್ದಾರೆ. ಆ ನಂತರ ಆ ಹನುಮಾನ್ ಭಕ್ತ್ ಖಾತೆಯನ್ನು ನೂರಾರು ಜನರು ಫಾಲೋ ಮಾಡುತ್ತಿದ್ದಾರೆ. ಅಲ್ಲದೆ ಆ ಮುಖವಿಲ್ಲದೆ ಖಾತೆಯೇ ನನ್ನನ್ನು ಫಾಲೋ ಮಾಡಿ ಎಂದು ಟ್ವೀಟ್ ಮಾಡುತ್ತಿದೆ.

ಈ ದೂರು ನೀಡಿದ ಖಾತೆಯ ಕುರಿತು ಹಲವಾರು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಅನಾಮಧೇಯ ಖಾತೆಯಿಂದ ಬಂದ ದೂರನ್ನು ದೆಹಲಿ ಪೊಲೀಸರು ಹೇಗೆ ಪರಿಗಣಿಸುತ್ತಾರೆ? ಆದರೆ ಜೆಎನ್‌ಯುನಲ್ಲಿ ಹಿಂಸಾಚಾರವೆಬ್ಬಿಸಿದ ಕೋಮಲ್ ಶರ್ಮಾ ವಿರುದ್ಧ ಸ್ಪಷ್ಟ ವಿಡಿಯೋ ಸಾಕ್ಷಿ ಇದ್ದರೂ ಸಹ ಏಕೆ ಬಂಧಿಸಿಲ್ಲ ಎಂದು ಯೂಟ್ಯೂಬರ್ ಧ್ರುವ್‌ರಾಠೀ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...