Homeಮುಖಪುಟಮಣಿಪುರ ಹಿಂಸಾಚಾರ, ಭ್ರಷ್ಟಾಚಾರ ವಿಚಾರಗಳಿಂದ ಗಮನ ಬೇರೆಡೆಗೆ ಸೆಳೆಯಲು 'ಸನಾತನ ತಂತ್ರ' ಬಳಕೆ: ಬಿಜೆಪಿ ವಿರುದ್ಧ...

ಮಣಿಪುರ ಹಿಂಸಾಚಾರ, ಭ್ರಷ್ಟಾಚಾರ ವಿಚಾರಗಳಿಂದ ಗಮನ ಬೇರೆಡೆಗೆ ಸೆಳೆಯಲು ‘ಸನಾತನ ತಂತ್ರ’ ಬಳಕೆ: ಬಿಜೆಪಿ ವಿರುದ್ಧ ಸ್ಟಾಲಿನ್ ಕಿಡಿ

- Advertisement -
- Advertisement -

‘ಸನಾತನ ಧರ್ಮ’ದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ  ನೀಡಿದ್ದಕ್ಕೆ ಅವರ ವಿರುದ್ಧ ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಅವರು ಎಲ್ಲಾ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

”ಇದು ಮಣಿಪುರ ಹಿಂಸಾಚಾರ ಮತ್ತು ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸನಾತನದ ತಂತ್ರ ಬಳಸುತ್ತಿದ್ದಾರೆ” ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ನಾಲ್ಕು ಪುಟಗಳ ಪತ್ರವನ್ನು ಬಿಡುಗಡೆ ಮಾಡಿದ ಉದಯನಿಧಿ, ”ಪೆರಿಯಾರ್, ಅಣ್ಣಾ, ಕಲೈಂಜರ್ ಮತ್ತು ಪೆರಸಿರಿಯಾರ್ ಅವರ ಸಿದ್ಧಾಂತಗಳ ಗೆಲುವಿಗಾಗಿ ಕೆಲಸ ಮಾಡಲು ನಾವು ಸಂಕಲ್ಪ ಮಾಡೋಣ. ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ” ಎಂದು ಕರೆ ಕೊಟ್ಟಿದ್ದಾರೆ.

ಉತ್ತರ ಪ್ರದೇಶದ ರಾಂಪುರದಲ್ಲಿ ವಕೀಲರ ದೂರುಗಳ ನಂತರ ಉದಯನಿಧಿ ಮತ್ತು ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ ವಿರುದ್ಧಐಪಿಸಿ ಸೆಕ್ಷನ್ 153ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”’ಎಲ್ಲಾ ಜೀವಗಳು ಸಮಾನವಾಗಿ ಹುಟ್ಟುತ್ತವೆ’ ಎಂದು ಕಲಿಸುವ ಎಲ್ಲಾ ಧರ್ಮಗಳನ್ನು ನಾವು ಗೌರವಿಸುತ್ತೇವೆ. ಆದರೆ ಇವುಗಳ ಬಗ್ಗೆ ಕಿಂಚಿತ್ತೂ ತಿಳುವಳಿಕೆಯಿಲ್ಲದೆ, ಸಂಸತ್ ಚುನಾವಣೆಯನ್ನು ಎದುರಿಸಲು ಮೋದಿ ಅಂಡ್ ಟೀಮ್ ಇಂತಹ ಅಪಪ್ರಚಾರಗಳ ಮೇಲೆ ಮಾತ್ರ ಅವಲಂಬಿತರಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಒಂದೆಡೆ, ನನಗೆ ಅವರ ಬಗ್ಗೆ ಅನುಂಪ ಇದೆ. ಕಳೆದ 9 ವರ್ಷಗಳಿಂದ ಮೋದಿ ಏನೂ ಮಾಡುತ್ತಿಲ್ಲ. ಸಾಂದರ್ಭಿಕವಾಗಿ ಅವರು ಹಣದ ಅಮಾನ್ಯೀಕರಣವನ್ನು ಮಾಡುತ್ತಾರೆ. ಗುಡಿಸಲುಗಳನ್ನು ಮರೆಮಾಡಲು ಗೋಡೆಯನ್ನು ನಿರ್ಮಿಸುತ್ತಾರೆ. ಹೊಸ ಸಂಸತ್ತಿನ ಕಟ್ಟಡವನ್ನು ನಿರ್ಮಿಸುತ್ತಾರೆ, ಅಲ್ಲಿ ಸೆಂಗೋಲ್ ಅನ್ನು ನಿರ್ಮಿಸುತ್ತಾರೆ. ದೇಶದ ಹೆಸರನ್ನು ಬದಲಾಯಿಸುತ್ತಾರೆ” ಎಂದು ಟೀಕಿಸಿದ್ದಾರೆ.

”ನಿಶಸ್ತ್ರ, ಫ್ಯಾಸಿಸ್ಟ್ ಬಿಜೆಪಿ ಸರ್ಕಾರ”ವನ್ನು ಇಡೀ ದೇಶವೇ ಪ್ರಶ್ನಿಸುತ್ತಿದೆ. ಕಳೆದ 9 ವರ್ಷಗಳಿಂದ ನಿಮ್ಮ (ಬಿಜೆಪಿ) ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ. ನಮ್ಮ ಕಲ್ಯಾಣಕ್ಕಾಗಿ ನೀವು ಏನು ಮಾಡಿದ್ದೀರಿ? ” ಎಂದು ಪ್ರಶ್ನಿಸಿದ್ದಾರೆ.

ಸನಾತನ ಧರ್ಮದ ಹೇಳಿಕೆ:

ಕಳೆದ ವಾರ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಟೀಕಿಸಿದರು ಮತ್ತು ಅದು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಇದ್ದಂತೆ ಅದನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು” ಎಂದು ಕರೆ ನೀಡಿದ್ದರು.

ವಕೀಲರಾದ ಹರ್ಷ್ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಉದಯನಿಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಉದಯನಿಧಿ ಹೇಳಿಕೆಗಳು ನಮ್ಮ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರು ತಮ್ಮ ಭಾಷಣವನ್ನು ತಿರುಚಿದ್ದಾರೆ ಮತ್ತು ಅದನ್ನು ‘ಜನಾಂಗೀಯ ಹತ್ಯೆಗೆ ಪ್ರಚೋದನೆ’ ನೀಡಿದ್ದಾರೆ. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಸನಾತನ ಎನ್ನುವ ಪದವನ್ನು ಆಯುಧವಾಗಿ ಬಳಸುತ್ತಿದ್ದಾರೆ” ಎಂದು ಉದಯನಿಧಿ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...