Homeಮುಖಪುಟಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!

ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!

ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ- ಗೊಗೊಯ್

- Advertisement -
- Advertisement -

“ನೀವು ಕುಸಿದಿರುವ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿದ್ದೀರಿ” ಎಂದು ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತದ ಸಿಜೆಐ ಆಗಿ ನಿವೃತ್ತಿಯಾದ 15 ತಿಂಗಳ ಬಳಿಕ ಗೊಗೋಯ್ ನೀಡಿರುವ ಈ ಹೇಳಿಕೆಯು ರಾಷ್ಟ್ರದ ಕಾನೂನು ವ್ಯವಸ್ಥೆಯ ವಾಸ್ತವಾಂಶವನ್ನು ತೆರೆದಿಟ್ಟಿದೆ.

“ನಾನು ಸಮಸ್ಯೆಗಳನ್ನು ಹೇಳಿಕೊಂಡು ನ್ಯಾಯಾಲಯಕ್ಕೆ ಹೋಗುವುದಿಲ್ಲ. ಏಕೆಂದರೆ ತೀರ್ಪಿಗಾಗಿ ಕೊನೆಯಿಲ್ಲದೆ ಕಾಯಬೇಕಾಗುತ್ತದೆ” ಎಂಬುದಾಗಿ ರಂಜನ್ ಗೊಗೊಯ್ ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ಗೊಗೋಯ್ ಅವರ ಹೇಳಿಕೆಯು ನ್ಯಾಯಾಂಗದ ಸಾಮರ್ಥ್ಯ ಹಾಗೂ ಪರಿಣಾಮಕಾರಿತ್ವವನ್ನು ಸೂಕ್ಷ್ಮ ಪರಿಶೀಲಿಸುವಂತೆ ಮಾಡಿದೆ. ತೀರ್ಪುಗಳ ವಿಳಂಬದಲ್ಲಿ ಭಾರತದ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಏಷ್ಯದ ಮೂರನೇ ಅತಿ ದೊಡ್ಡ ಆರ್ಥಿಕತೆಯ ನ್ಯಾಯಾಲಯದ ವ್ಯವಸ್ಥೆಗಳು 43 ದಶಲಕ್ಷಕ್ಕೂ ಅಧಿಕ ಪ್ರಕರಣಗಳಿಂದ ಮುಚ್ಚಿಹೋಗಿವೆ. ನ್ಯಾಯಾಧೀಶರ ಕೊರತೆಯಿಂದ ಕೆಲವು ಪ್ರಕರಣಗಳು ಪರಿಹಾರವನ್ನು ಕಂಡುಕೊಳ್ಳಲು ಹಲವು ವರ್ಷಗಳು, ದಶಕಗಳವರೆಗೆ ಕಾಯಬೇಕಾಗುತ್ತದೆ. ಭಾರತದಲ್ಲಿ ಹೂಡಿಕೆ ಮಾಡುವ ಕಂಪೆನಿಗಳು ಒಮ್ಮೆ ಕಾನೂನು ವಿವಾದದಲ್ಲಿ ಸಿಲುಕಿಕೊಂಡರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ದಿ ಪ್ರಿಂಟ್ ವರದಿಯಲ್ಲಿ ಹೇಳಿದೆ.

2019ರ ನವೆಂಬರ್ ನಲ್ಲಿ ದೇಶದ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿರುವ ಗೊಗೋಯ್ ಸದ್ಯ ಸಂಸತ್ತಿನ ಮೇಲ್ಮನೆಯ ಸದಸ್ಯರಾಗಿದ್ದಾರೆ. ಇದಕ್ಕೂ ಮುನ್ನ ಇವರು ದಶಕಗಳ ಅಯೋಧ್ಯೆ ವಿವಾದಕ್ಕೆ ಅಂತಿಮ ತೀರ್ಪು ನೀಡಿದ್ದರು.


ಇದನ್ನೂ ಓದಿ: ‘ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ’ – ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದ ದಿನೇಶ್ ತ್ರಿವೇದಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. After all thesevic throughout life did not bothered to do anything but after retirement and after taking help from the ruling govt and joining to the power speaking about judiciary he had no lockstandi to speak

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...