Homeಕರ್ನಾಟಕಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

- Advertisement -
- Advertisement -

ಕೌಟುಂಬಿಕ ಸಮಸ್ಯೆ ಪ್ರಕರಣದಲ್ಲಿ ನ್ಯಾಯಕೋರಿ ಧಾರವಾಡದ ಹೈಕೋರ್ಟ್‌ ಸರ್ಕ್ಯೂಟ್ ಪೀಠಕ್ಕೆ ಬಂದಿದ್ದ ದಂಪತಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಮಠಾಧೀಶರ ಬಳಿಗೆ ಕಳುಹಿಸಿರುವುದಕ್ಕೆ ನಾಡಿನ ಚಿಂತಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ದಂಪತಿ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಕೋರಿ ಹೈಕೋರ್ಟ್‌ ಪೀಠದ ಮೊರೆ ಹೋಗಿದ್ದರು. ಕಳೆದ ಸೆಪ್ಟೆಂಬರ್ 17ರಂದು ಪ್ರಕರಣದ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ದೀಕ್ಷಿತ್ ಅವರು, ದಂಪತಿಗೆ ಬುದ್ದಿವಾದ ಹೇಳಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೆ ವಿಚ್ಛೇದನ ಪಡೆಯುವುದು ಸರಿಯಲ್ಲ ಎಂದಿದ್ದಾರೆ.

ವಿಚಾರಣೆ ವೇಳೆ ಇಬ್ಬರ ವಾದ ಆಲಿಸಿದ ನ್ಯಾಯಮೂರ್ತಿ, ಆರಂಭದಲ್ಲಿ ಇಬ್ಬರೂ ಕೂಡ ಯಾರಾದರು ಆಪ್ತ ಸಮಾಲೋಚಕರ ಬಳಿ ಹೋಗಿ ಎಂದಿದ್ದರು. ಬಳಿಕ ಮಾತು ಮುಂದುವರಿಸಿದ ಅವರು, ಮಠಕ್ಕೆ ಹೋಗಿ ಸ್ವಾಮೀಜಿಗಳ ಪ್ರವಚನ ಕೇಳಿ ಎಂದಿದ್ದಾರೆ.

ಮೊದಲು ಪತಿಗೆ ಯಾವ ಮಠಕ್ಕೆ ಹೋಗ್ತೀರಿ? ಎಂದಾಗ ಅವರು ಗದಗದ ತೋಂಟದಾರ್ಯ ಮಠದ ಸ್ವಾಮಿ ಬಳಿ ಹೋಗ್ತೀನಿ ಎಂದಿದ್ದಾರೆ. ನಂತರ ಪತ್ನಿ ಬಳಿ ಕೇಳಿದಾಗ, ಆಕೆ ನಾನು ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಹೋಗ್ತೀನಿ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಿದ್ದಂತೆ, ಅವರ ಬಳಿ ಹೋಗಿ ಎಂದು ಸಲಹೆ ನೀಡಿದ್ದಾರೆ.

ನ್ಯಾಯಮೂರ್ತಿಯ ಈ ನಡೆಯನ್ನು ವಿರೋಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಚಿಂತಕರು, “ಜನರು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗುವುದು ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ. ಆದರೆ, ನ್ಯಾಯಾಧೀಶರು ತಮ್ಮ ಕಾನೂನುಬದ್ದ ಕರ್ತವ್ಯ ನಿರ್ವಹಿಸುವ ಬದಲು, ಮಠಾಧೀಶರ ಬಳಿ ಹೋಗಿ ಎಂದಿರುವುದು ‘ಮಠಗಳು ಸಂವಿಧಾನದಡಿ ಇರುವ ನ್ಯಾಯಾಲಯಗಳಿಗಿಂತ ದೊಡ್ಡದು’ ಎಂಬ ಸಂದೇಶ ನೀಡುತ್ತದೆ. ನ್ಯಾಯಾಲಯಗಳು ವಾದ-ಪ್ರತಿವಾದ ಆಲಿಸಿ, ಸಾಕ್ಷ್ಯಗಳನ್ನು ಪರಿಶೀಲಿಸಿ ತೀರ್ಪು ನೀಡುವ ಬದಲು, ಮಠಗಳಿಗೆ ಕಳುಹಿಸುವುದು ಯಾವ ಬಗೆಯ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ನಿರ್ದಿಷ್ಟ ಜಾತಿ, ವರ್ಗದ ಮಠಗಳು ವಿವಾದಗಳನ್ನು ಬಗೆಹರಿಸುವ ನ್ಯಾಯಾಲಯಗಳಾದರೆ, ಸಂವಿಧಾನದಡಿ ಇರುವ ನ್ಯಾಯಾಲಯಗಳ ಅಗತ್ಯವೇನು? ಮಠಗಳನ್ನೇ ನ್ಯಾಯಾಲಯಗಳು ಎಂದು ಘೋಷಿಸಿಬಿಡಿ. ನ್ಯಾಯಮೂರ್ತಿ ದೀಕ್ಷಿತ್ ಅವರ ನಡೆ ಸಂವಿಧಾನ ವಿರೋಧಿ. ಇದು ಹಿಂದೆ ಮೇಲ್ಜಾತಿಯವರು ತೀರ್ಮಾನ ನೀಡುತ್ತಿದ್ದ ಪಂಚಾಯತಿ ಕಟ್ಟೆಗಳನ್ನು ನೆನಪಿಸುತ್ತದೆ. ಕಾನೂನಿನ ನಿಯಮದಡಿ ನ್ಯಾಯದಾನ ಮಾಡುವ ಬದಲು, ಜಾತಿ, ವರ್ಗ, ಮತಗಳಡಿ ಅನ್ಯಾಯವನ್ನು ಕ್ರಮಬದ್ದಗೊಳಿಸುವ ಕ್ರಮವಾಗಿದೆ” ಎಂದಿದ್ದಾರೆ.

“ನ್ಯಾಯಾಧೀಶರಿಗೆ ಮಧ್ಯಸ್ಥಿಕೆಯ ಅಗತ್ಯ ಕಂಡು ಬಂದರೆ ಕಾನೂನು ಸೇವಾ ಪ್ರಾಧಿಕಾರ ನಡೆಸುವ ಕಾನೂನು ಬದ್ದ ಸಂಧಾನ ಕೇಂದ್ರ (ಮೀಡಿಯೇಷನ್ ಸೆಂಟರ್ )ಕ್ಕೆ ಕಳಿಸಲು ಸೂಚಿಸಬಹುದಿತ್ತು. ಅದನ್ನು ಬಿಟ್ಟು ಮಠಾಧೀಶರ ಬಳಿ ಕಳುಹಿಸುವುದು ಕಾನೂನುಬದ್ದ ನ್ಯಾಯಪೀಠಕ್ಕಿಂತ ಮಠಾಧೀಶರ ನ್ಯಾಯಪೀಠವೇ ಮೇಲೂ ಎಂಬ ಸಂದೇಶ ರವಾನಿಸುತ್ತದೆ” ಎಂದು ಹೇಳಿದ್ದಾರೆ.

“ವಿವಾದ ಬಗೆಹರಿಸಲಿರುವ ಪರ್ಯಾರ್ಯ ವ್ಯವಸ್ಥೆ (ಎಡಿಆರ್) ಅಥವಾ ಮಧ್ಯಸ್ಥಿಕೆಗೆ ಎಲ್ಲೆಂದರಲ್ಲಿ ಶಿಫಾರಸು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮಧ್ಯಸ್ಥಿಕೆ ಮಾಡುವವರಿಗೂ ಕೆಲವು ಅರ್ಹತೆಗಳಿರಬೇಕು. ಆ ಅರ್ಹತೆ ಗವಿಸಿದ್ದೇಶ್ವರ ಸ್ವಾಮಿಗೆ ಇದೆಯಾ? ಎಂಬುವುದರ ಬಗ್ಗೆ ನ್ಯಾಯಾಲಯ ಏನನ್ನು ಹೇಳಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಾ.ವಿ.ಪಿ ನಿರಂಜನಾರಾದ್ಯ, ಬಸವರಾಜ ಸೂಳಿಭಾವಿ, ಡಾ. ವಸುಂದರ ಭೂಪತಿ, ಬಿ.ಸುರೇಶ, ಡಾ. ಸಬೀಹಾ ಭೂಮಿಗೌಡ, ಮೂಡ್ನಕೂಡ ಚಿನ್ನಸ್ವಾಮಿ, ಕ.ಮ ರವಿಶಂಕರ, ಲಕ್ಷ್ಮಣ ಕೊಡಸೆ, ಡಾ.ಜಯಲಕ್ಷ್ಮಿ ಹೆಚ್‌.ಜಿ, ಡಾ.ಮಂಜುನಾಥ್ ಬಿಆರ್, ಡಾ.ತುಕರಾಮ, ಶ್ರೀಪಾದ ಭಟ್ಟ, ಪೂಜಾ ಸಿಂಗೆ, ಪ್ರಕಾಶ ಬಿ, ಮುತ್ತು ಬಿಳಿಯಲಿ, ಜಿ.ಎಂ ವೀರಸಂಗಯ್ಯ, ಬಸವರಾಜ ಬ್ಯಾಗವಾಟ, ಎಸ್‌.ಸತ್ಯ, ವಿಶುಕುಮಾರ, ಅನಿಲ ಹೊಸಮನಿ, ಪ್ರಶಾಂತ್ ಹೊಸಪೇಟೆ, ಕರಿಬಸಪ್ಪ ಎಂ ಸೇರಿದಂತೆ ನಾಡಿನ ಪ್ರಗತಿಪರ ಚಿಂತಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಪೌರಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ : ಆರೋಪಿಯ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...