Homeರಾಜಕೀಯ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

- Advertisement -
- Advertisement -

‘ಜುಮ್ಲಾಜೀವಿ’, ‘ಬಾಲ್ ಬುದ್ಧಿ’, ‘ಕೋವಿಡ್ ಸ್ಪ್ರೆಡರ್’, ‘ಸ್ನೂಪ್‌ಗೇಟ್’, ‘ನಾಚಿಕೆಯಾಗಬೇಕು’, ‘ದುರುಪಯೋಗಪಡಿಸಿಕೊಂಡ’, ‘ದ್ರೋಹ’, ‘ಭ್ರಷ್ಟ’, ‘ನಾಟಕ’, ‘ಬೂಟಾಟಿಕೆ’ ಮತ್ತು ‘ಅಸಮರ್ಥ’ ಮೊದಲಾದ ದಿನನಿತ್ಯ ಬಳಸುವ ಅನೇಕ ಪದಗಳನ್ನು ಸೋಮವಾರದಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಬಳಸುವಂತಿಲ್ಲ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಹೇಳಿದೆ. ಸರ್ಕಾರವನ್ನು ವಿರೋಧಿಸಲು ಕಷ್ಟವಾಗುವಂತೆ ಲೋಕಸಭೆಯ ಸಚಿವಾಲಯವು ಉಭಯ ಸದನಗಳಿಗೆ ಅಸಂಸದೀಯ ಪದಗಳನ್ನು ಪಟ್ಟಿ ಮಾಡುವ ಹೊಸ ಕಿರುಪುಸ್ತಕವನ್ನು ಬಿಡುಗಡೆ ಮಾಡಿದೆ.

ಈ ಕಿರುಪುಸ್ತಕದಲ್ಲಿ, ‘ಅರಾಜಕತಾವಾದಿ’, ‘ಶಕುನಿ’, ‘ಸರ್ವಾಧಿಕಾರಿ’, ‘ಸರ್ವಾಧಿಕಾರ’, ‘ಜೈಚಂದ್’, ‘ವಿನಾಶ ಪುರುಷ’, ‘ಖಲಿಸ್ತಾನಿ’ ಮತ್ತು ‘ರಕ್ತದ ವ್ಯವಸಾಯ’ ಸೇರಿದಂತೆ ಹಲವು ಪದಗಳನ್ನು ಸದನದ ಚರ್ಚೆಯ ಸಮಯದಲ್ಲಿ ಅಥವಾ ಬೇರೆ ರೀತಿಯಲ್ಲಿ ಬಳಸಿದರೆ ಅದನ್ನು ತೆಗೆದುಹಾಕಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ದೋಹ್ರಾ ಚರಿತ್ರ’, ‘ನಿಕಮ್ಮ’, ‘ನೌಟಂಕಿ’, ‘ದಿಂಡೋರಾ ಪೀಟ್ನಾ’ ಮತ್ತು ‘ಬೆಹ್ರಿ ಸರ್ಕಾರ್’ ಪದಗಳನ್ನು ಕೂಡಾ ಬಳಸುವಂತಿಲ್ಲ.

ಅಸಂವಿಧಾನಿಕ ಪದಗಳ ಹೊಸ ಕಿರು ಪುಸ್ತಕ ಹೊರ ತಂದರೂ, ರಾಜ್ಯಸಭಾ ಮತ್ತು ಲೋಕಸಭಾ ಸ್ಪೀಕರ್‌ಗಳು ಈ ಪದಗಳನ್ನು ಕಡತದಿಂದ ತೆಗೆದುಹಾಕಬೇಕೆ ಅಥವಾ ಅದು ಇರಬಹುದೇ ಎಂಬ ಅಂತಿಮ ತೀರ್ಮಾವನ್ನು ತೆಗೆದುಕೊಳ್ಳಬುಹುದಾಗಿದೆ.

ಸರ್ಕಾರದ ಈ ನಿರ್ಧಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಅವರು ಇಂತಹ ಪದಗಳ ಬಳಕೆಯನ್ನು ಮುಂದುವರಿಸುವುದಾಗಿ ಹೇಳಿದ್ದು, ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಟಿಎಂಸಿಯ ಮತ್ತೊಬ್ಬ ಸಂಸದೆ ಮಹುವಾ ಮೊಯಿತ್ರಾ ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ, “ಅಂದರೆ ನಾನು ಲೋಕಸಭೆಯಲ್ಲಿ ಎದ್ದು ನಿಂತು, ಈ ಅಸಮರ್ಥ ಸರ್ಕಾರ ಭಾರತೀಯರಿಗೆ ಹೇಗೆ ದ್ರೋಹ ಬಗೆದಿದೆ ಎಂಬುದರ ಕುರಿತು ಮಾತನಾಡಲು ಸಾಧ್ಯವಿಲ್ಲವೆ. ನಿಮ್ಮ ಬೂಟಾಟಿಕೆಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ಅಸಂಸದೀಯ ಎಂದು ಪಟ್ಟಿ ಮಾಡಲಾದ ಕೆಲವು ಪದಗಳ ಪಟ್ಟಿ ಹೀಗಿದೆ

‘ರಕ್ತಪಾತ’, ‘ರಕ್ತಸಿಕ್ತ’, ‘ದ್ರೋಹ’, ‘ನಾಚಿಕೆ’, ‘ದುರುಪಯೋಗ’, ‘ಮೋಸ, ‘ಚಮಚಾ’, ‘ಚಮಚಾಗಿರಿ’, ‘ಚೇಲಾಗಳು’, ‘ಬಾಲಿಶ’, ‘ಭ್ರಷ್ಟ’, ‘ಹೇಡಿ’, ‘ಅಪರಾಧ’ ಮತ್ತು ‘ಮೊಸಳೆ ಕಣ್ಣೀರು’, ‘ಅವಮಾನ’, ‘ಕತ್ತೆ’, ‘ನಾಟಕ’, ‘ಕಣ್ಣೀರು ತೊಳೆಯುವುದು’, ‘ಮೀಠಿ’, ‘ಗೂಂಡಾಗಿರಿ’, ‘ಬೂಟಾಟಿಕೆ’, ‘ಅಸಮರ್ಥ’, ‘ತಪ್ಪುದಾರಿ’, ‘ಸುಳ್ಳು’, ‘ಸತ್ಯ’, ‘ಅರಾಜಕತಾವಾದಿ’, ‘ಗದ್ದರ್’, ‘ಗಿರ್ಗಿಟ್‌’, ‘ಗೂಂಡಾಗಳು’, ‘ಮೊಸಳೆ ಕಣ್ಣೀರು’, ‘ಅಪಮಾನ’, ‘ಅಸತ್ಯ’, ‘ಅಹಂಕಾರ’, ‘ಭ್ರಷ್ಟ’, ‘ಕಾಲಾ ದಿನ’, ‘ಕಾಲಾ ಬಜಾರಿ’, ‘ಖರೀದ್ ಫರೋಖ್ತ್ ‘, ‘ದಂಗಾ’, ‘ದಲಾಲ್’, ‘ದಾದಗಿರಿ’, ‘ದೋಹ್ರಾ ಚರಿತ್ರೆ’, ‘ಬೇಚಾರ’, ‘ಬಾಬ್‌ಕಟ್’, ‘ಲಾಲಿಪಾಪ್’, ‘ವಿಶ್ವಾಘಾತ’, ‘ಸಂವೇದನ ಹೀನ’,, ‘ಮೂರ್ಖ’, ಮತ್ತು ‘ಲೈಂಗಿಕ ಕಿರುಕುಳ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...