Homeಮುಖಪುಟನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

- Advertisement -
- Advertisement -

ನಟಿ ಸ್ವರ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಅನುಮತಿ ನೀಡಬೇಕೆಂಬ ಅರ್ಜಿಯನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರು ಸಹ ತಿರಸ್ಕರಿಸಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಟೀಕಿಸುವ ಮತ್ತು ಸರ್ಕಾರವನ್ನು ಖಂಡಿಸುವ ಹೇಳಿಕೆ ನೀಡಿದ್ದಕ್ಕಾಗಿ ಸ್ವರ ವಿರುದ್ಧ ವಿಚಾರಣೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

2020ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸ್ವರ “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ ಎಂದು ವೇಣುಗೋಪಾಲ್ ತಮ್ಮ ಅರ್ಜಿದಾರೆ  ಉಷಾ ಶೆಟ್ಟಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಈ ಹೇಳಿಕೆಯು ಸುಪ್ರೀಂ ಕೋರ್ಟಿನ ತೀರ್ಪನ್ನು ಸೂಚಿಸುತ್ತದೆ. ಹಾಗಾಗಿ ಇದು ಆ ಸಂಸ್ಥೆಯ ಮೇಲಿನ ಆಕ್ರಮಣವಲ್ಲ. ಇದು ಸುಪ್ರೀಂ ಕೋರ್ಟ್‌ನ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಅಥವಾ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನಿಂದಿಸುವ, ಕಡಿಮೆ ಮಾಡುವ ಯಾವುದನ್ನೂ ಹೇಳುವುದಿಲ್ಲ. ನನ್ನ ಅಭಿಪ್ರಾಯದಲ್ಲಿ, ಈ ಹೇಳಿಕೆಯು ನ್ಯಾಯಾಂಗ ನಿಂದನೆಯನ್ನು ಹೊಂದಿಲ್ಲ ಎಂದು ವೇಣುಗೋಪಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದರು.


Also Read: Swara Bhasker helps migrant workers reach home


ಈಗ ಮತ್ತೋರ್ವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಇದೇ ಕಾರಣವನ್ನು ನೀಡಿ, ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ನ್ಯಾಯಾಲಯಗಳ ನಿಂದನೆ ಕಾಯ್ದೆಯ ಸೆಕ್ಷನ್ 15 ಮತ್ತು ಸುಪ್ರೀಂ ಕೋರ್ಟ್‌ನ ಅವಹೇಳನಕ್ಕಾಗಿ ಕ್ರಮಗಳನ್ನು ನಿಯಂತ್ರಿಸುವ ನಿಯಮ 3 ರ ಪ್ರಕಾರ, ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ತಿರಸ್ಕಾರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಎಜಿ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಮಾಜಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ನೀಡಿದ ಅಯೋಧ್ಯೆ ವಿವಾದದಲ್ಲಿ ನವೆಂಬರ್ 9 ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪು 2.77 ಎಕರೆ ವಿವಾದಿತ ಸ್ಥಳವನ್ನು ರಾಮ್ ಲಲ್ಲಾ ವಿರಾಜ್ಮಾನ್ ಅವರಿಗೆ ನೀಡಿತ್ತು. ಹೊಸ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿತ್ತು.

ವಿವಾದಾತ್ಮಕ ಸ್ಥಳದಲ್ಲಿ ಮಸೀದಿಯ ಅಸ್ತಿತ್ವವನ್ನು ಉನ್ನತ ನ್ಯಾಯಾಲಯವು ಖಾತ್ರಿಪಡಿಸಿ ಒಪ್ಪಿಕೊಂಡಿತ್ತು. 1949 ರಲ್ಲಿ ಮಸೀದಿಯೊಳಗೆ ವಿಗ್ರಹಗಳನ್ನು ಇಟ್ಟು, 1992 ರಲ್ಲಿ ಮಸೀದಿಯ ಧ್ವಂಸವು ಕಾನೂನುಬಾಹಿರ ಕೃತ್ಯ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿತ್ತು.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...