Homeಮುಖಪುಟಮಣಿಪುರ ಹಿಂಸಾಚಾರ, ಭ್ರಷ್ಟಾಚಾರ ವಿಚಾರಗಳಿಂದ ಗಮನ ಬೇರೆಡೆಗೆ ಸೆಳೆಯಲು 'ಸನಾತನ ತಂತ್ರ' ಬಳಕೆ: ಬಿಜೆಪಿ ವಿರುದ್ಧ...

ಮಣಿಪುರ ಹಿಂಸಾಚಾರ, ಭ್ರಷ್ಟಾಚಾರ ವಿಚಾರಗಳಿಂದ ಗಮನ ಬೇರೆಡೆಗೆ ಸೆಳೆಯಲು ‘ಸನಾತನ ತಂತ್ರ’ ಬಳಕೆ: ಬಿಜೆಪಿ ವಿರುದ್ಧ ಸ್ಟಾಲಿನ್ ಕಿಡಿ

- Advertisement -
- Advertisement -

‘ಸನಾತನ ಧರ್ಮ’ದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ  ನೀಡಿದ್ದಕ್ಕೆ ಅವರ ವಿರುದ್ಧ ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಅವರು ಎಲ್ಲಾ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

”ಇದು ಮಣಿಪುರ ಹಿಂಸಾಚಾರ ಮತ್ತು ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸನಾತನದ ತಂತ್ರ ಬಳಸುತ್ತಿದ್ದಾರೆ” ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ನಾಲ್ಕು ಪುಟಗಳ ಪತ್ರವನ್ನು ಬಿಡುಗಡೆ ಮಾಡಿದ ಉದಯನಿಧಿ, ”ಪೆರಿಯಾರ್, ಅಣ್ಣಾ, ಕಲೈಂಜರ್ ಮತ್ತು ಪೆರಸಿರಿಯಾರ್ ಅವರ ಸಿದ್ಧಾಂತಗಳ ಗೆಲುವಿಗಾಗಿ ಕೆಲಸ ಮಾಡಲು ನಾವು ಸಂಕಲ್ಪ ಮಾಡೋಣ. ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ” ಎಂದು ಕರೆ ಕೊಟ್ಟಿದ್ದಾರೆ.

ಉತ್ತರ ಪ್ರದೇಶದ ರಾಂಪುರದಲ್ಲಿ ವಕೀಲರ ದೂರುಗಳ ನಂತರ ಉದಯನಿಧಿ ಮತ್ತು ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ ವಿರುದ್ಧಐಪಿಸಿ ಸೆಕ್ಷನ್ 153ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”’ಎಲ್ಲಾ ಜೀವಗಳು ಸಮಾನವಾಗಿ ಹುಟ್ಟುತ್ತವೆ’ ಎಂದು ಕಲಿಸುವ ಎಲ್ಲಾ ಧರ್ಮಗಳನ್ನು ನಾವು ಗೌರವಿಸುತ್ತೇವೆ. ಆದರೆ ಇವುಗಳ ಬಗ್ಗೆ ಕಿಂಚಿತ್ತೂ ತಿಳುವಳಿಕೆಯಿಲ್ಲದೆ, ಸಂಸತ್ ಚುನಾವಣೆಯನ್ನು ಎದುರಿಸಲು ಮೋದಿ ಅಂಡ್ ಟೀಮ್ ಇಂತಹ ಅಪಪ್ರಚಾರಗಳ ಮೇಲೆ ಮಾತ್ರ ಅವಲಂಬಿತರಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಒಂದೆಡೆ, ನನಗೆ ಅವರ ಬಗ್ಗೆ ಅನುಂಪ ಇದೆ. ಕಳೆದ 9 ವರ್ಷಗಳಿಂದ ಮೋದಿ ಏನೂ ಮಾಡುತ್ತಿಲ್ಲ. ಸಾಂದರ್ಭಿಕವಾಗಿ ಅವರು ಹಣದ ಅಮಾನ್ಯೀಕರಣವನ್ನು ಮಾಡುತ್ತಾರೆ. ಗುಡಿಸಲುಗಳನ್ನು ಮರೆಮಾಡಲು ಗೋಡೆಯನ್ನು ನಿರ್ಮಿಸುತ್ತಾರೆ. ಹೊಸ ಸಂಸತ್ತಿನ ಕಟ್ಟಡವನ್ನು ನಿರ್ಮಿಸುತ್ತಾರೆ, ಅಲ್ಲಿ ಸೆಂಗೋಲ್ ಅನ್ನು ನಿರ್ಮಿಸುತ್ತಾರೆ. ದೇಶದ ಹೆಸರನ್ನು ಬದಲಾಯಿಸುತ್ತಾರೆ” ಎಂದು ಟೀಕಿಸಿದ್ದಾರೆ.

”ನಿಶಸ್ತ್ರ, ಫ್ಯಾಸಿಸ್ಟ್ ಬಿಜೆಪಿ ಸರ್ಕಾರ”ವನ್ನು ಇಡೀ ದೇಶವೇ ಪ್ರಶ್ನಿಸುತ್ತಿದೆ. ಕಳೆದ 9 ವರ್ಷಗಳಿಂದ ನಿಮ್ಮ (ಬಿಜೆಪಿ) ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ. ನಮ್ಮ ಕಲ್ಯಾಣಕ್ಕಾಗಿ ನೀವು ಏನು ಮಾಡಿದ್ದೀರಿ? ” ಎಂದು ಪ್ರಶ್ನಿಸಿದ್ದಾರೆ.

ಸನಾತನ ಧರ್ಮದ ಹೇಳಿಕೆ:

ಕಳೆದ ವಾರ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಟೀಕಿಸಿದರು ಮತ್ತು ಅದು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಇದ್ದಂತೆ ಅದನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು” ಎಂದು ಕರೆ ನೀಡಿದ್ದರು.

ವಕೀಲರಾದ ಹರ್ಷ್ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಉದಯನಿಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಉದಯನಿಧಿ ಹೇಳಿಕೆಗಳು ನಮ್ಮ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರು ತಮ್ಮ ಭಾಷಣವನ್ನು ತಿರುಚಿದ್ದಾರೆ ಮತ್ತು ಅದನ್ನು ‘ಜನಾಂಗೀಯ ಹತ್ಯೆಗೆ ಪ್ರಚೋದನೆ’ ನೀಡಿದ್ದಾರೆ. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಸನಾತನ ಎನ್ನುವ ಪದವನ್ನು ಆಯುಧವಾಗಿ ಬಳಸುತ್ತಿದ್ದಾರೆ” ಎಂದು ಉದಯನಿಧಿ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...