Homeಕರ್ನಾಟಕಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

- Advertisement -
- Advertisement -

ಕೌಟುಂಬಿಕ ಸಮಸ್ಯೆ ಪ್ರಕರಣದಲ್ಲಿ ನ್ಯಾಯಕೋರಿ ಧಾರವಾಡದ ಹೈಕೋರ್ಟ್‌ ಸರ್ಕ್ಯೂಟ್ ಪೀಠಕ್ಕೆ ಬಂದಿದ್ದ ದಂಪತಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಮಠಾಧೀಶರ ಬಳಿಗೆ ಕಳುಹಿಸಿರುವುದಕ್ಕೆ ನಾಡಿನ ಚಿಂತಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ದಂಪತಿ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಕೋರಿ ಹೈಕೋರ್ಟ್‌ ಪೀಠದ ಮೊರೆ ಹೋಗಿದ್ದರು. ಕಳೆದ ಸೆಪ್ಟೆಂಬರ್ 17ರಂದು ಪ್ರಕರಣದ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ದೀಕ್ಷಿತ್ ಅವರು, ದಂಪತಿಗೆ ಬುದ್ದಿವಾದ ಹೇಳಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೆ ವಿಚ್ಛೇದನ ಪಡೆಯುವುದು ಸರಿಯಲ್ಲ ಎಂದಿದ್ದಾರೆ.

ವಿಚಾರಣೆ ವೇಳೆ ಇಬ್ಬರ ವಾದ ಆಲಿಸಿದ ನ್ಯಾಯಮೂರ್ತಿ, ಆರಂಭದಲ್ಲಿ ಇಬ್ಬರೂ ಕೂಡ ಯಾರಾದರು ಆಪ್ತ ಸಮಾಲೋಚಕರ ಬಳಿ ಹೋಗಿ ಎಂದಿದ್ದರು. ಬಳಿಕ ಮಾತು ಮುಂದುವರಿಸಿದ ಅವರು, ಮಠಕ್ಕೆ ಹೋಗಿ ಸ್ವಾಮೀಜಿಗಳ ಪ್ರವಚನ ಕೇಳಿ ಎಂದಿದ್ದಾರೆ.

ಮೊದಲು ಪತಿಗೆ ಯಾವ ಮಠಕ್ಕೆ ಹೋಗ್ತೀರಿ? ಎಂದಾಗ ಅವರು ಗದಗದ ತೋಂಟದಾರ್ಯ ಮಠದ ಸ್ವಾಮಿ ಬಳಿ ಹೋಗ್ತೀನಿ ಎಂದಿದ್ದಾರೆ. ನಂತರ ಪತ್ನಿ ಬಳಿ ಕೇಳಿದಾಗ, ಆಕೆ ನಾನು ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಹೋಗ್ತೀನಿ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಿದ್ದಂತೆ, ಅವರ ಬಳಿ ಹೋಗಿ ಎಂದು ಸಲಹೆ ನೀಡಿದ್ದಾರೆ.

ನ್ಯಾಯಮೂರ್ತಿಯ ಈ ನಡೆಯನ್ನು ವಿರೋಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಚಿಂತಕರು, “ಜನರು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗುವುದು ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ. ಆದರೆ, ನ್ಯಾಯಾಧೀಶರು ತಮ್ಮ ಕಾನೂನುಬದ್ದ ಕರ್ತವ್ಯ ನಿರ್ವಹಿಸುವ ಬದಲು, ಮಠಾಧೀಶರ ಬಳಿ ಹೋಗಿ ಎಂದಿರುವುದು ‘ಮಠಗಳು ಸಂವಿಧಾನದಡಿ ಇರುವ ನ್ಯಾಯಾಲಯಗಳಿಗಿಂತ ದೊಡ್ಡದು’ ಎಂಬ ಸಂದೇಶ ನೀಡುತ್ತದೆ. ನ್ಯಾಯಾಲಯಗಳು ವಾದ-ಪ್ರತಿವಾದ ಆಲಿಸಿ, ಸಾಕ್ಷ್ಯಗಳನ್ನು ಪರಿಶೀಲಿಸಿ ತೀರ್ಪು ನೀಡುವ ಬದಲು, ಮಠಗಳಿಗೆ ಕಳುಹಿಸುವುದು ಯಾವ ಬಗೆಯ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ನಿರ್ದಿಷ್ಟ ಜಾತಿ, ವರ್ಗದ ಮಠಗಳು ವಿವಾದಗಳನ್ನು ಬಗೆಹರಿಸುವ ನ್ಯಾಯಾಲಯಗಳಾದರೆ, ಸಂವಿಧಾನದಡಿ ಇರುವ ನ್ಯಾಯಾಲಯಗಳ ಅಗತ್ಯವೇನು? ಮಠಗಳನ್ನೇ ನ್ಯಾಯಾಲಯಗಳು ಎಂದು ಘೋಷಿಸಿಬಿಡಿ. ನ್ಯಾಯಮೂರ್ತಿ ದೀಕ್ಷಿತ್ ಅವರ ನಡೆ ಸಂವಿಧಾನ ವಿರೋಧಿ. ಇದು ಹಿಂದೆ ಮೇಲ್ಜಾತಿಯವರು ತೀರ್ಮಾನ ನೀಡುತ್ತಿದ್ದ ಪಂಚಾಯತಿ ಕಟ್ಟೆಗಳನ್ನು ನೆನಪಿಸುತ್ತದೆ. ಕಾನೂನಿನ ನಿಯಮದಡಿ ನ್ಯಾಯದಾನ ಮಾಡುವ ಬದಲು, ಜಾತಿ, ವರ್ಗ, ಮತಗಳಡಿ ಅನ್ಯಾಯವನ್ನು ಕ್ರಮಬದ್ದಗೊಳಿಸುವ ಕ್ರಮವಾಗಿದೆ” ಎಂದಿದ್ದಾರೆ.

“ನ್ಯಾಯಾಧೀಶರಿಗೆ ಮಧ್ಯಸ್ಥಿಕೆಯ ಅಗತ್ಯ ಕಂಡು ಬಂದರೆ ಕಾನೂನು ಸೇವಾ ಪ್ರಾಧಿಕಾರ ನಡೆಸುವ ಕಾನೂನು ಬದ್ದ ಸಂಧಾನ ಕೇಂದ್ರ (ಮೀಡಿಯೇಷನ್ ಸೆಂಟರ್ )ಕ್ಕೆ ಕಳಿಸಲು ಸೂಚಿಸಬಹುದಿತ್ತು. ಅದನ್ನು ಬಿಟ್ಟು ಮಠಾಧೀಶರ ಬಳಿ ಕಳುಹಿಸುವುದು ಕಾನೂನುಬದ್ದ ನ್ಯಾಯಪೀಠಕ್ಕಿಂತ ಮಠಾಧೀಶರ ನ್ಯಾಯಪೀಠವೇ ಮೇಲೂ ಎಂಬ ಸಂದೇಶ ರವಾನಿಸುತ್ತದೆ” ಎಂದು ಹೇಳಿದ್ದಾರೆ.

“ವಿವಾದ ಬಗೆಹರಿಸಲಿರುವ ಪರ್ಯಾರ್ಯ ವ್ಯವಸ್ಥೆ (ಎಡಿಆರ್) ಅಥವಾ ಮಧ್ಯಸ್ಥಿಕೆಗೆ ಎಲ್ಲೆಂದರಲ್ಲಿ ಶಿಫಾರಸು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮಧ್ಯಸ್ಥಿಕೆ ಮಾಡುವವರಿಗೂ ಕೆಲವು ಅರ್ಹತೆಗಳಿರಬೇಕು. ಆ ಅರ್ಹತೆ ಗವಿಸಿದ್ದೇಶ್ವರ ಸ್ವಾಮಿಗೆ ಇದೆಯಾ? ಎಂಬುವುದರ ಬಗ್ಗೆ ನ್ಯಾಯಾಲಯ ಏನನ್ನು ಹೇಳಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಾ.ವಿ.ಪಿ ನಿರಂಜನಾರಾದ್ಯ, ಬಸವರಾಜ ಸೂಳಿಭಾವಿ, ಡಾ. ವಸುಂದರ ಭೂಪತಿ, ಬಿ.ಸುರೇಶ, ಡಾ. ಸಬೀಹಾ ಭೂಮಿಗೌಡ, ಮೂಡ್ನಕೂಡ ಚಿನ್ನಸ್ವಾಮಿ, ಕ.ಮ ರವಿಶಂಕರ, ಲಕ್ಷ್ಮಣ ಕೊಡಸೆ, ಡಾ.ಜಯಲಕ್ಷ್ಮಿ ಹೆಚ್‌.ಜಿ, ಡಾ.ಮಂಜುನಾಥ್ ಬಿಆರ್, ಡಾ.ತುಕರಾಮ, ಶ್ರೀಪಾದ ಭಟ್ಟ, ಪೂಜಾ ಸಿಂಗೆ, ಪ್ರಕಾಶ ಬಿ, ಮುತ್ತು ಬಿಳಿಯಲಿ, ಜಿ.ಎಂ ವೀರಸಂಗಯ್ಯ, ಬಸವರಾಜ ಬ್ಯಾಗವಾಟ, ಎಸ್‌.ಸತ್ಯ, ವಿಶುಕುಮಾರ, ಅನಿಲ ಹೊಸಮನಿ, ಪ್ರಶಾಂತ್ ಹೊಸಪೇಟೆ, ಕರಿಬಸಪ್ಪ ಎಂ ಸೇರಿದಂತೆ ನಾಡಿನ ಪ್ರಗತಿಪರ ಚಿಂತಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಪೌರಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ : ಆರೋಪಿಯ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...