Homeಮುಖಪುಟರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

- Advertisement -
- Advertisement -

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶ ಇಜಾಝುದ್ದೀನ್ ಸಲಾವುದ್ದೀನ್ ಕಾಜಿ ಮತ್ತು ನ್ಯಾಯಾಲಯದ ಗುಮಾಸ್ತ ಚಂದ್ರಕಾಂತ್ ಹನ್ಮಂತ್ ವಾಸುದೇವ್ ವಿರುದ್ಧ ಪ್ರಕರಣ ದಾಖಲಿಸಿದೆ.

ಎಸಿಬಿಯ ಪತ್ರಿಕಾ ಟಿಪ್ಪಣಿಯ ಪ್ರಕಾರ, ದೂರುದಾರರ ಪತ್ನಿ 2015ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ತನ್ನ ಭೂಮಿಯನ್ನು ಬಲವಂತವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 2016 ರಲ್ಲಿ, ಹೈಕೋರ್ಟ್ ಪ್ರಕರಣದಲ್ಲಿ ಮೂರನೇ ವ್ಯಕ್ತಿಯ ಹಕ್ಕುಗಳ ಸೃಷ್ಟಿಯನ್ನು ((ಮೂರನೇ ವ್ಯಕ್ತಿಯ ಪ್ರವೇಶ) ತಡೆಯುವ ಮಧ್ಯಂತರ ಆದೇಶವನ್ನು ಹೊರಡಿಸಿತ್ತು.

ಆಸ್ತಿಯ ಮೌಲ್ಯ 10 ಕೋಟಿ ರೂಪಾಯಿಗಿಂತ ಕಡಿಮೆ ಇದ್ದ ಕಾರಣ, ಮಾರ್ಚ್ 2024ರಲ್ಲಿ ಹೈಕೋರ್ಟ್ ಈ ಪ್ರಕರಣವನ್ನು ಮಜಗಾಂವ್‌ನಲ್ಲಿರುವ ಸಿವಿಲ್ ನ್ಯಾಯಾಲಯಕ್ಕೆ ವಾಣಿಜ್ಯ ಮೊಕದ್ದಮೆಯಾಗಿ ವರ್ಗಾಯಿಸಿತ್ತು.

ಈ ವರ್ಷ ಸೆಪ್ಟೆಂಬರ್ 9ರಂದು, ದೂರುದಾರನ ಉದ್ಯೋಗಿ (ದೂರುದಾರರ ಪರ ವ್ಯಕ್ತಿ) ನ್ಯಾಯಾಲಯದಲ್ಲಿ ಹಾಜರಿದ್ದಾಗ, ನ್ಯಾಯಾಲಯದ ಗುಮಾಸ್ತ ವಾಸುದೇವ್ ದೂರುದಾರರನ್ನು ಸಂಪರ್ಕಿಸಿ ಭೇಟಿಯಾಗಲು ಹೇಳಿದ್ದರು.

ಅದರಂತೆ, ದೂರುದಾರರು ಸೆಪ್ಟೆಂಬರ್ 12ರಂದು ಚೆಂಬೂರಿನ ಸ್ಟಾರ್‌ಬಕ್ಸ್ ಕೆಫೆಯಲ್ಲಿ ವಾಸುದೇವ್ ಅವರನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ. ಅಲ್ಲಿ ವಾಸುದೇವ್ ಅವರು ಅನುಕೂಲಕರ ಆದೇಶಗಳನ್ನು ಪಡೆಯಲು ಒಟ್ಟು 25 ಲಕ್ಷ ರೂಪಾಯಿ, ಅಂದರೆ ತನಗೆ 10 ಲಕ್ಷ ರೂ. ಮತ್ತು ನ್ಯಾಯಾಧೀಶರಿಗೆ 15 ಲಕ್ಷ ರೂ. ಲಂಚವನ್ನು ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.

ವಾಸುದೇವ್ ಕೇಳಿದ ಹಣವನ್ನು ಕೊಡಲು ದೂರುದಾರ ನಿರಾಕರಿಸಿದ್ದರು. ಆದರೂ, ಮುಂದಿನ ಹಲವು ವಾರಗಳವರೆಗೆ, ವಾಸುದೇವ್ ಲಂಚ ಕೇಳುವುದನ್ನು ಮುಂದುವರೆಸಿದ್ದರು. ನಂತರ, ನವೆಂಬರ್ 10ರಂದು ದೂರುದಾರ ಎಸಿಬಿಯನ್ನು ಸಂಪರ್ಕಿಸಿದ್ದರು.

ಅದೇ ದಿನ ಎಸಿಬಿ ಅಧಿಕಾರಿಗಳು ಪಂಚ ಸಾಕ್ಷಿಯ ಸಮ್ಮುಖದಲ್ಲಿ ಆರೋಪದ ಪರಿಶೀಲನಾ ಕಾರ್ಯವನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ವಾಸುದೇವ್ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ ಮತ್ತು ಕಡಿಮೆ ಮೊತ್ತ, ಅಂದರೆ, 15 ಲಕ್ಷ ರೂಪಾಯಿ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆರೋಪ ಖಚಿತವಾದ ಬಳಿಕ, ಆರೋಪಿಯ ಬಂಧನಕ್ಕೆ ನವೆಂಬರ್ 11ರಂದು ಎಸಿಬಿ ಬಲೆ ಬೀಸಿತ್ತು. ವಾಸುದೇವ್ ದೂರುದಾರರಿಂದ 15 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಹಣ ತೆಗೆದುಕೊಂಡ ತಕ್ಷಣ, ವಾಸುದೇವ್ ಅವರು ನ್ಯಾಯಾಧೀಶ ಎಜಾಝುದ್ದೀನ್ ಕಾಜಿ ಅವರಿಗೆ ತಮ್ಮ ಫೋನ್‌ನಲ್ಲಿ ಕರೆ ಮಾಡಿ ಲಂಚ ಪಡೆದ ಬಗ್ಗೆ ಮಾಹಿತಿ ನೀಡಿದ್ದರು. ನ್ಯಾಯಾಧೀಶರು ಕೂಡ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ವಾಸುದೇವ್ ಮತ್ತು ನ್ಯಾಯಾಧೀಶ ಕಾಜಿ ಇಬ್ಬರ ಮೇಲೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಮತ್ತು 7ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆ ಸಾರ್ವಜನಿಕ ಕರ್ತವ್ಯದಲ್ಲಿರುವವರ ಅಕ್ರಮ ಸಂತೃಪ್ತಿಯನ್ನು ಬೇಡಿಕೆ, ಸ್ವೀಕಾರ ಮತ್ತು ಪಡೆಯುವುದಕ್ಕೆ ಸಂಬಂಧಿಸಿದೆ.

ನ್ಯಾಯಾಧೀಶ ಕಾಜಿ ಇಂದು (ನವೆಂಬರ್ 13, 2025) ನ್ಯಾಯಾಲಯದಲ್ಲಿ ಕಲಾಪ ನಡೆಸುತ್ತಿಲ್ಲ ಎಂದು ಮೂಲಗಳು ಖಚಿತಪಡಿಸಿರುವುದಾಗಿ ಬಾರ್ & ಬೆಂಚ್‌ ವರದಿ ಮಾಡಿದೆ.

ಮಾಹಿತಿ ಕೃಪೆ : ಬಾರ್ & ಬೆಂಚ್

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...