Homeರಾಜಕೀಯ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

- Advertisement -
- Advertisement -

‘ಜುಮ್ಲಾಜೀವಿ’, ‘ಬಾಲ್ ಬುದ್ಧಿ’, ‘ಕೋವಿಡ್ ಸ್ಪ್ರೆಡರ್’, ‘ಸ್ನೂಪ್‌ಗೇಟ್’, ‘ನಾಚಿಕೆಯಾಗಬೇಕು’, ‘ದುರುಪಯೋಗಪಡಿಸಿಕೊಂಡ’, ‘ದ್ರೋಹ’, ‘ಭ್ರಷ್ಟ’, ‘ನಾಟಕ’, ‘ಬೂಟಾಟಿಕೆ’ ಮತ್ತು ‘ಅಸಮರ್ಥ’ ಮೊದಲಾದ ದಿನನಿತ್ಯ ಬಳಸುವ ಅನೇಕ ಪದಗಳನ್ನು ಸೋಮವಾರದಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಬಳಸುವಂತಿಲ್ಲ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಹೇಳಿದೆ. ಸರ್ಕಾರವನ್ನು ವಿರೋಧಿಸಲು ಕಷ್ಟವಾಗುವಂತೆ ಲೋಕಸಭೆಯ ಸಚಿವಾಲಯವು ಉಭಯ ಸದನಗಳಿಗೆ ಅಸಂಸದೀಯ ಪದಗಳನ್ನು ಪಟ್ಟಿ ಮಾಡುವ ಹೊಸ ಕಿರುಪುಸ್ತಕವನ್ನು ಬಿಡುಗಡೆ ಮಾಡಿದೆ.

ಈ ಕಿರುಪುಸ್ತಕದಲ್ಲಿ, ‘ಅರಾಜಕತಾವಾದಿ’, ‘ಶಕುನಿ’, ‘ಸರ್ವಾಧಿಕಾರಿ’, ‘ಸರ್ವಾಧಿಕಾರ’, ‘ಜೈಚಂದ್’, ‘ವಿನಾಶ ಪುರುಷ’, ‘ಖಲಿಸ್ತಾನಿ’ ಮತ್ತು ‘ರಕ್ತದ ವ್ಯವಸಾಯ’ ಸೇರಿದಂತೆ ಹಲವು ಪದಗಳನ್ನು ಸದನದ ಚರ್ಚೆಯ ಸಮಯದಲ್ಲಿ ಅಥವಾ ಬೇರೆ ರೀತಿಯಲ್ಲಿ ಬಳಸಿದರೆ ಅದನ್ನು ತೆಗೆದುಹಾಕಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ದೋಹ್ರಾ ಚರಿತ್ರ’, ‘ನಿಕಮ್ಮ’, ‘ನೌಟಂಕಿ’, ‘ದಿಂಡೋರಾ ಪೀಟ್ನಾ’ ಮತ್ತು ‘ಬೆಹ್ರಿ ಸರ್ಕಾರ್’ ಪದಗಳನ್ನು ಕೂಡಾ ಬಳಸುವಂತಿಲ್ಲ.

ಅಸಂವಿಧಾನಿಕ ಪದಗಳ ಹೊಸ ಕಿರು ಪುಸ್ತಕ ಹೊರ ತಂದರೂ, ರಾಜ್ಯಸಭಾ ಮತ್ತು ಲೋಕಸಭಾ ಸ್ಪೀಕರ್‌ಗಳು ಈ ಪದಗಳನ್ನು ಕಡತದಿಂದ ತೆಗೆದುಹಾಕಬೇಕೆ ಅಥವಾ ಅದು ಇರಬಹುದೇ ಎಂಬ ಅಂತಿಮ ತೀರ್ಮಾವನ್ನು ತೆಗೆದುಕೊಳ್ಳಬುಹುದಾಗಿದೆ.

ಸರ್ಕಾರದ ಈ ನಿರ್ಧಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಅವರು ಇಂತಹ ಪದಗಳ ಬಳಕೆಯನ್ನು ಮುಂದುವರಿಸುವುದಾಗಿ ಹೇಳಿದ್ದು, ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಟಿಎಂಸಿಯ ಮತ್ತೊಬ್ಬ ಸಂಸದೆ ಮಹುವಾ ಮೊಯಿತ್ರಾ ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ, “ಅಂದರೆ ನಾನು ಲೋಕಸಭೆಯಲ್ಲಿ ಎದ್ದು ನಿಂತು, ಈ ಅಸಮರ್ಥ ಸರ್ಕಾರ ಭಾರತೀಯರಿಗೆ ಹೇಗೆ ದ್ರೋಹ ಬಗೆದಿದೆ ಎಂಬುದರ ಕುರಿತು ಮಾತನಾಡಲು ಸಾಧ್ಯವಿಲ್ಲವೆ. ನಿಮ್ಮ ಬೂಟಾಟಿಕೆಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ಅಸಂಸದೀಯ ಎಂದು ಪಟ್ಟಿ ಮಾಡಲಾದ ಕೆಲವು ಪದಗಳ ಪಟ್ಟಿ ಹೀಗಿದೆ

‘ರಕ್ತಪಾತ’, ‘ರಕ್ತಸಿಕ್ತ’, ‘ದ್ರೋಹ’, ‘ನಾಚಿಕೆ’, ‘ದುರುಪಯೋಗ’, ‘ಮೋಸ, ‘ಚಮಚಾ’, ‘ಚಮಚಾಗಿರಿ’, ‘ಚೇಲಾಗಳು’, ‘ಬಾಲಿಶ’, ‘ಭ್ರಷ್ಟ’, ‘ಹೇಡಿ’, ‘ಅಪರಾಧ’ ಮತ್ತು ‘ಮೊಸಳೆ ಕಣ್ಣೀರು’, ‘ಅವಮಾನ’, ‘ಕತ್ತೆ’, ‘ನಾಟಕ’, ‘ಕಣ್ಣೀರು ತೊಳೆಯುವುದು’, ‘ಮೀಠಿ’, ‘ಗೂಂಡಾಗಿರಿ’, ‘ಬೂಟಾಟಿಕೆ’, ‘ಅಸಮರ್ಥ’, ‘ತಪ್ಪುದಾರಿ’, ‘ಸುಳ್ಳು’, ‘ಸತ್ಯ’, ‘ಅರಾಜಕತಾವಾದಿ’, ‘ಗದ್ದರ್’, ‘ಗಿರ್ಗಿಟ್‌’, ‘ಗೂಂಡಾಗಳು’, ‘ಮೊಸಳೆ ಕಣ್ಣೀರು’, ‘ಅಪಮಾನ’, ‘ಅಸತ್ಯ’, ‘ಅಹಂಕಾರ’, ‘ಭ್ರಷ್ಟ’, ‘ಕಾಲಾ ದಿನ’, ‘ಕಾಲಾ ಬಜಾರಿ’, ‘ಖರೀದ್ ಫರೋಖ್ತ್ ‘, ‘ದಂಗಾ’, ‘ದಲಾಲ್’, ‘ದಾದಗಿರಿ’, ‘ದೋಹ್ರಾ ಚರಿತ್ರೆ’, ‘ಬೇಚಾರ’, ‘ಬಾಬ್‌ಕಟ್’, ‘ಲಾಲಿಪಾಪ್’, ‘ವಿಶ್ವಾಘಾತ’, ‘ಸಂವೇದನ ಹೀನ’,, ‘ಮೂರ್ಖ’, ಮತ್ತು ‘ಲೈಂಗಿಕ ಕಿರುಕುಳ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...