Homeರಾಜಕೀಯ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

- Advertisement -
- Advertisement -

‘ಜುಮ್ಲಾಜೀವಿ’, ‘ಬಾಲ್ ಬುದ್ಧಿ’, ‘ಕೋವಿಡ್ ಸ್ಪ್ರೆಡರ್’, ‘ಸ್ನೂಪ್‌ಗೇಟ್’, ‘ನಾಚಿಕೆಯಾಗಬೇಕು’, ‘ದುರುಪಯೋಗಪಡಿಸಿಕೊಂಡ’, ‘ದ್ರೋಹ’, ‘ಭ್ರಷ್ಟ’, ‘ನಾಟಕ’, ‘ಬೂಟಾಟಿಕೆ’ ಮತ್ತು ‘ಅಸಮರ್ಥ’ ಮೊದಲಾದ ದಿನನಿತ್ಯ ಬಳಸುವ ಅನೇಕ ಪದಗಳನ್ನು ಸೋಮವಾರದಿಂದ ಪ್ರಾರಂಭವಾಗುವ ಅಧಿವೇಶನದಲ್ಲಿ ಬಳಸುವಂತಿಲ್ಲ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಹೇಳಿದೆ. ಸರ್ಕಾರವನ್ನು ವಿರೋಧಿಸಲು ಕಷ್ಟವಾಗುವಂತೆ ಲೋಕಸಭೆಯ ಸಚಿವಾಲಯವು ಉಭಯ ಸದನಗಳಿಗೆ ಅಸಂಸದೀಯ ಪದಗಳನ್ನು ಪಟ್ಟಿ ಮಾಡುವ ಹೊಸ ಕಿರುಪುಸ್ತಕವನ್ನು ಬಿಡುಗಡೆ ಮಾಡಿದೆ.

ಈ ಕಿರುಪುಸ್ತಕದಲ್ಲಿ, ‘ಅರಾಜಕತಾವಾದಿ’, ‘ಶಕುನಿ’, ‘ಸರ್ವಾಧಿಕಾರಿ’, ‘ಸರ್ವಾಧಿಕಾರ’, ‘ಜೈಚಂದ್’, ‘ವಿನಾಶ ಪುರುಷ’, ‘ಖಲಿಸ್ತಾನಿ’ ಮತ್ತು ‘ರಕ್ತದ ವ್ಯವಸಾಯ’ ಸೇರಿದಂತೆ ಹಲವು ಪದಗಳನ್ನು ಸದನದ ಚರ್ಚೆಯ ಸಮಯದಲ್ಲಿ ಅಥವಾ ಬೇರೆ ರೀತಿಯಲ್ಲಿ ಬಳಸಿದರೆ ಅದನ್ನು ತೆಗೆದುಹಾಕಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ದೋಹ್ರಾ ಚರಿತ್ರ’, ‘ನಿಕಮ್ಮ’, ‘ನೌಟಂಕಿ’, ‘ದಿಂಡೋರಾ ಪೀಟ್ನಾ’ ಮತ್ತು ‘ಬೆಹ್ರಿ ಸರ್ಕಾರ್’ ಪದಗಳನ್ನು ಕೂಡಾ ಬಳಸುವಂತಿಲ್ಲ.

ಅಸಂವಿಧಾನಿಕ ಪದಗಳ ಹೊಸ ಕಿರು ಪುಸ್ತಕ ಹೊರ ತಂದರೂ, ರಾಜ್ಯಸಭಾ ಮತ್ತು ಲೋಕಸಭಾ ಸ್ಪೀಕರ್‌ಗಳು ಈ ಪದಗಳನ್ನು ಕಡತದಿಂದ ತೆಗೆದುಹಾಕಬೇಕೆ ಅಥವಾ ಅದು ಇರಬಹುದೇ ಎಂಬ ಅಂತಿಮ ತೀರ್ಮಾವನ್ನು ತೆಗೆದುಕೊಳ್ಳಬುಹುದಾಗಿದೆ.

ಸರ್ಕಾರದ ಈ ನಿರ್ಧಾರದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಅವರು ಇಂತಹ ಪದಗಳ ಬಳಕೆಯನ್ನು ಮುಂದುವರಿಸುವುದಾಗಿ ಹೇಳಿದ್ದು, ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಟಿಎಂಸಿಯ ಮತ್ತೊಬ್ಬ ಸಂಸದೆ ಮಹುವಾ ಮೊಯಿತ್ರಾ ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ, “ಅಂದರೆ ನಾನು ಲೋಕಸಭೆಯಲ್ಲಿ ಎದ್ದು ನಿಂತು, ಈ ಅಸಮರ್ಥ ಸರ್ಕಾರ ಭಾರತೀಯರಿಗೆ ಹೇಗೆ ದ್ರೋಹ ಬಗೆದಿದೆ ಎಂಬುದರ ಕುರಿತು ಮಾತನಾಡಲು ಸಾಧ್ಯವಿಲ್ಲವೆ. ನಿಮ್ಮ ಬೂಟಾಟಿಕೆಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ಅಸಂಸದೀಯ ಎಂದು ಪಟ್ಟಿ ಮಾಡಲಾದ ಕೆಲವು ಪದಗಳ ಪಟ್ಟಿ ಹೀಗಿದೆ

‘ರಕ್ತಪಾತ’, ‘ರಕ್ತಸಿಕ್ತ’, ‘ದ್ರೋಹ’, ‘ನಾಚಿಕೆ’, ‘ದುರುಪಯೋಗ’, ‘ಮೋಸ, ‘ಚಮಚಾ’, ‘ಚಮಚಾಗಿರಿ’, ‘ಚೇಲಾಗಳು’, ‘ಬಾಲಿಶ’, ‘ಭ್ರಷ್ಟ’, ‘ಹೇಡಿ’, ‘ಅಪರಾಧ’ ಮತ್ತು ‘ಮೊಸಳೆ ಕಣ್ಣೀರು’, ‘ಅವಮಾನ’, ‘ಕತ್ತೆ’, ‘ನಾಟಕ’, ‘ಕಣ್ಣೀರು ತೊಳೆಯುವುದು’, ‘ಮೀಠಿ’, ‘ಗೂಂಡಾಗಿರಿ’, ‘ಬೂಟಾಟಿಕೆ’, ‘ಅಸಮರ್ಥ’, ‘ತಪ್ಪುದಾರಿ’, ‘ಸುಳ್ಳು’, ‘ಸತ್ಯ’, ‘ಅರಾಜಕತಾವಾದಿ’, ‘ಗದ್ದರ್’, ‘ಗಿರ್ಗಿಟ್‌’, ‘ಗೂಂಡಾಗಳು’, ‘ಮೊಸಳೆ ಕಣ್ಣೀರು’, ‘ಅಪಮಾನ’, ‘ಅಸತ್ಯ’, ‘ಅಹಂಕಾರ’, ‘ಭ್ರಷ್ಟ’, ‘ಕಾಲಾ ದಿನ’, ‘ಕಾಲಾ ಬಜಾರಿ’, ‘ಖರೀದ್ ಫರೋಖ್ತ್ ‘, ‘ದಂಗಾ’, ‘ದಲಾಲ್’, ‘ದಾದಗಿರಿ’, ‘ದೋಹ್ರಾ ಚರಿತ್ರೆ’, ‘ಬೇಚಾರ’, ‘ಬಾಬ್‌ಕಟ್’, ‘ಲಾಲಿಪಾಪ್’, ‘ವಿಶ್ವಾಘಾತ’, ‘ಸಂವೇದನ ಹೀನ’,, ‘ಮೂರ್ಖ’, ಮತ್ತು ‘ಲೈಂಗಿಕ ಕಿರುಕುಳ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...