Homeರಾಜಕೀಯ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

- Advertisement -
- Advertisement -

‘ಜುಮ್ಲಾಜೀವಿ’, ‘ಬಾಲ್ ಬುದ್ಧಿ’, ‘ಕೋವಿಡ್ ಸ್ಪ್ರೆಡರ್’, ‘ಸ್ನೂಪ್‌ಗೇಟ್’, ‘ನಾಚಿಕೆಯಾಗಬೇಕು’, ‘ದುರುಪಯೋಗಪಡಿಸಿಕೊಂಡ’, ‘ದ್ರೋಹ’, ‘ಭ್ರಷ್ಟ’, ‘ನಾಟಕ’, ‘ಬೂಟಾಟಿಕೆ’ ಮತ್ತು ‘ಅಸಮರ್ಥ’ ಮೊದಲಾದ ದಿನನಿತ್ಯ ಬಳಸುವ ಅನೇಕ ಪದಗಳನ್ನು ಸೋಮವಾರದಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಬಳಸುವಂತಿಲ್ಲ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಹೇಳಿದೆ. ಸರ್ಕಾರವನ್ನು ವಿರೋಧಿಸಲು ಕಷ್ಟವಾಗುವಂತೆ ಲೋಕಸಭೆಯ ಸಚಿವಾಲಯವು ಉಭಯ ಸದನಗಳಿಗೆ ಅಸಂಸದೀಯ ಪದಗಳನ್ನು ಪಟ್ಟಿ ಮಾಡುವ ಹೊಸ ಕಿರುಪುಸ್ತಕವನ್ನು ಬಿಡುಗಡೆ ಮಾಡಿದೆ.

ಈ ಕಿರುಪುಸ್ತಕದಲ್ಲಿ, ‘ಅರಾಜಕತಾವಾದಿ’, ‘ಶಕುನಿ’, ‘ಸರ್ವಾಧಿಕಾರಿ’, ‘ಸರ್ವಾಧಿಕಾರ’, ‘ಜೈಚಂದ್’, ‘ವಿನಾಶ ಪುರುಷ’, ‘ಖಲಿಸ್ತಾನಿ’ ಮತ್ತು ‘ರಕ್ತದ ವ್ಯವಸಾಯ’ ಸೇರಿದಂತೆ ಹಲವು ಪದಗಳನ್ನು ಸದನದ ಚರ್ಚೆಯ ಸಮಯದಲ್ಲಿ ಅಥವಾ ಬೇರೆ ರೀತಿಯಲ್ಲಿ ಬಳಸಿದರೆ ಅದನ್ನು ತೆಗೆದುಹಾಕಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ದೋಹ್ರಾ ಚರಿತ್ರ’, ‘ನಿಕಮ್ಮ’, ‘ನೌಟಂಕಿ’, ‘ದಿಂಡೋರಾ ಪೀಟ್ನಾ’ ಮತ್ತು ‘ಬೆಹ್ರಿ ಸರ್ಕಾರ್’ ಪದಗಳನ್ನು ಕೂಡಾ ಬಳಸುವಂತಿಲ್ಲ.

ಅಸಂವಿಧಾನಿಕ ಪದಗಳ ಹೊಸ ಕಿರು ಪುಸ್ತಕ ಹೊರ ತಂದರೂ, ರಾಜ್ಯಸಭಾ ಮತ್ತು ಲೋಕಸಭಾ ಸ್ಪೀಕರ್‌ಗಳು ಈ ಪದಗಳನ್ನು ಕಡತದಿಂದ ತೆಗೆದುಹಾಕಬೇಕೆ ಅಥವಾ ಅದು ಇರಬಹುದೇ ಎಂಬ ಅಂತಿಮ ತೀರ್ಮಾವನ್ನು ತೆಗೆದುಕೊಳ್ಳಬುಹುದಾಗಿದೆ.

ಸರ್ಕಾರದ ಈ ನಿರ್ಧಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಅವರು ಇಂತಹ ಪದಗಳ ಬಳಕೆಯನ್ನು ಮುಂದುವರಿಸುವುದಾಗಿ ಹೇಳಿದ್ದು, ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಟಿಎಂಸಿಯ ಮತ್ತೊಬ್ಬ ಸಂಸದೆ ಮಹುವಾ ಮೊಯಿತ್ರಾ ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ, “ಅಂದರೆ ನಾನು ಲೋಕಸಭೆಯಲ್ಲಿ ಎದ್ದು ನಿಂತು, ಈ ಅಸಮರ್ಥ ಸರ್ಕಾರ ಭಾರತೀಯರಿಗೆ ಹೇಗೆ ದ್ರೋಹ ಬಗೆದಿದೆ ಎಂಬುದರ ಕುರಿತು ಮಾತನಾಡಲು ಸಾಧ್ಯವಿಲ್ಲವೆ. ನಿಮ್ಮ ಬೂಟಾಟಿಕೆಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ಅಸಂಸದೀಯ ಎಂದು ಪಟ್ಟಿ ಮಾಡಲಾದ ಕೆಲವು ಪದಗಳ ಪಟ್ಟಿ ಹೀಗಿದೆ

‘ರಕ್ತಪಾತ’, ‘ರಕ್ತಸಿಕ್ತ’, ‘ದ್ರೋಹ’, ‘ನಾಚಿಕೆ’, ‘ದುರುಪಯೋಗ’, ‘ಮೋಸ, ‘ಚಮಚಾ’, ‘ಚಮಚಾಗಿರಿ’, ‘ಚೇಲಾಗಳು’, ‘ಬಾಲಿಶ’, ‘ಭ್ರಷ್ಟ’, ‘ಹೇಡಿ’, ‘ಅಪರಾಧ’ ಮತ್ತು ‘ಮೊಸಳೆ ಕಣ್ಣೀರು’, ‘ಅವಮಾನ’, ‘ಕತ್ತೆ’, ‘ನಾಟಕ’, ‘ಕಣ್ಣೀರು ತೊಳೆಯುವುದು’, ‘ಮೀಠಿ’, ‘ಗೂಂಡಾಗಿರಿ’, ‘ಬೂಟಾಟಿಕೆ’, ‘ಅಸಮರ್ಥ’, ‘ತಪ್ಪುದಾರಿ’, ‘ಸುಳ್ಳು’, ‘ಸತ್ಯ’, ‘ಅರಾಜಕತಾವಾದಿ’, ‘ಗದ್ದರ್’, ‘ಗಿರ್ಗಿಟ್‌’, ‘ಗೂಂಡಾಗಳು’, ‘ಮೊಸಳೆ ಕಣ್ಣೀರು’, ‘ಅಪಮಾನ’, ‘ಅಸತ್ಯ’, ‘ಅಹಂಕಾರ’, ‘ಭ್ರಷ್ಟ’, ‘ಕಾಲಾ ದಿನ’, ‘ಕಾಲಾ ಬಜಾರಿ’, ‘ಖರೀದ್ ಫರೋಖ್ತ್ ‘, ‘ದಂಗಾ’, ‘ದಲಾಲ್’, ‘ದಾದಗಿರಿ’, ‘ದೋಹ್ರಾ ಚರಿತ್ರೆ’, ‘ಬೇಚಾರ’, ‘ಬಾಬ್‌ಕಟ್’, ‘ಲಾಲಿಪಾಪ್’, ‘ವಿಶ್ವಾಘಾತ’, ‘ಸಂವೇದನ ಹೀನ’,, ‘ಮೂರ್ಖ’, ಮತ್ತು ‘ಲೈಂಗಿಕ ಕಿರುಕುಳ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...