Homeಮುಖಪುಟನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನ್ಯಾಯಾಂಗ ನಿಂದನೆ: ಸ್ವರ ಭಾಸ್ಕರ್ ವಿರುದ್ಧದ‌ ವಿಚಾರಣೆ ಅರ್ಜಿ ತಿರಸ್ಕಾರ!

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ.

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಅಯೋಧ್ಯೆಯ ವಿವಾದದ ತೀರ್ಪನ್ನು ಟೀಕಿಸಿದ್ದಕ್ಕಾಗಿ ನಟಿ ಸ್ವರಾ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿ ಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದಾರೆ.

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ ಎಂದು ವೇಣುಗೋಪಾಲ್ ತಮ್ಮ ಅರ್ಜಿದಾರರಿಗೆ ಬರೆದ ಪತ್ರದಲ್ಲಿ ಉಷಾ ಶೆಟ್ಟಿಯ ವಿನಂತಿಯನ್ನು ಉಲ್ಲೇಖಿಸಿ ನಿರಾಕರಿಸಿದ್ದಾರೆ.

ಈ ಹೇಳಿಕೆಯು ಸುಪ್ರೀಂ ಕೋರ್ಟಿನ ತೀರ್ಪನ್ನು ಸೂಚಿಸುತ್ತದೆ. ಹಾಗಾಗಿ ಇದು ಆ ಸಂಸ್ಥೆಯ ಮೇಲಿನ ಆಕ್ರಮಣವಲ್ಲ. ಇದು ಸುಪ್ರೀಂ ಕೋರ್ಟ್‌ನ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಅಥವಾ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನಿಂದಿಸುವ, ಕಡಿಮೆ ಮಾಡುವ ಯಾವುದನ್ನೂ ಹೇಳುವುದಿಲ್ಲ. ನನ್ನ ಅಭಿಪ್ರಾಯದಲ್ಲಿ, ಈ ಹೇಳಿಕೆಯು ನ್ಯಾಯಾಂಗ ನಿಂದನೆಯನ್ನು ಹೊಂದಿಲ್ಲ ಎಂದು ಎಜಿಯ ಪತ್ರದಲ್ಲಿ ತಿಳಿಸಲಾಗಿದೆ.

ಮಾಜಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ನೀಡಿದ ಅಯೋಧ್ಯೆ ವಿವಾದದಲ್ಲಿ ನವೆಂಬರ್ 9 ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪು 2.77 ಎಕರೆ ವಿವಾದಿತ ಸ್ಥಳವನ್ನು ರಾಮ್ ಲಲ್ಲಾ ವಿರಾಜ್ಮಾನ್ ಅವರಿಗೆ ನೀಡಿತ್ತು. ಹೊಸ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದು ನ್ಯಾಯಪೀಠ ಆದೇಶಿಸಿತ್ತು.

ವಿವಾದಾತ್ಮಕ ಸ್ಥಳದಲ್ಲಿ ಮಸೀದಿಯ ಅಸ್ತಿತ್ವವನ್ನು ಉನ್ನತ ನ್ಯಾಯಾಲಯವು ಖಾತ್ರಿಪಡಿಸಿ ಒಪ್ಪಿಕೊಂಡಿತ್ತು. 1949 ರಲ್ಲಿ ಮಸೀದಿಯೊಳಗೆ ವಿಗ್ರಹಗಳನ್ನು ಇಟ್ಟು, 1992 ರಲ್ಲಿ ಮಸೀದಿಯ ಧ್ವಂಸದಲ್ಲಿ ಹಿಂದೂಗಳು ಕಾನೂನುಬಾಹಿರ ಕೃತ್ಯ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದರು.

ಆಗಸ್ಟ್ 17 ರಂದು ಉಷಾ ಶೆಟ್ಟಿ ಸಲ್ಲಿಸಿದ್ದ ಸ್ವರ ಭಾಸ್ಕರ್ ವಿರುದ್ಧದ ಅರ್ಜಿಯನ್ನು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಒಪ್ಪಿಗೆಗಾಗಿ ಎಜಿ ಮುಂದೆ ಇಡಲಾಯಿತು.

ನ್ಯಾಯಾಲಯಗಳ ನಿಂದನೆ ಕಾಯ್ದೆಯ ಸೆಕ್ಷನ್ 15 ಮತ್ತು ಸುಪ್ರೀಂ ಕೋರ್ಟ್‌ನ ಅವಹೇಳನಕ್ಕಾಗಿ ಕ್ರಮಗಳನ್ನು ನಿಯಂತ್ರಿಸುವ ನಿಯಮ 3 ರ ಪ್ರಕಾರ, ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ತಿರಸ್ಕಾರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಎಜಿ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಪಡೆಯುವ ಅಗತ್ಯವಿದೆ.

2020 ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ಅವರ ಹೇಳಿಕೆಗಳು “ಅಗ್ಗದ ಪ್ರಚಾರಕ್ಕಾಗಿ ಮಾಡುವ ಸಾಹಸವಾಗಿದ್ದು” ಮಾತ್ರವಲ್ಲ, ಸುಪ್ರೀಂ ಕೋರ್ಟ್ ವಿರುದ್ಧ ದಂಗೆ ಎಬ್ಬಿಸುವ ಉದ್ದೇಶಪೂರ್ವಕ ಪ್ರಯತ್ನವೂ ಆಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

“ಆಪಾದಿತ ಸಮಕಾಲೀನ ಹೇಳಿಕೆಗಳು ಗೌರವಾನ್ವಿತ ನ್ಯಾಯಾಲಯದ ವಿಚಾರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅಪನಂಬಿಕೆಯ ಭಾವನೆ ಮತ್ತು ಭಾರತದ ಸುಪ್ರೀಂ ಕೋರ್ಟಿನ ಗೌರವಾನ್ವಿತ ನ್ಯಾಯಾಧೀಶರ ಸಮಗ್ರತೆಗೆ ಪ್ರಚೋದನೆ ನೀಡಲು ಉದ್ದೇಶಿಸಿದೆ” ಎಂದು ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಉಷಾ ಶೆಟ್ಟಿ ಪರವಾಗಿ ವಕೀಲರಾದ ಅನುಜ್ ಸಕ್ಸೇನಾ, ಪ್ರಕಾಶ್ ಶರ್ಮಾ ಮತ್ತು ಮಹೇಕ್ ಮಹೇಶ್ವರಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಎಜಿ ಅನುಮತಿ ನಿರಾಕರಿಸಿದ ನಂತರ, ಶೆಟ್ಟಿ ’ವಕೀಲರು ಭಾನುವಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಒಪ್ಪಿಗೆ ಕೋರಿ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ನಟಿ ಸ್ವರ ಭಾಸ್ಕರ್ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸಲು ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...