Homeಕರ್ನಾಟಕಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

- Advertisement -
- Advertisement -

ಕೌಟುಂಬಿಕ ಸಮಸ್ಯೆ ಪ್ರಕರಣದಲ್ಲಿ ನ್ಯಾಯಕೋರಿ ಧಾರವಾಡದ ಹೈಕೋರ್ಟ್‌ ಸರ್ಕ್ಯೂಟ್ ಪೀಠಕ್ಕೆ ಬಂದಿದ್ದ ದಂಪತಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಮಠಾಧೀಶರ ಬಳಿಗೆ ಕಳುಹಿಸಿರುವುದಕ್ಕೆ ನಾಡಿನ ಚಿಂತಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ದಂಪತಿ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಕೋರಿ ಹೈಕೋರ್ಟ್‌ ಪೀಠದ ಮೊರೆ ಹೋಗಿದ್ದರು. ಕಳೆದ ಸೆಪ್ಟೆಂಬರ್ 17ರಂದು ಪ್ರಕರಣದ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ದೀಕ್ಷಿತ್ ಅವರು, ದಂಪತಿಗೆ ಬುದ್ದಿವಾದ ಹೇಳಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೆ ವಿಚ್ಛೇದನ ಪಡೆಯುವುದು ಸರಿಯಲ್ಲ ಎಂದಿದ್ದಾರೆ.

ವಿಚಾರಣೆ ವೇಳೆ ಇಬ್ಬರ ವಾದ ಆಲಿಸಿದ ನ್ಯಾಯಮೂರ್ತಿ, ಆರಂಭದಲ್ಲಿ ಇಬ್ಬರೂ ಕೂಡ ಯಾರಾದರು ಆಪ್ತ ಸಮಾಲೋಚಕರ ಬಳಿ ಹೋಗಿ ಎಂದಿದ್ದರು. ಬಳಿಕ ಮಾತು ಮುಂದುವರಿಸಿದ ಅವರು, ಮಠಕ್ಕೆ ಹೋಗಿ ಸ್ವಾಮೀಜಿಗಳ ಪ್ರವಚನ ಕೇಳಿ ಎಂದಿದ್ದಾರೆ.

ಮೊದಲು ಪತಿಗೆ ಯಾವ ಮಠಕ್ಕೆ ಹೋಗ್ತೀರಿ? ಎಂದಾಗ ಅವರು ಗದಗದ ತೋಂಟದಾರ್ಯ ಮಠದ ಸ್ವಾಮಿ ಬಳಿ ಹೋಗ್ತೀನಿ ಎಂದಿದ್ದಾರೆ. ನಂತರ ಪತ್ನಿ ಬಳಿ ಕೇಳಿದಾಗ, ಆಕೆ ನಾನು ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಹೋಗ್ತೀನಿ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಿದ್ದಂತೆ, ಅವರ ಬಳಿ ಹೋಗಿ ಎಂದು ಸಲಹೆ ನೀಡಿದ್ದಾರೆ.

ನ್ಯಾಯಮೂರ್ತಿಯ ಈ ನಡೆಯನ್ನು ವಿರೋಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಚಿಂತಕರು, “ಜನರು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗುವುದು ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ. ಆದರೆ, ನ್ಯಾಯಾಧೀಶರು ತಮ್ಮ ಕಾನೂನುಬದ್ದ ಕರ್ತವ್ಯ ನಿರ್ವಹಿಸುವ ಬದಲು, ಮಠಾಧೀಶರ ಬಳಿ ಹೋಗಿ ಎಂದಿರುವುದು ‘ಮಠಗಳು ಸಂವಿಧಾನದಡಿ ಇರುವ ನ್ಯಾಯಾಲಯಗಳಿಗಿಂತ ದೊಡ್ಡದು’ ಎಂಬ ಸಂದೇಶ ನೀಡುತ್ತದೆ. ನ್ಯಾಯಾಲಯಗಳು ವಾದ-ಪ್ರತಿವಾದ ಆಲಿಸಿ, ಸಾಕ್ಷ್ಯಗಳನ್ನು ಪರಿಶೀಲಿಸಿ ತೀರ್ಪು ನೀಡುವ ಬದಲು, ಮಠಗಳಿಗೆ ಕಳುಹಿಸುವುದು ಯಾವ ಬಗೆಯ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ನಿರ್ದಿಷ್ಟ ಜಾತಿ, ವರ್ಗದ ಮಠಗಳು ವಿವಾದಗಳನ್ನು ಬಗೆಹರಿಸುವ ನ್ಯಾಯಾಲಯಗಳಾದರೆ, ಸಂವಿಧಾನದಡಿ ಇರುವ ನ್ಯಾಯಾಲಯಗಳ ಅಗತ್ಯವೇನು? ಮಠಗಳನ್ನೇ ನ್ಯಾಯಾಲಯಗಳು ಎಂದು ಘೋಷಿಸಿಬಿಡಿ. ನ್ಯಾಯಮೂರ್ತಿ ದೀಕ್ಷಿತ್ ಅವರ ನಡೆ ಸಂವಿಧಾನ ವಿರೋಧಿ. ಇದು ಹಿಂದೆ ಮೇಲ್ಜಾತಿಯವರು ತೀರ್ಮಾನ ನೀಡುತ್ತಿದ್ದ ಪಂಚಾಯತಿ ಕಟ್ಟೆಗಳನ್ನು ನೆನಪಿಸುತ್ತದೆ. ಕಾನೂನಿನ ನಿಯಮದಡಿ ನ್ಯಾಯದಾನ ಮಾಡುವ ಬದಲು, ಜಾತಿ, ವರ್ಗ, ಮತಗಳಡಿ ಅನ್ಯಾಯವನ್ನು ಕ್ರಮಬದ್ದಗೊಳಿಸುವ ಕ್ರಮವಾಗಿದೆ” ಎಂದಿದ್ದಾರೆ.

“ನ್ಯಾಯಾಧೀಶರಿಗೆ ಮಧ್ಯಸ್ಥಿಕೆಯ ಅಗತ್ಯ ಕಂಡು ಬಂದರೆ ಕಾನೂನು ಸೇವಾ ಪ್ರಾಧಿಕಾರ ನಡೆಸುವ ಕಾನೂನು ಬದ್ದ ಸಂಧಾನ ಕೇಂದ್ರ (ಮೀಡಿಯೇಷನ್ ಸೆಂಟರ್ )ಕ್ಕೆ ಕಳಿಸಲು ಸೂಚಿಸಬಹುದಿತ್ತು. ಅದನ್ನು ಬಿಟ್ಟು ಮಠಾಧೀಶರ ಬಳಿ ಕಳುಹಿಸುವುದು ಕಾನೂನುಬದ್ದ ನ್ಯಾಯಪೀಠಕ್ಕಿಂತ ಮಠಾಧೀಶರ ನ್ಯಾಯಪೀಠವೇ ಮೇಲೂ ಎಂಬ ಸಂದೇಶ ರವಾನಿಸುತ್ತದೆ” ಎಂದು ಹೇಳಿದ್ದಾರೆ.

“ವಿವಾದ ಬಗೆಹರಿಸಲಿರುವ ಪರ್ಯಾರ್ಯ ವ್ಯವಸ್ಥೆ (ಎಡಿಆರ್) ಅಥವಾ ಮಧ್ಯಸ್ಥಿಕೆಗೆ ಎಲ್ಲೆಂದರಲ್ಲಿ ಶಿಫಾರಸು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮಧ್ಯಸ್ಥಿಕೆ ಮಾಡುವವರಿಗೂ ಕೆಲವು ಅರ್ಹತೆಗಳಿರಬೇಕು. ಆ ಅರ್ಹತೆ ಗವಿಸಿದ್ದೇಶ್ವರ ಸ್ವಾಮಿಗೆ ಇದೆಯಾ? ಎಂಬುವುದರ ಬಗ್ಗೆ ನ್ಯಾಯಾಲಯ ಏನನ್ನು ಹೇಳಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಾ.ವಿ.ಪಿ ನಿರಂಜನಾರಾದ್ಯ, ಬಸವರಾಜ ಸೂಳಿಭಾವಿ, ಡಾ. ವಸುಂದರ ಭೂಪತಿ, ಬಿ.ಸುರೇಶ, ಡಾ. ಸಬೀಹಾ ಭೂಮಿಗೌಡ, ಮೂಡ್ನಕೂಡ ಚಿನ್ನಸ್ವಾಮಿ, ಕ.ಮ ರವಿಶಂಕರ, ಲಕ್ಷ್ಮಣ ಕೊಡಸೆ, ಡಾ.ಜಯಲಕ್ಷ್ಮಿ ಹೆಚ್‌.ಜಿ, ಡಾ.ಮಂಜುನಾಥ್ ಬಿಆರ್, ಡಾ.ತುಕರಾಮ, ಶ್ರೀಪಾದ ಭಟ್ಟ, ಪೂಜಾ ಸಿಂಗೆ, ಪ್ರಕಾಶ ಬಿ, ಮುತ್ತು ಬಿಳಿಯಲಿ, ಜಿ.ಎಂ ವೀರಸಂಗಯ್ಯ, ಬಸವರಾಜ ಬ್ಯಾಗವಾಟ, ಎಸ್‌.ಸತ್ಯ, ವಿಶುಕುಮಾರ, ಅನಿಲ ಹೊಸಮನಿ, ಪ್ರಶಾಂತ್ ಹೊಸಪೇಟೆ, ಕರಿಬಸಪ್ಪ ಎಂ ಸೇರಿದಂತೆ ನಾಡಿನ ಪ್ರಗತಿಪರ ಚಿಂತಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಪೌರಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ : ಆರೋಪಿಯ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...