Homeಮುಖಪುಟಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

- Advertisement -
- Advertisement -

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಆದೇಶವನ್ನು ಓದದೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನನ್ನು ರದ್ದುಗೊಳಿಸಿದ್ದ ರೀತಿಯ ಕುರಿತು ದೆಹಲಿ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ 150 ವಕೀಲರ ನಿಯೋಗವು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದೆ.

ದಿ ಹಿಂದೂ ವರದಿಯ ಪ್ರಕಾರ, ಜಾಮೀನು ಆದೇಶಕ್ಕೆ ತಡೆ ನೀಡಿರುವ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರ ಸಹೋದರ ಜಾರಿ ನಿರ್ದೇಶನಾಲಯದ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಕೀಲರು ಪತ್ರದಲ್ಲಿ ಹೇಳಿದ್ದಾರೆ.

ಇದು ಆಪಾದಿತ ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಖಲಿಸಿರುವ ಪ್ರಕರಣವಾಗಿದ್ದು, ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ಆರ್ಥಿಕ ಅಪರಾಧಗಳ ಸಂಸ್ಥೆಯಾದ ಇಡಿ ಕೇಜ್ರಿವಾಲ್ ಅವರನ್ನು ಈ ವರ್ಷದ ಮಾರ್ಚ್‌ನಲ್ಲಿ ಬಂಧಿಸಿತ್ತು. ಕಳೆದ ತಿಂಗಳ ಕೊನೆಯಲ್ಲಿ, ಕೇಜ್ರಿವಾಲ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜಾಮೀನು ನೀಡಿತ್ತು. ಈ ಬೆನ್ನಲ್ಲೇ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕೇಜ್ರಿವಾಲ್ ಅವರನ್ನು ಬಂಧಿಸಿದೆ.

ಜೂ.20ರಂದು ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ್ದ ವಿಚಾರಣಾ ನ್ಯಾಯಾಲಯವು, ಇಡಿ ಕೇಜ್ರಿವಾಲ್ ವಿರುದ್ಧ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಹೇಳಿತ್ತು. ಇಡಿ ಮುಖ್ಯಮಂತ್ರಿಗಳ ಬಂಧನಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಎಂದು ನ್ಯಾ. ನ್ಯಾಯ ಬಿಂದು ಹೇಳಿದ್ದರು.

ವಕೀಲರ ಪತ್ರವು ಸ್ಪಷ್ಟ ‘ಹಿತಾಸಕ್ತಿ ಸಂಘರ್ಷ’ವನ್ನು ಎತ್ತಿ ತೋರಿಸಿದೆ. ನ್ಯಾ.ಜೈನ್ ಅವರ ಖಾಸಾ ಸೋದರ ಇಡಿ ವಕೀಲರಾಗಿರುವುದರಿಂದ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯಬೇಕಾಗಿತ್ತು. ಈ ಸ್ಪಷ್ಟ ಹಿತಾಸಕ್ತಿ ಸಂಘರ್ಷವನ್ನು ನ್ಯಾ.ಜೈನ್ ಎಂದಿಗೂ ಘೋಷಿಸಿರಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಪರೂಪದ ಬೆಳವಣಿಗೆಯಲ್ಲಿ” ಜಾಮೀನು ಆದೇಶವು ಅಧಿಕೃತವಾಗಿ ಅಪ್ಲೋಡ್ ಆಗುವ ಮುನ್ನವೇ ನ್ಯಾ.ಜೈನ್ ಅವರು ಕೇಜ್ರಿವಾಲ್‌ರ ಜಾಮೀನನ್ನು ಪ್ರಶ್ನಿಸಲು ಇಡಿ ವಕೀಲರಿಗೆ ಅನುಮತಿ ನೀಡಿದ್ದರು ಮತ್ತು ಜಾಮೀನು ಆದೇಶಕ್ಕೆ ತಡೆ ವಿಧಿಸಿದ್ದರು. ಈ ರೀತಿ ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿ ಹಿಂದೆಂದೂ ನಡೆದಿರಲಿಲ್ಲ ಎಂದು ವಕೀಲರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷದ ಮುಖ್ಯ ವಕೀಲ ಸಂಜೀವ ನಸಿಯಾರ್ ಅವರೂ ಭಾಗವಾಗಿರುವ ವಕೀಲರ ನಿಯೋಗವು, ಅಂತಿಮ ಆದೇಶಗಳನ್ನು ಹೊರಡಿಸದಂತೆ ಮತ್ತು ರಜೆಯ ಬಳಿಕ ನಿಯಮಿತ ನ್ಯಾಯಾಲಯಗಳಿಗೆ ನೋಟಿಸ್‌ಗಳನ್ನು ಮಾತ್ರ ನೀಡುವಂತೆ ರೋಸ್ ಅವೆನ್ಯೂ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಬೇಸಿಗೆ ವಿರಾಮದಲ್ಲಿ ಕಾರ್ಯ ನಿರ್ವಹಿಸುವ ರಜಾಕಾಲದ ನ್ಯಾಯಾಲಯಗಳಿಗೆ ಹೊರಡಿಸಿದ್ದ ಆಂತರಿಕ ಆಡಳಿತಾತ್ಮಕ ಆದೇಶವನ್ನೂ ಎತ್ತಿ ತೋರಿಸಿದೆ.

ಈ ಕ್ರಮವು ರಜಾಕಾಲದ ನ್ಯಾಯಾಲಯಗಳ ಉದ್ದೇಶವನ್ನು ಕಡೆಗಣಿಸಿದೆ ಮತ್ತು ಇಂತಹ ಆದೇಶದ ವಿರುದ್ಧ ಬಲವಾದ ಆಕ್ಷೇಪವನ್ನು ಸಲ್ಲಿಸಲು ಬಯಸಿದ್ದೇವೆ ಎಂದೂ ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಜಾಮೀನು ಅರ್ಜಿಗೆ ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...