Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಪ್ರಕರಣ

- Advertisement -
- Advertisement -

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಮಾಲೆಗಾಂವ್ ಸ್ಪೋಟ ಪ್ರಕರಣದ ವಿಚಾರಣೆಯ ನೇತೃತ್ವದ ವಹಿಸಿದ್ದ ಎನ್‌ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶರನ್ನು ವಿಚಾರಣೆಯ ಅಂತಿಮ ಹಂತದಲ್ಲಿ ವರ್ಗಾವಣೆ ಮಾಡಲಾಗಿದೆ.

ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಾರ್ಷಿಕ ನಿಯಮಿತ ವರ್ಗಾವಣೆಯ ಭಾಗವಾಗಿ ಈ ವರ್ಗಾವಣೆ ನಡೆದಿದೆ ಎಂದು ವರದಿಗಳು ಹೇಳಿವೆ.

ಏಪ್ರಿಲ್ 5ರಂದು ಹೊರಡಿಸಲಾದ ವರ್ಗಾವಣೆ ಆದೇಶದಲ್ಲಿ, ವಿಚಾರಣೆ ಮುಗಿದಿರುವ ಎಲ್ಲಾ ಪ್ರಕರಣಗಳ ತೀರ್ಪುಗಳನ್ನು ಅಧಿಕಾರ ಹಸ್ತಾಂತರಿಸುವ ಮುನ್ನ ಪ್ರಕಟಿಸುವಂತೆ ನಿರ್ದೇಶಿಸಲಾಗಿದೆ.

ಮಾಲೆಗಾಂವ್ ಸ್ಟೋಟ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಎ.ಕೆ. ಲಹೋಟಿ ಅವರು, ಏಪ್ರಿಲ್ 15 ರೊಳಗೆ ಉಳಿದ ವಾದಗಳನ್ನು ಪೂರ್ಣಗೊಳಿಸುವಂತೆ ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳಿಗೆ ಕಳೆದ ಶನಿವಾರ ನಿರ್ದೇಶನ ನೀಡಿದ್ದರು.

ಲಹೋಟಿ ಅವರು 17 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದ ವಿಚಾರಣೆ ನೇತೃತ್ವ ವಹಿಸಿರುವ ಐದನೇ ನ್ಯಾಯಾಧೀರಾಗಿದ್ದಾರೆ.

ನ್ಯಾಯಾಧೀಶರ ವರ್ಗಾವಣೆಯನ್ನು ನಿರೀಕ್ಷಿಸಿದ್ದ ಪ್ರಕರಣದ ಸಂತ್ರಸ್ತರು, ಕಳೆದ ವಾರ ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ವಿಳಂಬವಿಲ್ಲದೆ ತೀರ್ಪು ಪ್ರಕಟವಾಗುವಂತೆ ನೋಡಿಕೊಳ್ಳಲು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಕೋರಿದ್ದರು.

“ಪ್ರಕರಣವು ಸಂಕೀರ್ಣವಾದ ದಾವೆ ಪ್ರಕ್ರಿಯೆಗಳ ಮೂಲಕ ಸಾಗುತ್ತಿದೆ. ನ್ಯಾಯಾಧೀಶ ಎ.ಕೆ ಲಹೋಟಿ ಅವರು ಪ್ರಕರಣದ ಪ್ರತಿಯೊಂದು ಅಂಶಗಳ ಬಗ್ಗೆಯೂ ಸೂಕ್ಷ್ಮವಾಗಿ ತಿಳಿದಿದ್ದಾರೆ. ನ್ಯಾಯದ ಹಿತದೃಷ್ಟಿಯಿಂದ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಶಿಫಾರಸು ಮಾಡುವಂತೆ ನಾವು ನಿಮ್ಮನ್ನು ಕೋರುತ್ತೇವೆ” ಎಂದು ಪತ್ರದಲ್ಲಿ ಹೇಳಲಾಗಿತ್ತು.

ನ್ಯಾಯಾಧೀಶರ ವರ್ಗಾವಣೆ ತಡೆಯುವಂತೆ ಹೈಕೋರ್ಟ್‌ ಮೊರೆ ಹೋಗುವ ಬಗ್ಗೆ ಯೋಚಿಸುತ್ತಿದ್ದೇವೆ. ಪ್ರಕರಣದ ವಿಚಾರಣೆ ಈಗಾಗಲೇ ವಿಳಂಬವಾಗಿದೆ. ನ್ಯಾಯಾಧೀಶರನ್ನು ವರ್ಗಾಯಿಸಿದರೆ ಇನ್ನಷ್ಟು ವಿಳಂಬವಾಗಲಿದೆ. ಹಾಗಾಗಿ, ನಾವು ಹಿರಿಯ ವಕೀಲರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಂತ್ರಸ್ತರ ಪರ ವಕೀಲ ಶಾಹಿದ್ ನದೀಮ್ ಹೇಳಿದ್ದಾರೆ.

ಮಾಲೆಗಾಂವ್ ಸ್ಪೋಟ ಪ್ರಕರಣ

ಸೆಪ್ಟೆಂಬರ್ 29,2008ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಮಸೀದಿಯ ಬಳಿ ಬೈಕ್‌ನಲ್ಲಿ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರಂಭದಲ್ಲಿ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ನಂತರ 2011ರಲ್ಲಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸಲಾಯಿತು.

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಹಾಗೂ ಇನ್ನಿತರ ಐವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ಮೇಲೆ ಯುಎಪಿಎ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ದೂರು ದಾಖಲಾಗಿತ್ತು.

ಈವರೆಗೆ ಪ್ರಾಸಿಕ್ಯೂಷನ್‌ 323 ಹಾಗೂ ಸಂತ್ರಸ್ತರ ಪರ ವಕೀಲರು 8 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಲಯ ಪ್ರಕರಣಲ್ಲಿ ಅಂತಿಮ ವಾದ-ಪ್ರತಿವಾದ ಆಲಿಸುತ್ತಿದೆ ಎಂದು ವರದಿಯಾಗಿದೆ.

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...