Homeಮುಖಪುಟಮಣಿಪುರ ಹಿಂಸಾಚಾರ, ಭ್ರಷ್ಟಾಚಾರ ವಿಚಾರಗಳಿಂದ ಗಮನ ಬೇರೆಡೆಗೆ ಸೆಳೆಯಲು 'ಸನಾತನ ತಂತ್ರ' ಬಳಕೆ: ಬಿಜೆಪಿ ವಿರುದ್ಧ...

ಮಣಿಪುರ ಹಿಂಸಾಚಾರ, ಭ್ರಷ್ಟಾಚಾರ ವಿಚಾರಗಳಿಂದ ಗಮನ ಬೇರೆಡೆಗೆ ಸೆಳೆಯಲು ‘ಸನಾತನ ತಂತ್ರ’ ಬಳಕೆ: ಬಿಜೆಪಿ ವಿರುದ್ಧ ಸ್ಟಾಲಿನ್ ಕಿಡಿ

- Advertisement -
- Advertisement -

‘ಸನಾತನ ಧರ್ಮ’ದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ  ನೀಡಿದ್ದಕ್ಕೆ ಅವರ ವಿರುದ್ಧ ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಅವರು ಎಲ್ಲಾ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

”ಇದು ಮಣಿಪುರ ಹಿಂಸಾಚಾರ ಮತ್ತು ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸನಾತನದ ತಂತ್ರ ಬಳಸುತ್ತಿದ್ದಾರೆ” ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ನಾಲ್ಕು ಪುಟಗಳ ಪತ್ರವನ್ನು ಬಿಡುಗಡೆ ಮಾಡಿದ ಉದಯನಿಧಿ, ”ಪೆರಿಯಾರ್, ಅಣ್ಣಾ, ಕಲೈಂಜರ್ ಮತ್ತು ಪೆರಸಿರಿಯಾರ್ ಅವರ ಸಿದ್ಧಾಂತಗಳ ಗೆಲುವಿಗಾಗಿ ಕೆಲಸ ಮಾಡಲು ನಾವು ಸಂಕಲ್ಪ ಮಾಡೋಣ. ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ” ಎಂದು ಕರೆ ಕೊಟ್ಟಿದ್ದಾರೆ.

ಉತ್ತರ ಪ್ರದೇಶದ ರಾಂಪುರದಲ್ಲಿ ವಕೀಲರ ದೂರುಗಳ ನಂತರ ಉದಯನಿಧಿ ಮತ್ತು ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ ವಿರುದ್ಧಐಪಿಸಿ ಸೆಕ್ಷನ್ 153ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”’ಎಲ್ಲಾ ಜೀವಗಳು ಸಮಾನವಾಗಿ ಹುಟ್ಟುತ್ತವೆ’ ಎಂದು ಕಲಿಸುವ ಎಲ್ಲಾ ಧರ್ಮಗಳನ್ನು ನಾವು ಗೌರವಿಸುತ್ತೇವೆ. ಆದರೆ ಇವುಗಳ ಬಗ್ಗೆ ಕಿಂಚಿತ್ತೂ ತಿಳುವಳಿಕೆಯಿಲ್ಲದೆ, ಸಂಸತ್ ಚುನಾವಣೆಯನ್ನು ಎದುರಿಸಲು ಮೋದಿ ಅಂಡ್ ಟೀಮ್ ಇಂತಹ ಅಪಪ್ರಚಾರಗಳ ಮೇಲೆ ಮಾತ್ರ ಅವಲಂಬಿತರಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಒಂದೆಡೆ, ನನಗೆ ಅವರ ಬಗ್ಗೆ ಅನುಂಪ ಇದೆ. ಕಳೆದ 9 ವರ್ಷಗಳಿಂದ ಮೋದಿ ಏನೂ ಮಾಡುತ್ತಿಲ್ಲ. ಸಾಂದರ್ಭಿಕವಾಗಿ ಅವರು ಹಣದ ಅಮಾನ್ಯೀಕರಣವನ್ನು ಮಾಡುತ್ತಾರೆ. ಗುಡಿಸಲುಗಳನ್ನು ಮರೆಮಾಡಲು ಗೋಡೆಯನ್ನು ನಿರ್ಮಿಸುತ್ತಾರೆ. ಹೊಸ ಸಂಸತ್ತಿನ ಕಟ್ಟಡವನ್ನು ನಿರ್ಮಿಸುತ್ತಾರೆ, ಅಲ್ಲಿ ಸೆಂಗೋಲ್ ಅನ್ನು ನಿರ್ಮಿಸುತ್ತಾರೆ. ದೇಶದ ಹೆಸರನ್ನು ಬದಲಾಯಿಸುತ್ತಾರೆ” ಎಂದು ಟೀಕಿಸಿದ್ದಾರೆ.

”ನಿಶಸ್ತ್ರ, ಫ್ಯಾಸಿಸ್ಟ್ ಬಿಜೆಪಿ ಸರ್ಕಾರ”ವನ್ನು ಇಡೀ ದೇಶವೇ ಪ್ರಶ್ನಿಸುತ್ತಿದೆ. ಕಳೆದ 9 ವರ್ಷಗಳಿಂದ ನಿಮ್ಮ (ಬಿಜೆಪಿ) ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ. ನಮ್ಮ ಕಲ್ಯಾಣಕ್ಕಾಗಿ ನೀವು ಏನು ಮಾಡಿದ್ದೀರಿ? ” ಎಂದು ಪ್ರಶ್ನಿಸಿದ್ದಾರೆ.

ಸನಾತನ ಧರ್ಮದ ಹೇಳಿಕೆ:

ಕಳೆದ ವಾರ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಟೀಕಿಸಿದರು ಮತ್ತು ಅದು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಇದ್ದಂತೆ ಅದನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು” ಎಂದು ಕರೆ ನೀಡಿದ್ದರು.

ವಕೀಲರಾದ ಹರ್ಷ್ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಉದಯನಿಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಉದಯನಿಧಿ ಹೇಳಿಕೆಗಳು ನಮ್ಮ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರು ತಮ್ಮ ಭಾಷಣವನ್ನು ತಿರುಚಿದ್ದಾರೆ ಮತ್ತು ಅದನ್ನು ‘ಜನಾಂಗೀಯ ಹತ್ಯೆಗೆ ಪ್ರಚೋದನೆ’ ನೀಡಿದ್ದಾರೆ. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಸನಾತನ ಎನ್ನುವ ಪದವನ್ನು ಆಯುಧವಾಗಿ ಬಳಸುತ್ತಿದ್ದಾರೆ” ಎಂದು ಉದಯನಿಧಿ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...