Homeಕರ್ನಾಟಕಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

- Advertisement -
- Advertisement -

ಕೌಟುಂಬಿಕ ಸಮಸ್ಯೆ ಪ್ರಕರಣದಲ್ಲಿ ನ್ಯಾಯಕೋರಿ ಧಾರವಾಡದ ಹೈಕೋರ್ಟ್‌ ಸರ್ಕ್ಯೂಟ್ ಪೀಠಕ್ಕೆ ಬಂದಿದ್ದ ದಂಪತಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಮಠಾಧೀಶರ ಬಳಿಗೆ ಕಳುಹಿಸಿರುವುದಕ್ಕೆ ನಾಡಿನ ಚಿಂತಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ದಂಪತಿ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಕೋರಿ ಹೈಕೋರ್ಟ್‌ ಪೀಠದ ಮೊರೆ ಹೋಗಿದ್ದರು. ಕಳೆದ ಸೆಪ್ಟೆಂಬರ್ 17ರಂದು ಪ್ರಕರಣದ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ದೀಕ್ಷಿತ್ ಅವರು, ದಂಪತಿಗೆ ಬುದ್ದಿವಾದ ಹೇಳಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೆ ವಿಚ್ಛೇದನ ಪಡೆಯುವುದು ಸರಿಯಲ್ಲ ಎಂದಿದ್ದಾರೆ.

ವಿಚಾರಣೆ ವೇಳೆ ಇಬ್ಬರ ವಾದ ಆಲಿಸಿದ ನ್ಯಾಯಮೂರ್ತಿ, ಆರಂಭದಲ್ಲಿ ಇಬ್ಬರೂ ಕೂಡ ಯಾರಾದರು ಆಪ್ತ ಸಮಾಲೋಚಕರ ಬಳಿ ಹೋಗಿ ಎಂದಿದ್ದರು. ಬಳಿಕ ಮಾತು ಮುಂದುವರಿಸಿದ ಅವರು, ಮಠಕ್ಕೆ ಹೋಗಿ ಸ್ವಾಮೀಜಿಗಳ ಪ್ರವಚನ ಕೇಳಿ ಎಂದಿದ್ದಾರೆ.

ಮೊದಲು ಪತಿಗೆ ಯಾವ ಮಠಕ್ಕೆ ಹೋಗ್ತೀರಿ? ಎಂದಾಗ ಅವರು ಗದಗದ ತೋಂಟದಾರ್ಯ ಮಠದ ಸ್ವಾಮಿ ಬಳಿ ಹೋಗ್ತೀನಿ ಎಂದಿದ್ದಾರೆ. ನಂತರ ಪತ್ನಿ ಬಳಿ ಕೇಳಿದಾಗ, ಆಕೆ ನಾನು ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಹೋಗ್ತೀನಿ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಿದ್ದಂತೆ, ಅವರ ಬಳಿ ಹೋಗಿ ಎಂದು ಸಲಹೆ ನೀಡಿದ್ದಾರೆ.

ನ್ಯಾಯಮೂರ್ತಿಯ ಈ ನಡೆಯನ್ನು ವಿರೋಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಚಿಂತಕರು, “ಜನರು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗುವುದು ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ. ಆದರೆ, ನ್ಯಾಯಾಧೀಶರು ತಮ್ಮ ಕಾನೂನುಬದ್ದ ಕರ್ತವ್ಯ ನಿರ್ವಹಿಸುವ ಬದಲು, ಮಠಾಧೀಶರ ಬಳಿ ಹೋಗಿ ಎಂದಿರುವುದು ‘ಮಠಗಳು ಸಂವಿಧಾನದಡಿ ಇರುವ ನ್ಯಾಯಾಲಯಗಳಿಗಿಂತ ದೊಡ್ಡದು’ ಎಂಬ ಸಂದೇಶ ನೀಡುತ್ತದೆ. ನ್ಯಾಯಾಲಯಗಳು ವಾದ-ಪ್ರತಿವಾದ ಆಲಿಸಿ, ಸಾಕ್ಷ್ಯಗಳನ್ನು ಪರಿಶೀಲಿಸಿ ತೀರ್ಪು ನೀಡುವ ಬದಲು, ಮಠಗಳಿಗೆ ಕಳುಹಿಸುವುದು ಯಾವ ಬಗೆಯ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ನಿರ್ದಿಷ್ಟ ಜಾತಿ, ವರ್ಗದ ಮಠಗಳು ವಿವಾದಗಳನ್ನು ಬಗೆಹರಿಸುವ ನ್ಯಾಯಾಲಯಗಳಾದರೆ, ಸಂವಿಧಾನದಡಿ ಇರುವ ನ್ಯಾಯಾಲಯಗಳ ಅಗತ್ಯವೇನು? ಮಠಗಳನ್ನೇ ನ್ಯಾಯಾಲಯಗಳು ಎಂದು ಘೋಷಿಸಿಬಿಡಿ. ನ್ಯಾಯಮೂರ್ತಿ ದೀಕ್ಷಿತ್ ಅವರ ನಡೆ ಸಂವಿಧಾನ ವಿರೋಧಿ. ಇದು ಹಿಂದೆ ಮೇಲ್ಜಾತಿಯವರು ತೀರ್ಮಾನ ನೀಡುತ್ತಿದ್ದ ಪಂಚಾಯತಿ ಕಟ್ಟೆಗಳನ್ನು ನೆನಪಿಸುತ್ತದೆ. ಕಾನೂನಿನ ನಿಯಮದಡಿ ನ್ಯಾಯದಾನ ಮಾಡುವ ಬದಲು, ಜಾತಿ, ವರ್ಗ, ಮತಗಳಡಿ ಅನ್ಯಾಯವನ್ನು ಕ್ರಮಬದ್ದಗೊಳಿಸುವ ಕ್ರಮವಾಗಿದೆ” ಎಂದಿದ್ದಾರೆ.

“ನ್ಯಾಯಾಧೀಶರಿಗೆ ಮಧ್ಯಸ್ಥಿಕೆಯ ಅಗತ್ಯ ಕಂಡು ಬಂದರೆ ಕಾನೂನು ಸೇವಾ ಪ್ರಾಧಿಕಾರ ನಡೆಸುವ ಕಾನೂನು ಬದ್ದ ಸಂಧಾನ ಕೇಂದ್ರ (ಮೀಡಿಯೇಷನ್ ಸೆಂಟರ್ )ಕ್ಕೆ ಕಳಿಸಲು ಸೂಚಿಸಬಹುದಿತ್ತು. ಅದನ್ನು ಬಿಟ್ಟು ಮಠಾಧೀಶರ ಬಳಿ ಕಳುಹಿಸುವುದು ಕಾನೂನುಬದ್ದ ನ್ಯಾಯಪೀಠಕ್ಕಿಂತ ಮಠಾಧೀಶರ ನ್ಯಾಯಪೀಠವೇ ಮೇಲೂ ಎಂಬ ಸಂದೇಶ ರವಾನಿಸುತ್ತದೆ” ಎಂದು ಹೇಳಿದ್ದಾರೆ.

“ವಿವಾದ ಬಗೆಹರಿಸಲಿರುವ ಪರ್ಯಾರ್ಯ ವ್ಯವಸ್ಥೆ (ಎಡಿಆರ್) ಅಥವಾ ಮಧ್ಯಸ್ಥಿಕೆಗೆ ಎಲ್ಲೆಂದರಲ್ಲಿ ಶಿಫಾರಸು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮಧ್ಯಸ್ಥಿಕೆ ಮಾಡುವವರಿಗೂ ಕೆಲವು ಅರ್ಹತೆಗಳಿರಬೇಕು. ಆ ಅರ್ಹತೆ ಗವಿಸಿದ್ದೇಶ್ವರ ಸ್ವಾಮಿಗೆ ಇದೆಯಾ? ಎಂಬುವುದರ ಬಗ್ಗೆ ನ್ಯಾಯಾಲಯ ಏನನ್ನು ಹೇಳಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಾ.ವಿ.ಪಿ ನಿರಂಜನಾರಾದ್ಯ, ಬಸವರಾಜ ಸೂಳಿಭಾವಿ, ಡಾ. ವಸುಂದರ ಭೂಪತಿ, ಬಿ.ಸುರೇಶ, ಡಾ. ಸಬೀಹಾ ಭೂಮಿಗೌಡ, ಮೂಡ್ನಕೂಡ ಚಿನ್ನಸ್ವಾಮಿ, ಕ.ಮ ರವಿಶಂಕರ, ಲಕ್ಷ್ಮಣ ಕೊಡಸೆ, ಡಾ.ಜಯಲಕ್ಷ್ಮಿ ಹೆಚ್‌.ಜಿ, ಡಾ.ಮಂಜುನಾಥ್ ಬಿಆರ್, ಡಾ.ತುಕರಾಮ, ಶ್ರೀಪಾದ ಭಟ್ಟ, ಪೂಜಾ ಸಿಂಗೆ, ಪ್ರಕಾಶ ಬಿ, ಮುತ್ತು ಬಿಳಿಯಲಿ, ಜಿ.ಎಂ ವೀರಸಂಗಯ್ಯ, ಬಸವರಾಜ ಬ್ಯಾಗವಾಟ, ಎಸ್‌.ಸತ್ಯ, ವಿಶುಕುಮಾರ, ಅನಿಲ ಹೊಸಮನಿ, ಪ್ರಶಾಂತ್ ಹೊಸಪೇಟೆ, ಕರಿಬಸಪ್ಪ ಎಂ ಸೇರಿದಂತೆ ನಾಡಿನ ಪ್ರಗತಿಪರ ಚಿಂತಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಪೌರಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ : ಆರೋಪಿಯ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...