Homeಮುಖಪುಟನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

- Advertisement -
- Advertisement -

ನಟಿ ಸ್ವರ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಅನುಮತಿ ನೀಡಬೇಕೆಂಬ ಅರ್ಜಿಯನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರು ಸಹ ತಿರಸ್ಕರಿಸಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಟೀಕಿಸುವ ಮತ್ತು ಸರ್ಕಾರವನ್ನು ಖಂಡಿಸುವ ಹೇಳಿಕೆ ನೀಡಿದ್ದಕ್ಕಾಗಿ ಸ್ವರ ವಿರುದ್ಧ ವಿಚಾರಣೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

2020ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸ್ವರ “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ ಎಂದು ವೇಣುಗೋಪಾಲ್ ತಮ್ಮ ಅರ್ಜಿದಾರೆ  ಉಷಾ ಶೆಟ್ಟಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಈ ಹೇಳಿಕೆಯು ಸುಪ್ರೀಂ ಕೋರ್ಟಿನ ತೀರ್ಪನ್ನು ಸೂಚಿಸುತ್ತದೆ. ಹಾಗಾಗಿ ಇದು ಆ ಸಂಸ್ಥೆಯ ಮೇಲಿನ ಆಕ್ರಮಣವಲ್ಲ. ಇದು ಸುಪ್ರೀಂ ಕೋರ್ಟ್‌ನ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಅಥವಾ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನಿಂದಿಸುವ, ಕಡಿಮೆ ಮಾಡುವ ಯಾವುದನ್ನೂ ಹೇಳುವುದಿಲ್ಲ. ನನ್ನ ಅಭಿಪ್ರಾಯದಲ್ಲಿ, ಈ ಹೇಳಿಕೆಯು ನ್ಯಾಯಾಂಗ ನಿಂದನೆಯನ್ನು ಹೊಂದಿಲ್ಲ ಎಂದು ವೇಣುಗೋಪಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದರು.


Also Read: Swara Bhasker helps migrant workers reach home


ಈಗ ಮತ್ತೋರ್ವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಇದೇ ಕಾರಣವನ್ನು ನೀಡಿ, ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ನ್ಯಾಯಾಲಯಗಳ ನಿಂದನೆ ಕಾಯ್ದೆಯ ಸೆಕ್ಷನ್ 15 ಮತ್ತು ಸುಪ್ರೀಂ ಕೋರ್ಟ್‌ನ ಅವಹೇಳನಕ್ಕಾಗಿ ಕ್ರಮಗಳನ್ನು ನಿಯಂತ್ರಿಸುವ ನಿಯಮ 3 ರ ಪ್ರಕಾರ, ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ತಿರಸ್ಕಾರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಎಜಿ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಮಾಜಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ನೀಡಿದ ಅಯೋಧ್ಯೆ ವಿವಾದದಲ್ಲಿ ನವೆಂಬರ್ 9 ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪು 2.77 ಎಕರೆ ವಿವಾದಿತ ಸ್ಥಳವನ್ನು ರಾಮ್ ಲಲ್ಲಾ ವಿರಾಜ್ಮಾನ್ ಅವರಿಗೆ ನೀಡಿತ್ತು. ಹೊಸ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿತ್ತು.

ವಿವಾದಾತ್ಮಕ ಸ್ಥಳದಲ್ಲಿ ಮಸೀದಿಯ ಅಸ್ತಿತ್ವವನ್ನು ಉನ್ನತ ನ್ಯಾಯಾಲಯವು ಖಾತ್ರಿಪಡಿಸಿ ಒಪ್ಪಿಕೊಂಡಿತ್ತು. 1949 ರಲ್ಲಿ ಮಸೀದಿಯೊಳಗೆ ವಿಗ್ರಹಗಳನ್ನು ಇಟ್ಟು, 1992 ರಲ್ಲಿ ಮಸೀದಿಯ ಧ್ವಂಸವು ಕಾನೂನುಬಾಹಿರ ಕೃತ್ಯ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿತ್ತು.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...