Homeಕರ್ನಾಟಕಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ದಂಪತಿಯನ್ನು ಮಠಕ್ಕೆ ಕಳಿಸಿದ ನ್ಯಾಯಾಧೀಶರು : ಚಿಂತಕರ ವಿರೋಧ

- Advertisement -
- Advertisement -

ಕೌಟುಂಬಿಕ ಸಮಸ್ಯೆ ಪ್ರಕರಣದಲ್ಲಿ ನ್ಯಾಯಕೋರಿ ಧಾರವಾಡದ ಹೈಕೋರ್ಟ್‌ ಸರ್ಕ್ಯೂಟ್ ಪೀಠಕ್ಕೆ ಬಂದಿದ್ದ ದಂಪತಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಮಠಾಧೀಶರ ಬಳಿಗೆ ಕಳುಹಿಸಿರುವುದಕ್ಕೆ ನಾಡಿನ ಚಿಂತಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ದಂಪತಿ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಕೋರಿ ಹೈಕೋರ್ಟ್‌ ಪೀಠದ ಮೊರೆ ಹೋಗಿದ್ದರು. ಕಳೆದ ಸೆಪ್ಟೆಂಬರ್ 17ರಂದು ಪ್ರಕರಣದ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ದೀಕ್ಷಿತ್ ಅವರು, ದಂಪತಿಗೆ ಬುದ್ದಿವಾದ ಹೇಳಿದ್ದಾರೆ. ಸಣ್ಣಪುಟ್ಟ ವಿಚಾರಗಳಿಗೆ ವಿಚ್ಛೇದನ ಪಡೆಯುವುದು ಸರಿಯಲ್ಲ ಎಂದಿದ್ದಾರೆ.

ವಿಚಾರಣೆ ವೇಳೆ ಇಬ್ಬರ ವಾದ ಆಲಿಸಿದ ನ್ಯಾಯಮೂರ್ತಿ, ಆರಂಭದಲ್ಲಿ ಇಬ್ಬರೂ ಕೂಡ ಯಾರಾದರು ಆಪ್ತ ಸಮಾಲೋಚಕರ ಬಳಿ ಹೋಗಿ ಎಂದಿದ್ದರು. ಬಳಿಕ ಮಾತು ಮುಂದುವರಿಸಿದ ಅವರು, ಮಠಕ್ಕೆ ಹೋಗಿ ಸ್ವಾಮೀಜಿಗಳ ಪ್ರವಚನ ಕೇಳಿ ಎಂದಿದ್ದಾರೆ.

ಮೊದಲು ಪತಿಗೆ ಯಾವ ಮಠಕ್ಕೆ ಹೋಗ್ತೀರಿ? ಎಂದಾಗ ಅವರು ಗದಗದ ತೋಂಟದಾರ್ಯ ಮಠದ ಸ್ವಾಮಿ ಬಳಿ ಹೋಗ್ತೀನಿ ಎಂದಿದ್ದಾರೆ. ನಂತರ ಪತ್ನಿ ಬಳಿ ಕೇಳಿದಾಗ, ಆಕೆ ನಾನು ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಹೋಗ್ತೀನಿ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಿದ್ದಂತೆ, ಅವರ ಬಳಿ ಹೋಗಿ ಎಂದು ಸಲಹೆ ನೀಡಿದ್ದಾರೆ.

ನ್ಯಾಯಮೂರ್ತಿಯ ಈ ನಡೆಯನ್ನು ವಿರೋಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಚಿಂತಕರು, “ಜನರು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗುವುದು ನ್ಯಾಯ ಸಿಗುತ್ತದೆ ಎಂಬ ಭರವಸೆಯಿಂದ. ಆದರೆ, ನ್ಯಾಯಾಧೀಶರು ತಮ್ಮ ಕಾನೂನುಬದ್ದ ಕರ್ತವ್ಯ ನಿರ್ವಹಿಸುವ ಬದಲು, ಮಠಾಧೀಶರ ಬಳಿ ಹೋಗಿ ಎಂದಿರುವುದು ‘ಮಠಗಳು ಸಂವಿಧಾನದಡಿ ಇರುವ ನ್ಯಾಯಾಲಯಗಳಿಗಿಂತ ದೊಡ್ಡದು’ ಎಂಬ ಸಂದೇಶ ನೀಡುತ್ತದೆ. ನ್ಯಾಯಾಲಯಗಳು ವಾದ-ಪ್ರತಿವಾದ ಆಲಿಸಿ, ಸಾಕ್ಷ್ಯಗಳನ್ನು ಪರಿಶೀಲಿಸಿ ತೀರ್ಪು ನೀಡುವ ಬದಲು, ಮಠಗಳಿಗೆ ಕಳುಹಿಸುವುದು ಯಾವ ಬಗೆಯ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ನಿರ್ದಿಷ್ಟ ಜಾತಿ, ವರ್ಗದ ಮಠಗಳು ವಿವಾದಗಳನ್ನು ಬಗೆಹರಿಸುವ ನ್ಯಾಯಾಲಯಗಳಾದರೆ, ಸಂವಿಧಾನದಡಿ ಇರುವ ನ್ಯಾಯಾಲಯಗಳ ಅಗತ್ಯವೇನು? ಮಠಗಳನ್ನೇ ನ್ಯಾಯಾಲಯಗಳು ಎಂದು ಘೋಷಿಸಿಬಿಡಿ. ನ್ಯಾಯಮೂರ್ತಿ ದೀಕ್ಷಿತ್ ಅವರ ನಡೆ ಸಂವಿಧಾನ ವಿರೋಧಿ. ಇದು ಹಿಂದೆ ಮೇಲ್ಜಾತಿಯವರು ತೀರ್ಮಾನ ನೀಡುತ್ತಿದ್ದ ಪಂಚಾಯತಿ ಕಟ್ಟೆಗಳನ್ನು ನೆನಪಿಸುತ್ತದೆ. ಕಾನೂನಿನ ನಿಯಮದಡಿ ನ್ಯಾಯದಾನ ಮಾಡುವ ಬದಲು, ಜಾತಿ, ವರ್ಗ, ಮತಗಳಡಿ ಅನ್ಯಾಯವನ್ನು ಕ್ರಮಬದ್ದಗೊಳಿಸುವ ಕ್ರಮವಾಗಿದೆ” ಎಂದಿದ್ದಾರೆ.

“ನ್ಯಾಯಾಧೀಶರಿಗೆ ಮಧ್ಯಸ್ಥಿಕೆಯ ಅಗತ್ಯ ಕಂಡು ಬಂದರೆ ಕಾನೂನು ಸೇವಾ ಪ್ರಾಧಿಕಾರ ನಡೆಸುವ ಕಾನೂನು ಬದ್ದ ಸಂಧಾನ ಕೇಂದ್ರ (ಮೀಡಿಯೇಷನ್ ಸೆಂಟರ್ )ಕ್ಕೆ ಕಳಿಸಲು ಸೂಚಿಸಬಹುದಿತ್ತು. ಅದನ್ನು ಬಿಟ್ಟು ಮಠಾಧೀಶರ ಬಳಿ ಕಳುಹಿಸುವುದು ಕಾನೂನುಬದ್ದ ನ್ಯಾಯಪೀಠಕ್ಕಿಂತ ಮಠಾಧೀಶರ ನ್ಯಾಯಪೀಠವೇ ಮೇಲೂ ಎಂಬ ಸಂದೇಶ ರವಾನಿಸುತ್ತದೆ” ಎಂದು ಹೇಳಿದ್ದಾರೆ.

“ವಿವಾದ ಬಗೆಹರಿಸಲಿರುವ ಪರ್ಯಾರ್ಯ ವ್ಯವಸ್ಥೆ (ಎಡಿಆರ್) ಅಥವಾ ಮಧ್ಯಸ್ಥಿಕೆಗೆ ಎಲ್ಲೆಂದರಲ್ಲಿ ಶಿಫಾರಸು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮಧ್ಯಸ್ಥಿಕೆ ಮಾಡುವವರಿಗೂ ಕೆಲವು ಅರ್ಹತೆಗಳಿರಬೇಕು. ಆ ಅರ್ಹತೆ ಗವಿಸಿದ್ದೇಶ್ವರ ಸ್ವಾಮಿಗೆ ಇದೆಯಾ? ಎಂಬುವುದರ ಬಗ್ಗೆ ನ್ಯಾಯಾಲಯ ಏನನ್ನು ಹೇಳಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಡಾ.ವಿ.ಪಿ ನಿರಂಜನಾರಾದ್ಯ, ಬಸವರಾಜ ಸೂಳಿಭಾವಿ, ಡಾ. ವಸುಂದರ ಭೂಪತಿ, ಬಿ.ಸುರೇಶ, ಡಾ. ಸಬೀಹಾ ಭೂಮಿಗೌಡ, ಮೂಡ್ನಕೂಡ ಚಿನ್ನಸ್ವಾಮಿ, ಕ.ಮ ರವಿಶಂಕರ, ಲಕ್ಷ್ಮಣ ಕೊಡಸೆ, ಡಾ.ಜಯಲಕ್ಷ್ಮಿ ಹೆಚ್‌.ಜಿ, ಡಾ.ಮಂಜುನಾಥ್ ಬಿಆರ್, ಡಾ.ತುಕರಾಮ, ಶ್ರೀಪಾದ ಭಟ್ಟ, ಪೂಜಾ ಸಿಂಗೆ, ಪ್ರಕಾಶ ಬಿ, ಮುತ್ತು ಬಿಳಿಯಲಿ, ಜಿ.ಎಂ ವೀರಸಂಗಯ್ಯ, ಬಸವರಾಜ ಬ್ಯಾಗವಾಟ, ಎಸ್‌.ಸತ್ಯ, ವಿಶುಕುಮಾರ, ಅನಿಲ ಹೊಸಮನಿ, ಪ್ರಶಾಂತ್ ಹೊಸಪೇಟೆ, ಕರಿಬಸಪ್ಪ ಎಂ ಸೇರಿದಂತೆ ನಾಡಿನ ಪ್ರಗತಿಪರ ಚಿಂತಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಪೌರಕಾರ್ಮಿಕ ಮಹಿಳೆಯರ ಮೇಲೆ ಹಲ್ಲೆ, ಜಾತಿ ನಿಂದನೆ ಪ್ರಕರಣ : ಆರೋಪಿಯ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...