Homeಮುಖಪುಟನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

- Advertisement -
- Advertisement -

ನಟಿ ಸ್ವರ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಅನುಮತಿ ನೀಡಬೇಕೆಂಬ ಅರ್ಜಿಯನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರು ಸಹ ತಿರಸ್ಕರಿಸಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಟೀಕಿಸುವ ಮತ್ತು ಸರ್ಕಾರವನ್ನು ಖಂಡಿಸುವ ಹೇಳಿಕೆ ನೀಡಿದ್ದಕ್ಕಾಗಿ ಸ್ವರ ವಿರುದ್ಧ ವಿಚಾರಣೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

2020ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸ್ವರ “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ ಎಂದು ವೇಣುಗೋಪಾಲ್ ತಮ್ಮ ಅರ್ಜಿದಾರೆ  ಉಷಾ ಶೆಟ್ಟಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಈ ಹೇಳಿಕೆಯು ಸುಪ್ರೀಂ ಕೋರ್ಟಿನ ತೀರ್ಪನ್ನು ಸೂಚಿಸುತ್ತದೆ. ಹಾಗಾಗಿ ಇದು ಆ ಸಂಸ್ಥೆಯ ಮೇಲಿನ ಆಕ್ರಮಣವಲ್ಲ. ಇದು ಸುಪ್ರೀಂ ಕೋರ್ಟ್‌ನ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಅಥವಾ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನಿಂದಿಸುವ, ಕಡಿಮೆ ಮಾಡುವ ಯಾವುದನ್ನೂ ಹೇಳುವುದಿಲ್ಲ. ನನ್ನ ಅಭಿಪ್ರಾಯದಲ್ಲಿ, ಈ ಹೇಳಿಕೆಯು ನ್ಯಾಯಾಂಗ ನಿಂದನೆಯನ್ನು ಹೊಂದಿಲ್ಲ ಎಂದು ವೇಣುಗೋಪಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದರು.


Also Read: Swara Bhasker helps migrant workers reach home


ಈಗ ಮತ್ತೋರ್ವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಇದೇ ಕಾರಣವನ್ನು ನೀಡಿ, ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ನ್ಯಾಯಾಲಯಗಳ ನಿಂದನೆ ಕಾಯ್ದೆಯ ಸೆಕ್ಷನ್ 15 ಮತ್ತು ಸುಪ್ರೀಂ ಕೋರ್ಟ್‌ನ ಅವಹೇಳನಕ್ಕಾಗಿ ಕ್ರಮಗಳನ್ನು ನಿಯಂತ್ರಿಸುವ ನಿಯಮ 3 ರ ಪ್ರಕಾರ, ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ತಿರಸ್ಕಾರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಎಜಿ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಮಾಜಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ನೀಡಿದ ಅಯೋಧ್ಯೆ ವಿವಾದದಲ್ಲಿ ನವೆಂಬರ್ 9 ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪು 2.77 ಎಕರೆ ವಿವಾದಿತ ಸ್ಥಳವನ್ನು ರಾಮ್ ಲಲ್ಲಾ ವಿರಾಜ್ಮಾನ್ ಅವರಿಗೆ ನೀಡಿತ್ತು. ಹೊಸ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿತ್ತು.

ವಿವಾದಾತ್ಮಕ ಸ್ಥಳದಲ್ಲಿ ಮಸೀದಿಯ ಅಸ್ತಿತ್ವವನ್ನು ಉನ್ನತ ನ್ಯಾಯಾಲಯವು ಖಾತ್ರಿಪಡಿಸಿ ಒಪ್ಪಿಕೊಂಡಿತ್ತು. 1949 ರಲ್ಲಿ ಮಸೀದಿಯೊಳಗೆ ವಿಗ್ರಹಗಳನ್ನು ಇಟ್ಟು, 1992 ರಲ್ಲಿ ಮಸೀದಿಯ ಧ್ವಂಸವು ಕಾನೂನುಬಾಹಿರ ಕೃತ್ಯ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿತ್ತು.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...