Homeಮುಖಪುಟನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ.

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಅಯೋಧ್ಯೆಯ ವಿವಾದದ ತೀರ್ಪನ್ನು ಟೀಕಿಸಿದ್ದಕ್ಕಾಗಿ ನಟಿ ಸ್ವರಾ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿ ಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದಾರೆ.

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ ಎಂದು ವೇಣುಗೋಪಾಲ್ ತಮ್ಮ ಅರ್ಜಿದಾರರಿಗೆ ಬರೆದ ಪತ್ರದಲ್ಲಿ ಉಷಾ ಶೆಟ್ಟಿಯ ವಿನಂತಿಯನ್ನು ಉಲ್ಲೇಖಿಸಿ ನಿರಾಕರಿಸಿದ್ದಾರೆ.

ಈ ಹೇಳಿಕೆಯು ಸುಪ್ರೀಂ ಕೋರ್ಟಿನ ತೀರ್ಪನ್ನು ಸೂಚಿಸುತ್ತದೆ. ಹಾಗಾಗಿ ಇದು ಆ ಸಂಸ್ಥೆಯ ಮೇಲಿನ ಆಕ್ರಮಣವಲ್ಲ. ಇದು ಸುಪ್ರೀಂ ಕೋರ್ಟ್‌ನ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಅಥವಾ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನಿಂದಿಸುವ, ಕಡಿಮೆ ಮಾಡುವ ಯಾವುದನ್ನೂ ಹೇಳುವುದಿಲ್ಲ. ನನ್ನ ಅಭಿಪ್ರಾಯದಲ್ಲಿ, ಈ ಹೇಳಿಕೆಯು ನ್ಯಾಯಾಂಗ ನಿಂದನೆಯನ್ನು ಹೊಂದಿಲ್ಲ ಎಂದು ಎಜಿಯ ಪತ್ರದಲ್ಲಿ ತಿಳಿಸಲಾಗಿದೆ.

ಮಾಜಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ನೀಡಿದ ಅಯೋಧ್ಯೆ ವಿವಾದದಲ್ಲಿ ನವೆಂಬರ್ 9 ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪು 2.77 ಎಕರೆ ವಿವಾದಿತ ಸ್ಥಳವನ್ನು ರಾಮ್ ಲಲ್ಲಾ ವಿರಾಜ್ಮಾನ್ ಅವರಿಗೆ ನೀಡಿತ್ತು. ಹೊಸ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದು ನ್ಯಾಯಪೀಠ ಆದೇಶಿಸಿತ್ತು.

ವಿವಾದಾತ್ಮಕ ಸ್ಥಳದಲ್ಲಿ ಮಸೀದಿಯ ಅಸ್ತಿತ್ವವನ್ನು ಉನ್ನತ ನ್ಯಾಯಾಲಯವು ಖಾತ್ರಿಪಡಿಸಿ ಒಪ್ಪಿಕೊಂಡಿತ್ತು. 1949 ರಲ್ಲಿ ಮಸೀದಿಯೊಳಗೆ ವಿಗ್ರಹಗಳನ್ನು ಇಟ್ಟು, 1992 ರಲ್ಲಿ ಮಸೀದಿಯ ಧ್ವಂಸದಲ್ಲಿ ಹಿಂದೂಗಳು ಕಾನೂನುಬಾಹಿರ ಕೃತ್ಯ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದರು.

ಆಗಸ್ಟ್ 17 ರಂದು ಉಷಾ ಶೆಟ್ಟಿ ಸಲ್ಲಿಸಿದ್ದ ಸ್ವರ ಭಾಸ್ಕರ್ ವಿರುದ್ಧದ ಅರ್ಜಿಯನ್ನು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಒಪ್ಪಿಗೆಗಾಗಿ ಎಜಿ ಮುಂದೆ ಇಡಲಾಯಿತು.

ನ್ಯಾಯಾಲಯಗಳ ನಿಂದನೆ ಕಾಯ್ದೆಯ ಸೆಕ್ಷನ್ 15 ಮತ್ತು ಸುಪ್ರೀಂ ಕೋರ್ಟ್‌ನ ಅವಹೇಳನಕ್ಕಾಗಿ ಕ್ರಮಗಳನ್ನು ನಿಯಂತ್ರಿಸುವ ನಿಯಮ 3 ರ ಪ್ರಕಾರ, ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ತಿರಸ್ಕಾರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಎಜಿ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಪಡೆಯುವ ಅಗತ್ಯವಿದೆ.

2020 ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ಅವರ ಹೇಳಿಕೆಗಳು “ಅಗ್ಗದ ಪ್ರಚಾರಕ್ಕಾಗಿ ಮಾಡುವ ಸಾಹಸವಾಗಿದ್ದು” ಮಾತ್ರವಲ್ಲ, ಸುಪ್ರೀಂ ಕೋರ್ಟ್ ವಿರುದ್ಧ ದಂಗೆ ಎಬ್ಬಿಸುವ ಉದ್ದೇಶಪೂರ್ವಕ ಪ್ರಯತ್ನವೂ ಆಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

“ಆಪಾದಿತ ಸಮಕಾಲೀನ ಹೇಳಿಕೆಗಳು ಗೌರವಾನ್ವಿತ ನ್ಯಾಯಾಲಯದ ವಿಚಾರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅಪನಂಬಿಕೆಯ ಭಾವನೆ ಮತ್ತು ಭಾರತದ ಸುಪ್ರೀಂ ಕೋರ್ಟಿನ ಗೌರವಾನ್ವಿತ ನ್ಯಾಯಾಧೀಶರ ಸಮಗ್ರತೆಗೆ ಪ್ರಚೋದನೆ ನೀಡಲು ಉದ್ದೇಶಿಸಿದೆ” ಎಂದು ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಉಷಾ ಶೆಟ್ಟಿ ಪರವಾಗಿ ವಕೀಲರಾದ ಅನುಜ್ ಸಕ್ಸೇನಾ, ಪ್ರಕಾಶ್ ಶರ್ಮಾ ಮತ್ತು ಮಹೇಕ್ ಮಹೇಶ್ವರಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಎಜಿ ಅನುಮತಿ ನಿರಾಕರಿಸಿದ ನಂತರ, ಶೆಟ್ಟಿ ’ವಕೀಲರು ಭಾನುವಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಒಪ್ಪಿಗೆ ಕೋರಿ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ನಟಿ ಸ್ವರ ಭಾಸ್ಕರ್ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸಲು ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...