Homeಕರ್ನಾಟಕಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

- Advertisement -
- Advertisement -

ಕೌಟುಂಬಿಕ ಸಮಸ್ಯೆ ಪ್ರಕರಣದಲ್ಲಿ ನ್ಯಾಯಕೋರಿ ಧಾರವಾಡದ ಹೈಕೋರ್ಟ್‌ ಸರ್ಕ್ಯೂಟ್ ಪೀಠಕ್ಕೆ ಬಂದಿದ್ದ ದಂಪತಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಮಠಾಧೀಶರ ಬಳಿಗೆ ಕಳುಹಿಸಿರುವುದಕ್ಕೆ ನಾಡಿನ ಚಿಂತಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ದಂಪತಿ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಕೋರಿ ಹೈಕೋರ್ಟ್‌ ಪೀಠದ ಮೊರೆ ಹೋಗಿದ್ದರು. ಕಳೆದ ಸೆಪ್ಟೆಂಬರ್ 17ರಂದು ಪ್ರಕರಣದ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ದೀಕ್ಷಿತ್ ಅವರು, ದಂಪತಿಗೆ ಬುದ್ದಿವಾದ ಹೇಳಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೆ ವಿಚ್ಛೇದನ ಪಡೆಯುವುದು ಸರಿಯಲ್ಲ ಎಂದಿದ್ದಾರೆ.

ವಿಚಾರಣೆ ವೇಳೆ ಇಬ್ಬರ ವಾದ ಆಲಿಸಿದ ನ್ಯಾಯಮೂರ್ತಿ, ಆರಂಭದಲ್ಲಿ ಇಬ್ಬರೂ ಕೂಡ ಯಾರಾದರು ಆಪ್ತ ಸಮಾಲೋಚಕರ ಬಳಿ ಹೋಗಿ ಎಂದಿದ್ದರು. ಬಳಿಕ ಮಾತು ಮುಂದುವರಿಸಿದ ಅವರು, ಮಠಕ್ಕೆ ಹೋಗಿ ಸ್ವಾಮೀಜಿಗಳ ಪ್ರವಚನ ಕೇಳಿ ಎಂದಿದ್ದಾರೆ.

ಮೊದಲು ಪತಿಗೆ ಯಾವ ಮಠಕ್ಕೆ ಹೋಗ್ತೀರಿ? ಎಂದಾಗ ಅವರು ಗದಗದ ತೋಂಟದಾರ್ಯ ಮಠದ ಸ್ವಾಮಿ ಬಳಿ ಹೋಗ್ತೀನಿ ಎಂದಿದ್ದಾರೆ. ನಂತರ ಪತ್ನಿ ಬಳಿ ಕೇಳಿದಾಗ, ಆಕೆ ನಾನು ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಹೋಗ್ತೀನಿ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಿದ್ದಂತೆ, ಅವರ ಬಳಿ ಹೋಗಿ ಎಂದು ಸಲಹೆ ನೀಡಿದ್ದಾರೆ.

ನ್ಯಾಯಮೂರ್ತಿಯ ಈ ನಡೆಯನ್ನು ವಿರೋಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಚಿಂತಕರು, “ಜನರು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗುವುದು ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ. ಆದರೆ, ನ್ಯಾಯಾಧೀಶರು ತಮ್ಮ ಕಾನೂನುಬದ್ದ ಕರ್ತವ್ಯ ನಿರ್ವಹಿಸುವ ಬದಲು, ಮಠಾಧೀಶರ ಬಳಿ ಹೋಗಿ ಎಂದಿರುವುದು ‘ಮಠಗಳು ಸಂವಿಧಾನದಡಿ ಇರುವ ನ್ಯಾಯಾಲಯಗಳಿಗಿಂತ ದೊಡ್ಡದು’ ಎಂಬ ಸಂದೇಶ ನೀಡುತ್ತದೆ. ನ್ಯಾಯಾಲಯಗಳು ವಾದ-ಪ್ರತಿವಾದ ಆಲಿಸಿ, ಸಾಕ್ಷ್ಯಗಳನ್ನು ಪರಿಶೀಲಿಸಿ ತೀರ್ಪು ನೀಡುವ ಬದಲು, ಮಠಗಳಿಗೆ ಕಳುಹಿಸುವುದು ಯಾವ ಬಗೆಯ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ನಿರ್ದಿಷ್ಟ ಜಾತಿ, ವರ್ಗದ ಮಠಗಳು ವಿವಾದಗಳನ್ನು ಬಗೆಹರಿಸುವ ನ್ಯಾಯಾಲಯಗಳಾದರೆ, ಸಂವಿಧಾನದಡಿ ಇರುವ ನ್ಯಾಯಾಲಯಗಳ ಅಗತ್ಯವೇನು? ಮಠಗಳನ್ನೇ ನ್ಯಾಯಾಲಯಗಳು ಎಂದು ಘೋಷಿಸಿಬಿಡಿ. ನ್ಯಾಯಮೂರ್ತಿ ದೀಕ್ಷಿತ್ ಅವರ ನಡೆ ಸಂವಿಧಾನ ವಿರೋಧಿ. ಇದು ಹಿಂದೆ ಮೇಲ್ಜಾತಿಯವರು ತೀರ್ಮಾನ ನೀಡುತ್ತಿದ್ದ ಪಂಚಾಯತಿ ಕಟ್ಟೆಗಳನ್ನು ನೆನಪಿಸುತ್ತದೆ. ಕಾನೂನಿನ ನಿಯಮದಡಿ ನ್ಯಾಯದಾನ ಮಾಡುವ ಬದಲು, ಜಾತಿ, ವರ್ಗ, ಮತಗಳಡಿ ಅನ್ಯಾಯವನ್ನು ಕ್ರಮಬದ್ದಗೊಳಿಸುವ ಕ್ರಮವಾಗಿದೆ” ಎಂದಿದ್ದಾರೆ.

“ನ್ಯಾಯಾಧೀಶರಿಗೆ ಮಧ್ಯಸ್ಥಿಕೆಯ ಅಗತ್ಯ ಕಂಡು ಬಂದರೆ ಕಾನೂನು ಸೇವಾ ಪ್ರಾಧಿಕಾರ ನಡೆಸುವ ಕಾನೂನು ಬದ್ದ ಸಂಧಾನ ಕೇಂದ್ರ (ಮೀಡಿಯೇಷನ್ ಸೆಂಟರ್ )ಕ್ಕೆ ಕಳಿಸಲು ಸೂಚಿಸಬಹುದಿತ್ತು. ಅದನ್ನು ಬಿಟ್ಟು ಮಠಾಧೀಶರ ಬಳಿ ಕಳುಹಿಸುವುದು ಕಾನೂನುಬದ್ದ ನ್ಯಾಯಪೀಠಕ್ಕಿಂತ ಮಠಾಧೀಶರ ನ್ಯಾಯಪೀಠವೇ ಮೇಲೂ ಎಂಬ ಸಂದೇಶ ರವಾನಿಸುತ್ತದೆ” ಎಂದು ಹೇಳಿದ್ದಾರೆ.

“ವಿವಾದ ಬಗೆಹರಿಸಲಿರುವ ಪರ್ಯಾರ್ಯ ವ್ಯವಸ್ಥೆ (ಎಡಿಆರ್) ಅಥವಾ ಮಧ್ಯಸ್ಥಿಕೆಗೆ ಎಲ್ಲೆಂದರಲ್ಲಿ ಶಿಫಾರಸು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮಧ್ಯಸ್ಥಿಕೆ ಮಾಡುವವರಿಗೂ ಕೆಲವು ಅರ್ಹತೆಗಳಿರಬೇಕು. ಆ ಅರ್ಹತೆ ಗವಿಸಿದ್ದೇಶ್ವರ ಸ್ವಾಮಿಗೆ ಇದೆಯಾ? ಎಂಬುವುದರ ಬಗ್ಗೆ ನ್ಯಾಯಾಲಯ ಏನನ್ನು ಹೇಳಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಾ.ವಿ.ಪಿ ನಿರಂಜನಾರಾದ್ಯ, ಬಸವರಾಜ ಸೂಳಿಭಾವಿ, ಡಾ. ವಸುಂದರ ಭೂಪತಿ, ಬಿ.ಸುರೇಶ, ಡಾ. ಸಬೀಹಾ ಭೂಮಿಗೌಡ, ಮೂಡ್ನಕೂಡ ಚಿನ್ನಸ್ವಾಮಿ, ಕ.ಮ ರವಿಶಂಕರ, ಲಕ್ಷ್ಮಣ ಕೊಡಸೆ, ಡಾ.ಜಯಲಕ್ಷ್ಮಿ ಹೆಚ್‌.ಜಿ, ಡಾ.ಮಂಜುನಾಥ್ ಬಿಆರ್, ಡಾ.ತುಕರಾಮ, ಶ್ರೀಪಾದ ಭಟ್ಟ, ಪೂಜಾ ಸಿಂಗೆ, ಪ್ರಕಾಶ ಬಿ, ಮುತ್ತು ಬಿಳಿಯಲಿ, ಜಿ.ಎಂ ವೀರಸಂಗಯ್ಯ, ಬಸವರಾಜ ಬ್ಯಾಗವಾಟ, ಎಸ್‌.ಸತ್ಯ, ವಿಶುಕುಮಾರ, ಅನಿಲ ಹೊಸಮನಿ, ಪ್ರಶಾಂತ್ ಹೊಸಪೇಟೆ, ಕರಿಬಸಪ್ಪ ಎಂ ಸೇರಿದಂತೆ ನಾಡಿನ ಪ್ರಗತಿಪರ ಚಿಂತಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಪೌರಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ : ಆರೋಪಿಯ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...