Homeಮುಖಪುಟನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

- Advertisement -
- Advertisement -

ನಟಿ ಸ್ವರ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಅನುಮತಿ ನೀಡಬೇಕೆಂಬ ಅರ್ಜಿಯನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರು ಸಹ ತಿರಸ್ಕರಿಸಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಟೀಕಿಸುವ ಮತ್ತು ಸರ್ಕಾರವನ್ನು ಖಂಡಿಸುವ ಹೇಳಿಕೆ ನೀಡಿದ್ದಕ್ಕಾಗಿ ಸ್ವರ ವಿರುದ್ಧ ವಿಚಾರಣೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

2020ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸ್ವರ “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ ಎಂದು ವೇಣುಗೋಪಾಲ್ ತಮ್ಮ ಅರ್ಜಿದಾರೆ  ಉಷಾ ಶೆಟ್ಟಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಈ ಹೇಳಿಕೆಯು ಸುಪ್ರೀಂ ಕೋರ್ಟಿನ ತೀರ್ಪನ್ನು ಸೂಚಿಸುತ್ತದೆ. ಹಾಗಾಗಿ ಇದು ಆ ಸಂಸ್ಥೆಯ ಮೇಲಿನ ಆಕ್ರಮಣವಲ್ಲ. ಇದು ಸುಪ್ರೀಂ ಕೋರ್ಟ್‌ನ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಅಥವಾ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನಿಂದಿಸುವ, ಕಡಿಮೆ ಮಾಡುವ ಯಾವುದನ್ನೂ ಹೇಳುವುದಿಲ್ಲ. ನನ್ನ ಅಭಿಪ್ರಾಯದಲ್ಲಿ, ಈ ಹೇಳಿಕೆಯು ನ್ಯಾಯಾಂಗ ನಿಂದನೆಯನ್ನು ಹೊಂದಿಲ್ಲ ಎಂದು ವೇಣುಗೋಪಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದರು.


Also Read: Swara Bhasker helps migrant workers reach home


ಈಗ ಮತ್ತೋರ್ವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಇದೇ ಕಾರಣವನ್ನು ನೀಡಿ, ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ನ್ಯಾಯಾಲಯಗಳ ನಿಂದನೆ ಕಾಯ್ದೆಯ ಸೆಕ್ಷನ್ 15 ಮತ್ತು ಸುಪ್ರೀಂ ಕೋರ್ಟ್‌ನ ಅವಹೇಳನಕ್ಕಾಗಿ ಕ್ರಮಗಳನ್ನು ನಿಯಂತ್ರಿಸುವ ನಿಯಮ 3 ರ ಪ್ರಕಾರ, ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ತಿರಸ್ಕಾರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಎಜಿ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಮಾಜಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ನೀಡಿದ ಅಯೋಧ್ಯೆ ವಿವಾದದಲ್ಲಿ ನವೆಂಬರ್ 9 ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪು 2.77 ಎಕರೆ ವಿವಾದಿತ ಸ್ಥಳವನ್ನು ರಾಮ್ ಲಲ್ಲಾ ವಿರಾಜ್ಮಾನ್ ಅವರಿಗೆ ನೀಡಿತ್ತು. ಹೊಸ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿತ್ತು.

ವಿವಾದಾತ್ಮಕ ಸ್ಥಳದಲ್ಲಿ ಮಸೀದಿಯ ಅಸ್ತಿತ್ವವನ್ನು ಉನ್ನತ ನ್ಯಾಯಾಲಯವು ಖಾತ್ರಿಪಡಿಸಿ ಒಪ್ಪಿಕೊಂಡಿತ್ತು. 1949 ರಲ್ಲಿ ಮಸೀದಿಯೊಳಗೆ ವಿಗ್ರಹಗಳನ್ನು ಇಟ್ಟು, 1992 ರಲ್ಲಿ ಮಸೀದಿಯ ಧ್ವಂಸವು ಕಾನೂನುಬಾಹಿರ ಕೃತ್ಯ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿತ್ತು.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...