Homeಕರೋನಾ ತಲ್ಲಣಕೊನೆಗೂ ಕುಂಭಮೇಳಕ್ಕೆ ತೆರೆ ಎಳೆಯಲು ಸಿದ್ಧರಾದ ಜುನಾ ಅಖಾರ ಮುಖ್ಯಸ್ಥ ಅವಧೇಶಾನಂದ ಗಿರಿ

ಕೊನೆಗೂ ಕುಂಭಮೇಳಕ್ಕೆ ತೆರೆ ಎಳೆಯಲು ಸಿದ್ಧರಾದ ಜುನಾ ಅಖಾರ ಮುಖ್ಯಸ್ಥ ಅವಧೇಶಾನಂದ ಗಿರಿ

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಔಪಚಾರಿಕ ಅಂತ್ಯ ನೀಡಿರುವುದಾಗಿ ಜುನಾ ಅಖಾರದ ಮುಖ್ಯಸ್ಥ ಸ್ವಾಮಿ ಅವಧೇಶಾನಂದ ಗಿರಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ದೇಶಾದ್ಯಂತ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ “ಸಾಂಕೇತಿಕವಾಗಿರಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಸಾಧುಗಳಲ್ಲಿ ಮನವಿ ಮಾಡಿದ್ದರು.

ಪ್ರಧಾನಿ ಮೋದಿಯವರು ಮನವಿ ಮಾಡಿದ ಕೆಲವೇ ಗಂಟೆಗಳ ನಂತರ, ಜುನಾ ಅಖಾರಾದ ಸ್ವಾಮಿ ಅವಧೇಶಾನಂದ ಗಿರಿ ಈ ಪ್ರಕಟಣೆ ಹೊರಡಿಸಿದ್ದಾರೆ. ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಕುರಿತು ಪೋಸ್ಟ್ ಶೇರ್‌ ಮಾಡಿದ್ದಾರೆ.

ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

“ಭಾರತದ ಜನರು ಮತ್ತು ಅವರ ಉಳಿವು ನಮ್ಮ ಮೊದಲ ಆದ್ಯತೆಯಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ನಾವು ಎಲ್ಲಾ ದೇವರುಗಳ ವಿಸರ್ಜನೆಯನ್ನು ಸರಿಯಾಗಿ ನಿರ್ವಹಿಸಿದ್ದೇವೆ. ಇದು ಜುನಾ ಅಖಾರಾದಿಂದ ಕುಂಭಮೇಳದ ಔಪಚಾರಿಕ ಅಂತ್ಯ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧುಗಳಿಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇತರ 80 ಮಂದಿ ಸಾಧುಗಳಿಗೆ ಕೊರೊನಾ ದೃಢಪಟ್ಟಿದೆ. ಲಕ್ಷಾಂತರ ಮಂದಿ ಸೇರುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂದು ವರದಿಯಾಗಿದೆ.

ಶನಿವಾರ ಬೆಳಗ್ಗೆ ಟ್ವೀಟ್ ಮಾಡಿದ್ದ ಪ್ರಧಾನ ನರೇಂದ್ರ ಮೋದಿ, “ಎರಡು ಪುಣ್ಯ ಸ್ನಾನಗಳು ನಡೆದಿವೆ ಮತ್ತು ಕೊರೊನಾ ಬಿಕ್ಕಟ್ಟಿನಿಂದಾಗಿ ಕುಂಭವನ್ನು ಸಾಂಕೇತಿಕವಾಗಿ ಇಡಬೇಕೆಂದು ನಾನು ಪ್ರಾರ್ಥಿಸಿದ್ದೇನೆ. ಇದು ಈ ಬಿಕ್ಕಟ್ಟಿನಿಂದ ಹೋರಾಟಕ್ಕೆ ಬಲವನ್ನು ನೀಡುತ್ತದೆ” ಎಂದಿದ್ದರು.

“ಆಚಾರ್ಯ ಮಹಾಮಂಡಲೇಶ್ವರ ಧಾರ್ಮಿಕ ಸಭಾದ ಪೂಜ್ಯ ಸ್ವಾಮಿ ಅವಧೇಶಾನಂದ ಗಿರಿಜಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದೆ. ಎಲ್ಲಾ ಸಂತರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಎಲ್ಲಾ ಸಂತರು ಆಡಳಿತಕ್ಕೆ ಉತ್ತಮ ರೀತಿಯ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿ ನಾನು ಸಂತ ಜಗತ್ತಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದು ಮೋದಿ ತಿಳಿಸಿದ್ದರು.


ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧು ಕೊರೊನಾಗೆ ಬಲಿ, 80 ಸಾಧುಗಳಿಗೆ ಸೋಂಕು ದೃಢ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...