Homeಮುಖಪುಟನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ ಭಯೋತ್ಪಾದನೆಯಾಗಿ ಬದಲಾಗಬಾರದು: ಸಿಜೆಐ ಗವಾಯಿ

ನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ ಭಯೋತ್ಪಾದನೆಯಾಗಿ ಬದಲಾಗಬಾರದು: ಸಿಜೆಐ ಗವಾಯಿ

- Advertisement -
- Advertisement -

ನ್ಯಾಯಾಂಗ ಕಾರ್ಯಚಟುವಟಿಕೆ (ಆಕ್ವಿವಿಸಂ) ಮುಂದುವರಿಯಲೇಬೇಕು ಎಂದು ಒತ್ತಿ ಹೇಳಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, ಆದರೆ ಅದನ್ನು ನ್ಯಾಯಾಂಗ ಭಯೋತ್ಪಾದನೆಯಾಗಿ ಪರಿವರ್ತಿಸಬಾರದು ಎಂದು ಎಚ್ಚರಿಸಿದ್ದಾರೆ. ನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ

ನ್ಯಾಯಾಂಗ ಪರಿಶೀಲನೆಯ ಅಧಿಕಾರವನ್ನು ಮಿತವಾಗಿ ಬಳಸಬೇಕು ಮತ್ತು ಕಾನೂನುಗಳು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸಿದರೆ ಮಾತ್ರ ಅದನ್ನು ಬಳಸಬೇಕು ಎಂದು ಅವರು ಹೇಳಿದ್ದಾರೆ.

“ನ್ಯಾಯಾಂಗ ಕ್ರಿಯಾಶೀಲತೆ ಮುಂದುವರಿಯಲೇಬೇಕು. ಅದೇ ಸಮಯದಲ್ಲಿ, ನ್ಯಾಯಾಂಗ ಕ್ರಿಯಾಶೀಲತೆಯನ್ನು ನ್ಯಾಯಾಂಗ ಭಯೋತ್ಪಾದನೆಯಾಗಿ ಪರಿವರ್ತಿಸಬಾರದು. ಆದ್ದರಿಂದ, ಕೆಲವೊಮ್ಮೆ, ನೀವು ಮಿತಿ ಮೀರಲು ಪ್ರಯತ್ನಿಸುತ್ತೀರಿ ಮತ್ತು ಸಾಮಾನ್ಯವಾಗಿ ನ್ಯಾಯಾಂಗವು ಪ್ರವೇಶಿಸಬಾರದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತೀರಿ” ಎಂದು ಅವರು ಕಾನೂನು ಸುದ್ದಿ ಪೋರ್ಟಲ್‌ನ ಪ್ರಶ್ನೆಗೆ ಉತ್ತರಿಸಿದ್ದಾರೆ.

ಸಂವಿಧಾನವನ್ನು “ಶಾಯಿಯಲ್ಲಿ ಕೆತ್ತಿದ ಶಾಂತ ಕ್ರಾಂತಿ” ಮತ್ತು ಅದು ಹಕ್ಕುಗಳನ್ನು ಖಾತರಿಪಡಿಸುವುದು ಮಾತ್ರವಲ್ಲದೆ ಐತಿಹಾಸಿಕವಾಗಿ ತುಳಿತಕ್ಕೊಳಗಾದವರನ್ನು ಸಕ್ರಿಯವಾಗಿ ಮೇಲಕ್ಕೆತ್ತುವ ಪರಿವರ್ತಕ ಶಕ್ತಿ ಎಂದು ಗವಾಯಿ ಅವರು ಬಣ್ಣಿಸಿದ್ದಾರೆ.

ಮಂಗಳವಾರ ಲಂಡನ್‌ನ ಆಕ್ಸ್‌ಫರ್ಡ್ ಯೂನಿಯನ್‌ನಲ್ಲಿ ‘ಪ್ರಾತಿನಿಧ್ಯದಿಂದ ಸಾಕಾರಕ್ಕೆ: ಸಂವಿಧಾನದ ವಾಗ್ದಾನವನ್ನು ಸಾಕಾರಗೊಳಿಸುವುದು’ ಎಂಬ ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.

ಭಾರತದ ಅತ್ಯುನ್ನತ ನ್ಯಾಯಾಂಗ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ಮತ್ತು ಮೊದಲ ಬೌದ್ಧ ಅನುಯಾಯಿ ಆಗಿರುವ ಗವಾಯಿ ಅವರು, ತಳ ಸಮುದಾಯಗಳ ಮೇಲೆ ಸಂವಿಧಾನದ ಸಕಾರಾತ್ಮಕ ಪರಿಣಾಮವನ್ನು ಎತ್ತಿ ತೋರಿಸಿದ್ದು ಮತ್ತು ಈ ಅಂಶವನ್ನು ಒತ್ತಿ ಹೇಳಿದ್ದಾರೆ.

“ಹಲವು ದಶಕಗಳ ಹಿಂದೆ, ಭಾರತದ ಲಕ್ಷಾಂತರ ನಾಗರಿಕರನ್ನು ‘ಅಸ್ಪೃಶ್ಯರು’ ಎಂದು ಕರೆಯಲಾಗುತ್ತಿತ್ತು. ಅವರನ್ನು ಅಶುದ್ಧರು ಎಂದು ಹೇಳಲಾಗುತ್ತಿತ್ತು. ಅವರು ಸೇರಬಾರದು ಎಂದು ಅವರಿಗೆ ಹೇಳಲಾಗುತ್ತಿತ್ತು. ಅವರು ತಮಗಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಅವರಿಗೆ ಹೇಳಲಾಗುತ್ತಿತ್ತು.

ಆದರೆ ಇಂದು ನಾವು ಇಲ್ಲಿದ್ದೇವೆ, ಅದೇ ಜನರಿಗೆ ಸೇರಿದ ವ್ಯಕ್ತಿಯೊಬ್ಬ ದೇಶದ ನ್ಯಾಯಾಂಗದ ಅತ್ಯುನ್ನತ ಹುದ್ದೆಯನ್ನು ಹೊಂದಿರುವವರಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ನ್ಯಾಯಾಂಗ ಆಕ್ಟಿವಿಸಂ ನ್ಯಾಯಾಂಗ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ: 1 ಸಮೀಕ್ಷೆಗೆ 10 ವರ್ಷ ಅವಧಿ ಎಂದ ಸಿಎಂ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ: 1 ಸಮೀಕ್ಷೆಗೆ 10 ವರ್ಷ ಅವಧಿ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...