Homeರಾಜಕೀಯ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

- Advertisement -
- Advertisement -

‘ಜುಮ್ಲಾಜೀವಿ’, ‘ಬಾಲ್ ಬುದ್ಧಿ’, ‘ಕೋವಿಡ್ ಸ್ಪ್ರೆಡರ್’, ‘ಸ್ನೂಪ್‌ಗೇಟ್’, ‘ನಾಚಿಕೆಯಾಗಬೇಕು’, ‘ದುರುಪಯೋಗಪಡಿಸಿಕೊಂಡ’, ‘ದ್ರೋಹ’, ‘ಭ್ರಷ್ಟ’, ‘ನಾಟಕ’, ‘ಬೂಟಾಟಿಕೆ’ ಮತ್ತು ‘ಅಸಮರ್ಥ’ ಮೊದಲಾದ ದಿನನಿತ್ಯ ಬಳಸುವ ಅನೇಕ ಪದಗಳನ್ನು ಸೋಮವಾರದಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಬಳಸುವಂತಿಲ್ಲ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಹೇಳಿದೆ. ಸರ್ಕಾರವನ್ನು ವಿರೋಧಿಸಲು ಕಷ್ಟವಾಗುವಂತೆ ಲೋಕಸಭೆಯ ಸಚಿವಾಲಯವು ಉಭಯ ಸದನಗಳಿಗೆ ಅಸಂಸದೀಯ ಪದಗಳನ್ನು ಪಟ್ಟಿ ಮಾಡುವ ಹೊಸ ಕಿರುಪುಸ್ತಕವನ್ನು ಬಿಡುಗಡೆ ಮಾಡಿದೆ.

ಈ ಕಿರುಪುಸ್ತಕದಲ್ಲಿ, ‘ಅರಾಜಕತಾವಾದಿ’, ‘ಶಕುನಿ’, ‘ಸರ್ವಾಧಿಕಾರಿ’, ‘ಸರ್ವಾಧಿಕಾರ’, ‘ಜೈಚಂದ್’, ‘ವಿನಾಶ ಪುರುಷ’, ‘ಖಲಿಸ್ತಾನಿ’ ಮತ್ತು ‘ರಕ್ತದ ವ್ಯವಸಾಯ’ ಸೇರಿದಂತೆ ಹಲವು ಪದಗಳನ್ನು ಸದನದ ಚರ್ಚೆಯ ಸಮಯದಲ್ಲಿ ಅಥವಾ ಬೇರೆ ರೀತಿಯಲ್ಲಿ ಬಳಸಿದರೆ ಅದನ್ನು ತೆಗೆದುಹಾಕಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ದೋಹ್ರಾ ಚರಿತ್ರ’, ‘ನಿಕಮ್ಮ’, ‘ನೌಟಂಕಿ’, ‘ದಿಂಡೋರಾ ಪೀಟ್ನಾ’ ಮತ್ತು ‘ಬೆಹ್ರಿ ಸರ್ಕಾರ್’ ಪದಗಳನ್ನು ಕೂಡಾ ಬಳಸುವಂತಿಲ್ಲ.

ಅಸಂವಿಧಾನಿಕ ಪದಗಳ ಹೊಸ ಕಿರು ಪುಸ್ತಕ ಹೊರ ತಂದರೂ, ರಾಜ್ಯಸಭಾ ಮತ್ತು ಲೋಕಸಭಾ ಸ್ಪೀಕರ್‌ಗಳು ಈ ಪದಗಳನ್ನು ಕಡತದಿಂದ ತೆಗೆದುಹಾಕಬೇಕೆ ಅಥವಾ ಅದು ಇರಬಹುದೇ ಎಂಬ ಅಂತಿಮ ತೀರ್ಮಾವನ್ನು ತೆಗೆದುಕೊಳ್ಳಬುಹುದಾಗಿದೆ.

ಸರ್ಕಾರದ ಈ ನಿರ್ಧಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಅವರು ಇಂತಹ ಪದಗಳ ಬಳಕೆಯನ್ನು ಮುಂದುವರಿಸುವುದಾಗಿ ಹೇಳಿದ್ದು, ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಟಿಎಂಸಿಯ ಮತ್ತೊಬ್ಬ ಸಂಸದೆ ಮಹುವಾ ಮೊಯಿತ್ರಾ ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ, “ಅಂದರೆ ನಾನು ಲೋಕಸಭೆಯಲ್ಲಿ ಎದ್ದು ನಿಂತು, ಈ ಅಸಮರ್ಥ ಸರ್ಕಾರ ಭಾರತೀಯರಿಗೆ ಹೇಗೆ ದ್ರೋಹ ಬಗೆದಿದೆ ಎಂಬುದರ ಕುರಿತು ಮಾತನಾಡಲು ಸಾಧ್ಯವಿಲ್ಲವೆ. ನಿಮ್ಮ ಬೂಟಾಟಿಕೆಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ಅಸಂಸದೀಯ ಎಂದು ಪಟ್ಟಿ ಮಾಡಲಾದ ಕೆಲವು ಪದಗಳ ಪಟ್ಟಿ ಹೀಗಿದೆ

‘ರಕ್ತಪಾತ’, ‘ರಕ್ತಸಿಕ್ತ’, ‘ದ್ರೋಹ’, ‘ನಾಚಿಕೆ’, ‘ದುರುಪಯೋಗ’, ‘ಮೋಸ, ‘ಚಮಚಾ’, ‘ಚಮಚಾಗಿರಿ’, ‘ಚೇಲಾಗಳು’, ‘ಬಾಲಿಶ’, ‘ಭ್ರಷ್ಟ’, ‘ಹೇಡಿ’, ‘ಅಪರಾಧ’ ಮತ್ತು ‘ಮೊಸಳೆ ಕಣ್ಣೀರು’, ‘ಅವಮಾನ’, ‘ಕತ್ತೆ’, ‘ನಾಟಕ’, ‘ಕಣ್ಣೀರು ತೊಳೆಯುವುದು’, ‘ಮೀಠಿ’, ‘ಗೂಂಡಾಗಿರಿ’, ‘ಬೂಟಾಟಿಕೆ’, ‘ಅಸಮರ್ಥ’, ‘ತಪ್ಪುದಾರಿ’, ‘ಸುಳ್ಳು’, ‘ಸತ್ಯ’, ‘ಅರಾಜಕತಾವಾದಿ’, ‘ಗದ್ದರ್’, ‘ಗಿರ್ಗಿಟ್‌’, ‘ಗೂಂಡಾಗಳು’, ‘ಮೊಸಳೆ ಕಣ್ಣೀರು’, ‘ಅಪಮಾನ’, ‘ಅಸತ್ಯ’, ‘ಅಹಂಕಾರ’, ‘ಭ್ರಷ್ಟ’, ‘ಕಾಲಾ ದಿನ’, ‘ಕಾಲಾ ಬಜಾರಿ’, ‘ಖರೀದ್ ಫರೋಖ್ತ್ ‘, ‘ದಂಗಾ’, ‘ದಲಾಲ್’, ‘ದಾದಗಿರಿ’, ‘ದೋಹ್ರಾ ಚರಿತ್ರೆ’, ‘ಬೇಚಾರ’, ‘ಬಾಬ್‌ಕಟ್’, ‘ಲಾಲಿಪಾಪ್’, ‘ವಿಶ್ವಾಘಾತ’, ‘ಸಂವೇದನ ಹೀನ’,, ‘ಮೂರ್ಖ’, ಮತ್ತು ‘ಲೈಂಗಿಕ ಕಿರುಕುಳ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...